AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಇ, ಕತಾರ್ ಇಂದು ಭಾರತವನ್ನು ಗೌರವಿಸುತ್ತಿದೆ, ಇದು ಪ್ರತಿಯೊಬ್ಬರಿಗೂ ಸಂದ ಮನ್ನಣೆ: ಮೋದಿ

ಹರ್ಯಾಣದ ರೇವಾರಿಯಲ್ಲಿ ಶುಕ್ರವಾರ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಬೇಕಿತ್ತು. ಇಂದು ಇದು ನಿಜವಾಗಿದೆ, ಕಾಂಗ್ರೆಸ್ ಎಂದಿಗೂ ದೇವಾಲಯವನ್ನು ಬಯಸುವುದಿಲ್ಲ ಏಕೆಂದರೆ ಅವರಿಗೆ ಭಗವಾನ್ ರಾಮನು ಕಾಲ್ಪನಿಕನಾಗಿದ್ದಾನೆ. ಆದರೆ ಇಂದು ಅವರೂ ಜೈ ಸಿಯಾ ರಾಮ್ ಹೇಳುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವುದನ್ನು ಕಾಂಗ್ರೆಸ್ ತಡೆದಿದೆ ಎಂದಿದ್ದಾರೆ

ಯುಎಇ, ಕತಾರ್ ಇಂದು ಭಾರತವನ್ನು ಗೌರವಿಸುತ್ತಿದೆ, ಇದು ಪ್ರತಿಯೊಬ್ಬರಿಗೂ ಸಂದ ಮನ್ನಣೆ: ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Feb 16, 2024 | 3:37 PM

Share

ರೇವಾರಿ ಫೆಬ್ರುವರಿ 16: ಹರ್ಯಾಣದ (Haryana) ರೇವಾರಿಯಲ್ಲಿ (Rewari) ಶುಕ್ರವಾರ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಈ ಬಾರಿ ಎನ್‌ಡಿಎ 400 ಸ್ಥಾನಗಳನ್ನು ದಾಟಲಿದೆ, ನಮ್ಮ ಸರ್ಕಾರ ಮೂರನೇ ಅವಧಿಗೆ ಬರಲಿದೆ ಎಂದು ಹೇಳಿದ್ದಾರೆ. ತಮ್ಮ ಇತ್ತೀಚಿನ ಯುಎಇ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಯುಎಇ ಮತ್ತು ಕತಾರ್ ಇಂದು ಭಾರತವನ್ನು ಗೌರವಿಸುತ್ತದೆ. ಈ ಗೌರವ ಪ್ರಧಾನಿಗೆ ಮಾತ್ರವಲ್ಲ, ದೇಶ ಮತ್ತು ಪ್ರತಿಯೊಬ್ಬ ನಾಗರಿಕನಿಗೂ ಸಂದ ಗೌರವವಾಗಿದೆ ಎಂದು ಹೇಳಿದರು.

ದೇಶಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಬೇಕಿತ್ತು. ಇಂದು ಇದು ನಿಜವಾಗಿದೆ, ಕಾಂಗ್ರೆಸ್ ಎಂದಿಗೂ ದೇವಾಲಯವನ್ನು ಬಯಸುವುದಿಲ್ಲ ಏಕೆಂದರೆ ಅವರಿಗೆ ಭಗವಾನ್ ರಾಮನು ಕಾಲ್ಪನಿಕನಾಗಿದ್ದಾನೆ. ಆದರೆ ಇಂದು ಅವರೂ ಜೈ ಸಿಯಾ ರಾಮ್ ಹೇಳುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವುದನ್ನು ಕಾಂಗ್ರೆಸ್ ತಡೆದಿದೆ. ನಾನು ಅದನ್ನು ರದ್ದುಗೊಳಿಸುತ್ತೇನೆ ಎಂದು ನಾನು ಭರವಸೆ ನೀಡಿದ್ದೆ ಇಂದು ಇದು ಇತಿಹಾಸ” ಎಂದು ಪ್ರಧಾನಿ ಮೋದಿ ಹೇಳಿದರು.

ಈಗ ಎಲ್ಲರೂ ಹೇಳುತ್ತಿದ್ದಾರೆ, 370ನೇ ವಿಧಿಯನ್ನು ತೆಗೆದುಹಾಕಿದ್ದವರು ಚುನಾವಣೆಯಲ್ಲಿ 370 ಸ್ಥಾನಗಳನ್ನು ಪಡೆಯುತ್ತಾರೆ. ಬಿಜೆಪಿ 370 ಸ್ಥಾನಗಳನ್ನು ಪಡೆಯಲಿದೆ ಮತ್ತು ಎನ್‌ಡಿಎ 400 ದಾಟಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಕತಾರ್ ಇತ್ತೀಚೆಗೆ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಯನ್ನು ಬಿಡುಗಡೆ ಮಾಡಿದೆ. ಭಾರತದ ಮನವಿಯನ್ನು ಸ್ವೀಕರಿಸಿದ ಕತಾರ್, ಮಾಜಿ ನಾವಿಕರ ಮರಣದಂಡನೆಯನ್ನು ವಿವಿಧ ಅವಧಿಯ ಜೈಲುಶಿಕ್ಷೆಯಾಗಿ ಪರಿವರ್ತಿಸಲಾಯಿತು. ಕತಾರ್ ಮಾಜಿ ನಾವಿಕರನ್ನು ಬಿಡುಗಡೆ ಮಾಡಿದ ನಂತರ, ನರೇಂದ್ರ ಮೋದಿ ಕತಾರ್‌ಗೆ ಭೇಟಿ ನೀಡಿದರು. ಅಲ್ಲಿ ಮೋದಿ ಕತಾರ್ ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರಿಗೆ ಧನ್ಯವಾದ ತಿಳಿಸಿದ್ದರು.

ಇದನ್ನೂ ಓದಿ: In Pics: ಅಬುಧಾಬಿಯಲ್ಲಿ BAPS ಹಿಂದೂ ದೇಗುಲ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಎಲ್ಲರೂ ಕಾಂಗ್ರೆಸ್ ತೊರೆಯುತ್ತಿದ್ದಾರೆ

ಕಾಂಗ್ರೆಸ್‌ನ ಪರಿಸ್ಥಿತಿ ಬಗ್ಗೆ ವಿಷಾದ ವ್ಯಕ್ತಪಡಿಸಿದ ನರೇಂದ್ರ ಮೋದಿ, ಕಾಂಗ್ರೆಸ್ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ದಾಖಲೆಯನ್ನು ಹೊಂದಿದೆ. ಇದು ವರ್ಷಗಳಿಂದ ಬದಲಾಗಿಲ್ಲ. ಏಕೆಂದರೆ ನಾಯಕರು ಅವರೇ ಮತ್ತು ಅವರು ಒಂದೇ ಕುಟುಂಬಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. “ಕಾಂಗ್ರೆಸ್ ನಾಯಕರು ಸ್ಟಾರ್ಟಪ್ ಅನ್ನು ಸಹ ನಿಭಾಯಿಸಲು ಸಾಧ್ಯವಿಲ್ಲ ಮತ್ತು ಅವರು ದೇಶವನ್ನು ನಿಭಾಯಿಸಲು ಯೋಚಿಸುತ್ತಾರೆ. ಅವರ ಎಲ್ಲಾ ನಾಯಕರು ಒಬ್ಬೊಬ್ಬರಾಗಿ ಪಕ್ಷವನ್ನು ತೊರೆಯುತ್ತಿದ್ದಾರೆ. ಕಾಂಗ್ರೆಸ್ ವರ್ಷಗಳ ದುರಾಡಳಿತಕ್ಕೆ ವ್ಯತಿರಿಕ್ತವಾಗಿ, ನಾವು ಬಿಜೆಪಿಯ ಉತ್ತಮ ಆಡಳಿತವನ್ನು ಹೊಂದಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್