AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶ (ತಿದ್ದುಪಡಿ) ಕಾಯ್ದೆ ಜಾರಿ; ಇನ್ನು ಮೇಲೆ ದೆಹಲಿ ಸರ್ಕಾರವೆಂದರೆ ಲೆಫ್ಟಿನೆಂಟ್ ಗವರ್ನರ್!

ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶ (ತಿದ್ದುಪಡಿ) ಕಾಯ್ದೆ 2021ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಅವರು ಮಾರ್ಚ್​ 28 ರಂದು ಅನುಮೋದನೆ ನೀಡಿದ್ದರು.

ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶ (ತಿದ್ದುಪಡಿ) ಕಾಯ್ದೆ ಜಾರಿ; ಇನ್ನು ಮೇಲೆ ದೆಹಲಿ ಸರ್ಕಾರವೆಂದರೆ ಲೆಫ್ಟಿನೆಂಟ್ ಗವರ್ನರ್!
ದೆಹಲಿ ಎಲ್​ಜಿ ಅನಿಲ್ ಬೈಜಲ್ ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on:Apr 29, 2021 | 1:08 PM

Share

ನವದೆಹಲಿ: ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶ (ತಿದ್ದುಪಡಿ) ಕಾಯ್ದೆ ಏಪ್ರಿಲ್ 27ರಿಂದ ಜಾರಿಗೆ ಬಂದಿದ್ದು ಇನ್ನು ಮೇಲೆ ದೆಹಲಿ ಸರ್ಕಾರವೆಂದರೆ ಲೆಫ್ಟಿನೆಂಟ್ ಗವರ್ನರ್ ಅಂತ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಗೃಹಖಾತೆ ಸಚಿವಾಲಯದ ಸೂಚನೆಯೊಂದರ ಪ್ರಕಾರ ಕೇಂದ್ರ ಸರ್ಕಾರವು ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶ (ತಿದ್ದುಪಡಿ) ಕಾಯ್ದೆ ಏಪ್ರಿಲ್ 27ರಿಂದ ಜಾರಿಗೆ ಬರಲು ಏಪ್ರಿಲ್ 27ನೇ ತಾರೀಖನ್ನು ನಿಗದಿ ಮಾಡಿತ್ತು.

‘ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶ (ತಿದ್ದುಪಡಿ) ಕಾಯ್ದೆ 2021 (2021ರ 15)ರ ಸೆಕ್ಷನ್ 1 ರ ಉಪ-ವಿಭಾಗ (2) ದಿಂದ ಕೊಡಮಾಡಲ್ಪಡುವ ಅಧಿಕಾರಗಳನ್ನು ಬಳಸಿ ಕೇಂದ್ರ ಸರ್ಕಾರವು ಏಪ್ರಿಲ್ 27 ತಾರೀಖನ್ನು ಈ ಕಾಯ್ದೆಯ ಪ್ರಾವಿಷನ್​ಗಳು ಜಾರಿಗೆ ಬರುವ ಹಾಗೆ ನಿಯುಕ್ತಿಗೊಳಿಸಿತ್ತು,’ ಎಂದು ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಗೋವಿಂದ ಮೋಹನ್ ಅವರಿ ಸಹಿ ಮಾಡಿರುವ ನೋಟಿಫಿಕೇಶನ್ ಸೂಚಿಸುತ್ತದೆ.

ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶ (ತಿದ್ದುಪಡಿ) ಕಾಯ್ದೆ 2021ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಅವರು ಮಾರ್ಚ್​ 28 ರಂದು ಅನುಮೋದನೆ ನೀಡಿದ್ದರು.

ಮಾರ್ಚ್ 24 ರಂದು ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶ (ತಿದ್ದುಪಡಿ) ಕಾಯ್ದೆ 2021 ಅನ್ನು ರಾಜ್ಯಸಭೆಯಲ್ಲಿ ಪಾಸು ಮಾಡಲಾಗಿತ್ತು. ಅದನ್ನು ವಿರೋಧಿಸಿ ಕಾಂಗ್ರೆಸ್, ಆಪ್ ಮತ್ತು ಇತರ ವಿರೋಧ ಪಕ್ಷಗಳು ಸದನದಿಂದ ವಾಕ್​ಔಟ್​ ಮಾಡಿದ್ದವು. ಈ ಮಸೂದೆಯು ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶ (ತಿದ್ದುಪಡಿ) ಕಾಯ್ದೆ 1991ರನ್ನು ತಿದ್ದುಪಡಿ ಮಾಡಿದೆ.

ತಿದ್ದುಪಡಿ ಕಾಯ್ದೆ ಅನುಸಾರ ಕೇಂದ್ರಾಡಳಿತ ಪ್ರದೇಶದ ಶಾಸಕಾಂಗ ಸಭೆಯಲ್ಲಿ ಉಲ್ಲೇಖಿಸಲ್ಪಡುವ ಯಾವುದೇ ಕಾನೂನಿನಲ್ಲಿ ದೆಹಲಿ ಸರ್ಕಾರ ಅಂತ ಹೇಳುವುದರ ಅರ್ಥ ಲೆಫ್ಟಿನೆಂಟ್​ ಗವರ್ನರ್ ಆಗಿರುತ್ತದೆ. ಖ್ಯಾತ ಪತ್ರಿಕೆಯೊಂದರಲ್ಲಿ ಗೃಹಖಾತೆಯ ರಾಜ್ಯ ಸಚಿವ ಜಿ.ಕೃಷ್ಣಾರೆಡ್ಡಿ ಬರೆದಿರುವ ಲೇಖನದಲ್ಲಿ ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶ (ತಿದ್ದುಪಡಿ) ಕಾಯ್ದೆ ದೆಹಲಿಯಲ್ಲಿ ಲೆಫ್ಟಿನೆಂಟ್​ ಗವರ್ನರ್ ಅವರ ಪಾತ್ರವನ್ನು ಸ್ಪಷ್ಟೀಕರಿಸುತ್ತದೆ ಮತ್ತು ಕೇಂದ್ರ ಹಾಗೂ ಕೇಂದ್ರಾಡಳಿತ ಪ್ರದೇಶದ ನಡುವೆ ಉತ್ತಮ ಸಾಮರಸ್ಯ ಏರ್ಪಡಲು ನೆರವಾಗುತ್ತದೆ ಎಂದು ಹೇಳಿದ್ದಾರೆ.

‘ಕಾಯ್ದೆಗೆ ಈಗ ರಾಷ್ಟ್ರಪತಿಗಳ ಅನುಮೋದನೆ ಸಿಕ್ಕಿರುವುದರಿಂದ ಲೆಫ್ಟಿನೆಂಟ್​ ಗವರ್ನರ್ ಹೆಚ್ಚು ಹೊಣೆಗಾರಿಕೆ ಹೊಂದಿದ್ದಾರೆ ಎನ್ನುವುದನ್ನು ನಾವು ಖಾತರಿಪಡಿಸಬೇಕಾಗುತ್ತದೆ. ಶಾಸಕಾಂಗದ ಪ್ರಸ್ತಾವನೆಗಳನ್ನು ಮತ್ತು ಆಡಳಿತಾತ್ಮಕ ವಿಷಯಗಳನ್ನು ಲೆಫ್ಟಿನೆಂಟ್​ ಗವರ್ನರ್ ಅವರ ಸುಪರ್ದಿಗೆ ತಂದಾಗ ಅವರು ನಿರ್ಧಾರಗಳನ್ನು ತೆಗೆದುಕೊಳ್ಳಲು ಹೆಚ್ಚಿನ ಕಾಲಾವಕಾಶ ನೀಡುವ ಮೂಲಕ ಇದನ್ನು ಮಾಡಬಹದಾಗಿದೆ,’ ಎಂದು ಅವರ ತಮ್ಮ ಲೇಖನದಲ್ಲಿ ಬರೆದಿದ್ದಾರೆ.

ಕೇಂದ್ರ ಸರ್ಕಾರ ಮತ್ತು ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶಗಳ ನಡುವೆ ಸಂಪೂರ್ಣ ಸಾಮರಸ್ಯದ ಅವಶ್ಯಕತೆಯ ಬಗ್ಗೆ ಒತ್ತಿ ಹೇಳಿರುವ ರೆಡ್ಡಿ ಅವರು ಶಾಸಕಾಂಗ ವಿಷಯಗಳಿಗೆ ಸಂಬಂಧಿಸಿದಂತೆ ಎರಡರ ಮಧ್ಯೆ ಅತಿಕ್ರಮಣದಂಥ ಸಂಗತಿ ಉದ್ಭವಿಸಬಾರದು ಎಂದಿದ್ದಾರೆ

ಇದನ್ನೂ ಓದಿ: #DelhiNeedsOxygen: ದೆಹಲಿಯ ಕುಸಿದ ಆರೋಗ್ಯ ವ್ಯವಸ್ಥೆ ಪಂಡಿತ್ ರಾಜನ್ ಮಿಶ್ರಾರ ಬಲಿ ಪಡೆಯಿತೇ?

Published On - 12:10 am, Thu, 29 April 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!