2029ರಲ್ಲೂ ಎನ್​ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತೆ, ಮೋದಿಯೇ ಪ್ರಧಾನಿ: ಅಮಿತ್​ ಶಾ

ಪ್ರತಿಪಕ್ಷಗಳು ಏನು ಬೇಕಾದರೂ ಮಾಡಲಿ. 2029ರಲ್ಲಿ ದೇಶದಲ್ಲಿ ಮತ್ತೆ ಎನ್​ಡಿಎ ಸರ್ಕಾರ ಬರಲಿದೆ. ಮತ್ತೆ ಮೋದಿಯೇ ಬರುತ್ತಾರೆಂದು ಅವರಿಗೆ ಗೊತ್ತಿಲ್ಲ ಎಂದು ಪ್ರತಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್​ ಶಾ ತಿರುಗೇಟು ನೀಡಿದ್ದಾರೆ. ವಿಪಕ್ಷದಲ್ಲಿ ಕೂರಲು ಇಂಡಿಯಾ ಬಣ ತಯಾರಾಗಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.

2029ರಲ್ಲೂ ಎನ್​ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತೆ, ಮೋದಿಯೇ ಪ್ರಧಾನಿ: ಅಮಿತ್​ ಶಾ
2029ರಲ್ಲೂ ಎನ್​ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತೆ, ಮೋದಿಯೇ ಪ್ರಧಾನಿ: ಅಮಿತ್​ ಶಾ
Follow us
|

Updated on: Aug 04, 2024 | 10:57 PM

ಚಂಡೀಗಢ, ಆಗಸ್ಟ್​ 04: 2029ರ ಚುನಾವಣೆಯಲ್ಲೂ ಎನ್​ಡಿಎ ಗೆಲುವು ಸಾಧಿಸುತ್ತೆ. ನರೇಂದ್ರ ಮೋದಿಯೇ (Narendra Modi) ಪ್ರಧಾನಿ ಆಗುತ್ತಾರೆ ಎಂದು ಪ್ರತಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್​ ಶಾ (Amit Shah) ತಿರುಗೇಟು ನೀಡಿದ್ದಾರೆ. ಮಣಿಮಜ್ರಾ ಪ್ರದೇಶದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ 24×7 ನೀರಿನ ಯೋಜನೆಗೆ ಚಾಲನೆ  ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಸರ್ಕಾರದ ಬಲ ಪ್ರಶ್ನಿಸಿದ್ದಕ್ಕೆ  2029ರಲ್ಲಿ ಮತ್ತೆ ಎನ್​ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತೆ. ವಿಪಕ್ಷದಲ್ಲಿ ಕೂರಲು ಇಂಡಿಯಾ ಬಣ ತಯಾರಾಗಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.

ಪ್ರತಿಪಕ್ಷಗಳು ಏನು ಬೇಕಾದರೂ ಮಾಡಲಿ. 2029ರಲ್ಲಿ ದೇಶದಲ್ಲಿ ಮತ್ತೆ ಎನ್​ಡಿಎ ಸರ್ಕಾರ ಬರಲಿದೆ. ಮತ್ತೆ ಮೋದಿಯೇ ಬರುತ್ತಾರೆಂದು ಅವರಿಗೆ ಗೊತ್ತಿಲ್ಲ ಎಂದು ಪ್ರತಿಪಕ್ಷಗಳಿಗೆ ಶಾ ತಿರುಗೇಟು ನೀಡಿದ್ದಾರೆ.

ಪಿಟಿಐ ಟ್ವೀಟ್​

24 ಗಂಟೆಯೂ ನೀರು ಲಭ್ಯ

24×7 ನೀರು ಈ ಯೋಜನೆಯಿಂದ ಇದೀಗ ಮಣಿಮಜ್ರಾ ಜನತೆಗೆ 24 ಗಂಟೆ ನೀರು ಸಿಗಲಿದೆ. ಜನರು ನೀರು ತರಲು ಅಲಾರಂ ಹಾಕುವ ಅಗತ್ಯವಿಲ್ಲ, ಈಗ ನೀವು ನಲ್ಲಿ ತಿರುಗಿಸಿದರೆ ಸಾಕು ನೀರು ಬರುತ್ತದೆ. ಈ ಯೋಜನೆಯಿಂದ ಮಣಿಮಜ್ರಾದ 1 ಲಕ್ಷ ಜನರಿಗೆ ಅವರ ಮನೆಗಳಲ್ಲಿ 24 ಗಂಟೆ ನೀರು ದೊರೆಯಲಿದೆ. ಈ ಯೋಜನೆಯನ್ನು ಮೋದಿ ಸರ್ಕಾರವು 13 ನವೆಂಬರ್ 2021 ರಂದು ಪ್ರಾರಂಭಿಸಿತು ಎಂದು ತಿಳಿಸಿದ್ದಾರೆ.

ಯೋಜನೆಯ ಉದ್ದೇಶವೇನು?

ಈ ಯೋಜನೆಯ ಉದ್ದೇಶವು ನೀರಿನ ವ್ಯರ್ಥವನ್ನು ತಡೆಗಟ್ಟುವುದು. ಇದು ಸ್ಮಾರ್ಟ್ ಮೀಟರಿಂಗ್, ಸೋರಿಕೆಯನ್ನು ತಡೆಗಟ್ಟುವಿಕೆಯನ್ನು ಒಳಗೊಂಡಿದೆ. ಹಂತ ಹಂತವಾಗಿ ಈ ಯೋಜನೆ ಆರಂಭವಾಗುತ್ತಿದ್ದು, ಇದರಲ್ಲಿ ಮಣಿಮಜ್ರಾನ ಜನತೆಗೆ ಮೊದಲು ನೀರು ಸಿಗಲಿದೆ. 2028ರ ವೇಳೆಗೆ ಇಡೀ ರಾಜ್ಯಕ್ಕೆ 24 ಗಂಟೆ ನೀರು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ