AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2029ರಲ್ಲೂ ಎನ್​ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತೆ, ಮೋದಿಯೇ ಪ್ರಧಾನಿ: ಅಮಿತ್​ ಶಾ

ಪ್ರತಿಪಕ್ಷಗಳು ಏನು ಬೇಕಾದರೂ ಮಾಡಲಿ. 2029ರಲ್ಲಿ ದೇಶದಲ್ಲಿ ಮತ್ತೆ ಎನ್​ಡಿಎ ಸರ್ಕಾರ ಬರಲಿದೆ. ಮತ್ತೆ ಮೋದಿಯೇ ಬರುತ್ತಾರೆಂದು ಅವರಿಗೆ ಗೊತ್ತಿಲ್ಲ ಎಂದು ಪ್ರತಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್​ ಶಾ ತಿರುಗೇಟು ನೀಡಿದ್ದಾರೆ. ವಿಪಕ್ಷದಲ್ಲಿ ಕೂರಲು ಇಂಡಿಯಾ ಬಣ ತಯಾರಾಗಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.

2029ರಲ್ಲೂ ಎನ್​ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತೆ, ಮೋದಿಯೇ ಪ್ರಧಾನಿ: ಅಮಿತ್​ ಶಾ
2029ರಲ್ಲೂ ಎನ್​ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತೆ, ಮೋದಿಯೇ ಪ್ರಧಾನಿ: ಅಮಿತ್​ ಶಾ
ಗಂಗಾಧರ​ ಬ. ಸಾಬೋಜಿ
|

Updated on: Aug 04, 2024 | 10:57 PM

Share

ಚಂಡೀಗಢ, ಆಗಸ್ಟ್​ 04: 2029ರ ಚುನಾವಣೆಯಲ್ಲೂ ಎನ್​ಡಿಎ ಗೆಲುವು ಸಾಧಿಸುತ್ತೆ. ನರೇಂದ್ರ ಮೋದಿಯೇ (Narendra Modi) ಪ್ರಧಾನಿ ಆಗುತ್ತಾರೆ ಎಂದು ಪ್ರತಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್​ ಶಾ (Amit Shah) ತಿರುಗೇಟು ನೀಡಿದ್ದಾರೆ. ಮಣಿಮಜ್ರಾ ಪ್ರದೇಶದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ 24×7 ನೀರಿನ ಯೋಜನೆಗೆ ಚಾಲನೆ  ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಸರ್ಕಾರದ ಬಲ ಪ್ರಶ್ನಿಸಿದ್ದಕ್ಕೆ  2029ರಲ್ಲಿ ಮತ್ತೆ ಎನ್​ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತೆ. ವಿಪಕ್ಷದಲ್ಲಿ ಕೂರಲು ಇಂಡಿಯಾ ಬಣ ತಯಾರಾಗಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.

ಪ್ರತಿಪಕ್ಷಗಳು ಏನು ಬೇಕಾದರೂ ಮಾಡಲಿ. 2029ರಲ್ಲಿ ದೇಶದಲ್ಲಿ ಮತ್ತೆ ಎನ್​ಡಿಎ ಸರ್ಕಾರ ಬರಲಿದೆ. ಮತ್ತೆ ಮೋದಿಯೇ ಬರುತ್ತಾರೆಂದು ಅವರಿಗೆ ಗೊತ್ತಿಲ್ಲ ಎಂದು ಪ್ರತಿಪಕ್ಷಗಳಿಗೆ ಶಾ ತಿರುಗೇಟು ನೀಡಿದ್ದಾರೆ.

ಪಿಟಿಐ ಟ್ವೀಟ್​

24 ಗಂಟೆಯೂ ನೀರು ಲಭ್ಯ

24×7 ನೀರು ಈ ಯೋಜನೆಯಿಂದ ಇದೀಗ ಮಣಿಮಜ್ರಾ ಜನತೆಗೆ 24 ಗಂಟೆ ನೀರು ಸಿಗಲಿದೆ. ಜನರು ನೀರು ತರಲು ಅಲಾರಂ ಹಾಕುವ ಅಗತ್ಯವಿಲ್ಲ, ಈಗ ನೀವು ನಲ್ಲಿ ತಿರುಗಿಸಿದರೆ ಸಾಕು ನೀರು ಬರುತ್ತದೆ. ಈ ಯೋಜನೆಯಿಂದ ಮಣಿಮಜ್ರಾದ 1 ಲಕ್ಷ ಜನರಿಗೆ ಅವರ ಮನೆಗಳಲ್ಲಿ 24 ಗಂಟೆ ನೀರು ದೊರೆಯಲಿದೆ. ಈ ಯೋಜನೆಯನ್ನು ಮೋದಿ ಸರ್ಕಾರವು 13 ನವೆಂಬರ್ 2021 ರಂದು ಪ್ರಾರಂಭಿಸಿತು ಎಂದು ತಿಳಿಸಿದ್ದಾರೆ.

ಯೋಜನೆಯ ಉದ್ದೇಶವೇನು?

ಈ ಯೋಜನೆಯ ಉದ್ದೇಶವು ನೀರಿನ ವ್ಯರ್ಥವನ್ನು ತಡೆಗಟ್ಟುವುದು. ಇದು ಸ್ಮಾರ್ಟ್ ಮೀಟರಿಂಗ್, ಸೋರಿಕೆಯನ್ನು ತಡೆಗಟ್ಟುವಿಕೆಯನ್ನು ಒಳಗೊಂಡಿದೆ. ಹಂತ ಹಂತವಾಗಿ ಈ ಯೋಜನೆ ಆರಂಭವಾಗುತ್ತಿದ್ದು, ಇದರಲ್ಲಿ ಮಣಿಮಜ್ರಾನ ಜನತೆಗೆ ಮೊದಲು ನೀರು ಸಿಗಲಿದೆ. 2028ರ ವೇಳೆಗೆ ಇಡೀ ರಾಜ್ಯಕ್ಕೆ 24 ಗಂಟೆ ನೀರು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ