AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2029ರಲ್ಲೂ ಎನ್​ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತೆ, ಮೋದಿಯೇ ಪ್ರಧಾನಿ: ಅಮಿತ್​ ಶಾ

ಪ್ರತಿಪಕ್ಷಗಳು ಏನು ಬೇಕಾದರೂ ಮಾಡಲಿ. 2029ರಲ್ಲಿ ದೇಶದಲ್ಲಿ ಮತ್ತೆ ಎನ್​ಡಿಎ ಸರ್ಕಾರ ಬರಲಿದೆ. ಮತ್ತೆ ಮೋದಿಯೇ ಬರುತ್ತಾರೆಂದು ಅವರಿಗೆ ಗೊತ್ತಿಲ್ಲ ಎಂದು ಪ್ರತಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್​ ಶಾ ತಿರುಗೇಟು ನೀಡಿದ್ದಾರೆ. ವಿಪಕ್ಷದಲ್ಲಿ ಕೂರಲು ಇಂಡಿಯಾ ಬಣ ತಯಾರಾಗಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.

2029ರಲ್ಲೂ ಎನ್​ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತೆ, ಮೋದಿಯೇ ಪ್ರಧಾನಿ: ಅಮಿತ್​ ಶಾ
2029ರಲ್ಲೂ ಎನ್​ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತೆ, ಮೋದಿಯೇ ಪ್ರಧಾನಿ: ಅಮಿತ್​ ಶಾ
ಗಂಗಾಧರ​ ಬ. ಸಾಬೋಜಿ
|

Updated on: Aug 04, 2024 | 10:57 PM

Share

ಚಂಡೀಗಢ, ಆಗಸ್ಟ್​ 04: 2029ರ ಚುನಾವಣೆಯಲ್ಲೂ ಎನ್​ಡಿಎ ಗೆಲುವು ಸಾಧಿಸುತ್ತೆ. ನರೇಂದ್ರ ಮೋದಿಯೇ (Narendra Modi) ಪ್ರಧಾನಿ ಆಗುತ್ತಾರೆ ಎಂದು ಪ್ರತಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್​ ಶಾ (Amit Shah) ತಿರುಗೇಟು ನೀಡಿದ್ದಾರೆ. ಮಣಿಮಜ್ರಾ ಪ್ರದೇಶದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ 24×7 ನೀರಿನ ಯೋಜನೆಗೆ ಚಾಲನೆ  ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಸರ್ಕಾರದ ಬಲ ಪ್ರಶ್ನಿಸಿದ್ದಕ್ಕೆ  2029ರಲ್ಲಿ ಮತ್ತೆ ಎನ್​ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತೆ. ವಿಪಕ್ಷದಲ್ಲಿ ಕೂರಲು ಇಂಡಿಯಾ ಬಣ ತಯಾರಾಗಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.

ಪ್ರತಿಪಕ್ಷಗಳು ಏನು ಬೇಕಾದರೂ ಮಾಡಲಿ. 2029ರಲ್ಲಿ ದೇಶದಲ್ಲಿ ಮತ್ತೆ ಎನ್​ಡಿಎ ಸರ್ಕಾರ ಬರಲಿದೆ. ಮತ್ತೆ ಮೋದಿಯೇ ಬರುತ್ತಾರೆಂದು ಅವರಿಗೆ ಗೊತ್ತಿಲ್ಲ ಎಂದು ಪ್ರತಿಪಕ್ಷಗಳಿಗೆ ಶಾ ತಿರುಗೇಟು ನೀಡಿದ್ದಾರೆ.

ಪಿಟಿಐ ಟ್ವೀಟ್​

24 ಗಂಟೆಯೂ ನೀರು ಲಭ್ಯ

24×7 ನೀರು ಈ ಯೋಜನೆಯಿಂದ ಇದೀಗ ಮಣಿಮಜ್ರಾ ಜನತೆಗೆ 24 ಗಂಟೆ ನೀರು ಸಿಗಲಿದೆ. ಜನರು ನೀರು ತರಲು ಅಲಾರಂ ಹಾಕುವ ಅಗತ್ಯವಿಲ್ಲ, ಈಗ ನೀವು ನಲ್ಲಿ ತಿರುಗಿಸಿದರೆ ಸಾಕು ನೀರು ಬರುತ್ತದೆ. ಈ ಯೋಜನೆಯಿಂದ ಮಣಿಮಜ್ರಾದ 1 ಲಕ್ಷ ಜನರಿಗೆ ಅವರ ಮನೆಗಳಲ್ಲಿ 24 ಗಂಟೆ ನೀರು ದೊರೆಯಲಿದೆ. ಈ ಯೋಜನೆಯನ್ನು ಮೋದಿ ಸರ್ಕಾರವು 13 ನವೆಂಬರ್ 2021 ರಂದು ಪ್ರಾರಂಭಿಸಿತು ಎಂದು ತಿಳಿಸಿದ್ದಾರೆ.

ಯೋಜನೆಯ ಉದ್ದೇಶವೇನು?

ಈ ಯೋಜನೆಯ ಉದ್ದೇಶವು ನೀರಿನ ವ್ಯರ್ಥವನ್ನು ತಡೆಗಟ್ಟುವುದು. ಇದು ಸ್ಮಾರ್ಟ್ ಮೀಟರಿಂಗ್, ಸೋರಿಕೆಯನ್ನು ತಡೆಗಟ್ಟುವಿಕೆಯನ್ನು ಒಳಗೊಂಡಿದೆ. ಹಂತ ಹಂತವಾಗಿ ಈ ಯೋಜನೆ ಆರಂಭವಾಗುತ್ತಿದ್ದು, ಇದರಲ್ಲಿ ಮಣಿಮಜ್ರಾನ ಜನತೆಗೆ ಮೊದಲು ನೀರು ಸಿಗಲಿದೆ. 2028ರ ವೇಳೆಗೆ ಇಡೀ ರಾಜ್ಯಕ್ಕೆ 24 ಗಂಟೆ ನೀರು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು