AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಕ್ಕುವ ಹೇಮಮಾಲಿನಿ ಹೇಳಿಕೆ; ಕಾಂಗ್ರೆಸ್ ಸಂಸದ ಸುರ್ಜೆವಾಲ ವಿರುದ್ಧ ಮಹಿಳಾ ಆಯೋಗ ಸುಮೋಟೊ ಕೇಸ್ ದಾಖಲು

National Commission for Women Registers suo moto case against Surjewala; ಬಿಜೆಪಿ ಸಂಸದೆ ಹೇಮಮಾಲಿನಿ ವಿರುದ್ಧ ತುಚ್ಛವಾಗಿ ಮಾತನಾಡಿದ್ದರೆನ್ನಲಾದ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ ಸುಮೊಟೋ ಕೇಸ್ ದಾಖಲು ಮಾಡಿಕೊಂಡಿದೆ. ಯಾವುದೋ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಸುರ್ಜೆವಾಲ ಅವರು ಹೇಮಮಾಲಿನಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡುತ್ತಿರುವ ವಿಡಿಯೋ ತುಣುಕೊಂದನ್ನು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ನೆಕ್ಕುವ ಹೇಮಮಾಲಿನಿ ಹೇಳಿಕೆ; ಕಾಂಗ್ರೆಸ್ ಸಂಸದ ಸುರ್ಜೆವಾಲ ವಿರುದ್ಧ ಮಹಿಳಾ ಆಯೋಗ ಸುಮೋಟೊ ಕೇಸ್ ದಾಖಲು
ರಣದೀಪ್ ಸಿಂಗ್ ಸುರ್ಜೆವಾಲ, ಹೇಮಮಾಲಿನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 04, 2024 | 5:34 PM

Share

ನವದೆಹಲಿ, ಏಪ್ರಿಲ್ 4: ಮಥುರಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದೆ ಹಾಗೂ ನಟಿ ಹೇಮಮಾಲಿನಿ (Hema Malini) ವಿರುದ್ಧ ಕಾಂಗ್ರೆಸ್ ಮುಖಂಡ ಹಾಗೂ ಸಂಸದ ರಣದೀಪ್ ಸಿಂಗ್ ಸುರ್ಜೆವಾಲ (Randeep Singh Surjewala) ಅವಹೇಳನಕಾರಿ ಮಾತುಗಳನ್ನಾಡಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸುಮೊಟೊ ಕೇಸ್ ದಾಖಲಿಸಿದೆ. ಇದೇ ವೇಳೆ ಇದೇ ಪ್ರಕರಣ ಸಂಬಂಧ ಹರಿಯಾಣದ ರಾಜ್ಯ ಮಹಿಳಾ ಆಯೋಗ ಕೂಡ ಸುರ್ಜೆವಾಲಗೆ ನೋಟೀಸ್ ಜಾರಿ ಮಾಡಿದೆ. ಹರ್ಯಾಣದ ಒಂದು ಕಾರ್ಯಕ್ರಮದಲ್ಲಿ ರಣದೀಪ್ ಸುರ್ಜೆವಾಲ ಅವರು ಮಾತನಾಡಿರುವ ವಿಡಿಯೋವೊಂದನ್ನು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಶೇರ್ ಮಾಡಿದ್ದರು. ಇದು ಮಹಿಳೆಯರನ್ನು ತುಚ್ಛವಾಗಿ ಕಾಣುವ ರಾಹುಲ್ ಗಾಂಧಿಯ ಕಾಂಗ್ರೆಸ್ ಎಂದು ಮಾಳವೀಯ ಕಿಡಿಕಾರಿದ್ದರು.

‘ರಣದೀಪ್ ಸುರ್ಜೆವಾಲ ಅವರಿಂದ ಬಂದ ಅವಹೇಳನಕಾರಿ ಹೇಳಿಕೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ ಬಲವಾಗಿ ಖಂಡಿಸುತ್ತದೆ. ಮಹಿಳೆಯ ಘನತೆಗೆ ಕುಂದು ತರುವಂತಿದೆ ಈ ಹೇಳಿಕೆ. ಎನ್​ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ಅವರು ಮುಖ್ಯ ಚುನಾವಣಾ ಆಯುಕ್ತರಿಗೆ ಅಧಿಕೃತವಾಗಿ ಪತ್ರ ಬರೆದಿದ್ದು, ಸುರ್ಜೆವಾಲ ವಿರುದ್ದ ತತ್​ಕ್ಷಣವೇ ಕ್ರಮ ಜಾರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಕ್ರಮ ಕೈಗೊಂಡ ವರದಿಯನ್ನು ಮೂರು ದಿನದಲ್ಲಿ ಸಲ್ಲಿಸಬೇಕೆಂದು ಮನವಿ ಮಾಡಿದ್ದಾರೆ,’ ಎಂದು ಮಹಿಳಾ ಆಯೋಗ ಗುರುವಾರ (ಏ. 4) ಹೇಳಿಕೆ ಬಿಡುಗಡೆ ಮಾಡಿದೆ.

‘ಶಾಸಕರು, ಸಂಸದರನ್ನು ಯಾಕೆ ಆರಿಸಿ ಕಳುಹಿಸಲಾಗುತ್ತದೆ? ನಮ್ಮ ಧ್ವನಿಯಾಗಲಿ, ನಮ್ಮ ವಿಚಾರ ಒಪ್ಪಿಸಲಿ ಎಂದು ಅವರನ್ನು ಆರಿಸಿ ಕಳುಹಿಸುತ್ತೇವೆ. ಹೇಮ ಮಾಲಿನಿಯಂತೆ ನೆಕ್ಕಲು ಕಳುಹಿಸಲಾಗುತ್ತದಾ?’ ಎಂದು ರಣದೀಪ್ ಸುರ್ಜೆವಾಲ ಹೇಳಿರುವ ವಿಡಿಯೋವನ್ನು ಅಮಿತ್ ಮಾಳವೀಯ ಹಂಚಿಕೊಂಡಿದ್ದರು. ಮಹಿಳೆಯರನ್ನು ಇಷ್ಟು ತುಚ್ಛವಾಗಿ ಯಾರು ಆಲೋಚಿಸುತ್ತಾರೆ. ಇದೇ ಸುರ್ಜೆವಾಲರ ಸಹೋದ್ಯೋಗಿಯು ಬಿಜೆಪಿ ನಾಯಕಿಯ ರೇಟ್ ಕೇಳುತ್ತಿದ್ದರು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಅಮೇಥಿ ಆಯ್ತು, ವಯನಾಡ್​ನಲ್ಲೂ ವಂಚಿಸ್ತಾರೆ: ರಾಹುಲ್ ಗಾಂಧಿಯನ್ನು ಕುಟುಕಿದ ಸ್ಮೃತಿ ಇರಾನಿ

ಇದು ತಿರುಚಿದ ವಿಡಿಯೋ ಎಂದು ಸುರ್ಜೆವಾಲ ಸ್ಪಷ್ಟನೆ

ಇದೇ ವೇಳೆ, ರಣದೀಪ್ ಸಿಂಗ್ ಸುರ್ಜೆವಾಲ ಅವರು ಅಮಿತ್ ಮಾಳವೀಯ ಹಂಚಿಕೊಂಡಿರುವ ವಿಡಿಯೋವನ್ನು ತಿರುಚಲಾಗಿದೆ ಎಂದು ಹೇಳಿದ್ದಾರೆ. ತಾನು ಹೇಮಮಾಲಿನಿ ಬಗ್ಗೆ ಕೆಟ್ಟದಾಗಿ ಮಾತನಾಡಿಲ್ಲ. ತಮ್ಮ ಮಾತುಗಳನ್ನು ವಿಡಿಯೋದಲ್ಲಿ ಎಡಿಟ್ ಮಾಡಿ ತಿರುಚಲಾಗಿದೆ ಎಂದಿರುವ ಅವರು, ತಾನು ಹೇಮಮಾಲಿನಿಯನ್ನು ಗೌರವಿಸುವುದಾಗಿ ಅದೇ ಕಾರ್ಯಕ್ರಮದಲ್ಲಿ ಹೇಳಿದ್ದ ವಿಡಿಯೋ ತುಣುಕೊಂದನ್ನು ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?