AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2029ರಲ್ಲೂ ಎನ್​ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತೆ, ಮೋದಿಯೇ ಪ್ರಧಾನಿ: ಅಮಿತ್​ ಶಾ

ಪ್ರತಿಪಕ್ಷಗಳು ಏನು ಬೇಕಾದರೂ ಮಾಡಲಿ. 2029ರಲ್ಲಿ ದೇಶದಲ್ಲಿ ಮತ್ತೆ ಎನ್​ಡಿಎ ಸರ್ಕಾರ ಬರಲಿದೆ. ಮತ್ತೆ ಮೋದಿಯೇ ಬರುತ್ತಾರೆಂದು ಅವರಿಗೆ ಗೊತ್ತಿಲ್ಲ ಎಂದು ಪ್ರತಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್​ ಶಾ ತಿರುಗೇಟು ನೀಡಿದ್ದಾರೆ. ವಿಪಕ್ಷದಲ್ಲಿ ಕೂರಲು ಇಂಡಿಯಾ ಬಣ ತಯಾರಾಗಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.

2029ರಲ್ಲೂ ಎನ್​ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತೆ, ಮೋದಿಯೇ ಪ್ರಧಾನಿ: ಅಮಿತ್​ ಶಾ
2029ರಲ್ಲೂ ಎನ್​ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತೆ, ಮೋದಿಯೇ ಪ್ರಧಾನಿ: ಅಮಿತ್​ ಶಾ
ಗಂಗಾಧರ​ ಬ. ಸಾಬೋಜಿ
|

Updated on: Aug 04, 2024 | 10:57 PM

Share

ಚಂಡೀಗಢ, ಆಗಸ್ಟ್​ 04: 2029ರ ಚುನಾವಣೆಯಲ್ಲೂ ಎನ್​ಡಿಎ ಗೆಲುವು ಸಾಧಿಸುತ್ತೆ. ನರೇಂದ್ರ ಮೋದಿಯೇ (Narendra Modi) ಪ್ರಧಾನಿ ಆಗುತ್ತಾರೆ ಎಂದು ಪ್ರತಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್​ ಶಾ (Amit Shah) ತಿರುಗೇಟು ನೀಡಿದ್ದಾರೆ. ಮಣಿಮಜ್ರಾ ಪ್ರದೇಶದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ 24×7 ನೀರಿನ ಯೋಜನೆಗೆ ಚಾಲನೆ  ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಸರ್ಕಾರದ ಬಲ ಪ್ರಶ್ನಿಸಿದ್ದಕ್ಕೆ  2029ರಲ್ಲಿ ಮತ್ತೆ ಎನ್​ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತೆ. ವಿಪಕ್ಷದಲ್ಲಿ ಕೂರಲು ಇಂಡಿಯಾ ಬಣ ತಯಾರಾಗಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.

ಪ್ರತಿಪಕ್ಷಗಳು ಏನು ಬೇಕಾದರೂ ಮಾಡಲಿ. 2029ರಲ್ಲಿ ದೇಶದಲ್ಲಿ ಮತ್ತೆ ಎನ್​ಡಿಎ ಸರ್ಕಾರ ಬರಲಿದೆ. ಮತ್ತೆ ಮೋದಿಯೇ ಬರುತ್ತಾರೆಂದು ಅವರಿಗೆ ಗೊತ್ತಿಲ್ಲ ಎಂದು ಪ್ರತಿಪಕ್ಷಗಳಿಗೆ ಶಾ ತಿರುಗೇಟು ನೀಡಿದ್ದಾರೆ.

ಪಿಟಿಐ ಟ್ವೀಟ್​

24 ಗಂಟೆಯೂ ನೀರು ಲಭ್ಯ

24×7 ನೀರು ಈ ಯೋಜನೆಯಿಂದ ಇದೀಗ ಮಣಿಮಜ್ರಾ ಜನತೆಗೆ 24 ಗಂಟೆ ನೀರು ಸಿಗಲಿದೆ. ಜನರು ನೀರು ತರಲು ಅಲಾರಂ ಹಾಕುವ ಅಗತ್ಯವಿಲ್ಲ, ಈಗ ನೀವು ನಲ್ಲಿ ತಿರುಗಿಸಿದರೆ ಸಾಕು ನೀರು ಬರುತ್ತದೆ. ಈ ಯೋಜನೆಯಿಂದ ಮಣಿಮಜ್ರಾದ 1 ಲಕ್ಷ ಜನರಿಗೆ ಅವರ ಮನೆಗಳಲ್ಲಿ 24 ಗಂಟೆ ನೀರು ದೊರೆಯಲಿದೆ. ಈ ಯೋಜನೆಯನ್ನು ಮೋದಿ ಸರ್ಕಾರವು 13 ನವೆಂಬರ್ 2021 ರಂದು ಪ್ರಾರಂಭಿಸಿತು ಎಂದು ತಿಳಿಸಿದ್ದಾರೆ.

ಯೋಜನೆಯ ಉದ್ದೇಶವೇನು?

ಈ ಯೋಜನೆಯ ಉದ್ದೇಶವು ನೀರಿನ ವ್ಯರ್ಥವನ್ನು ತಡೆಗಟ್ಟುವುದು. ಇದು ಸ್ಮಾರ್ಟ್ ಮೀಟರಿಂಗ್, ಸೋರಿಕೆಯನ್ನು ತಡೆಗಟ್ಟುವಿಕೆಯನ್ನು ಒಳಗೊಂಡಿದೆ. ಹಂತ ಹಂತವಾಗಿ ಈ ಯೋಜನೆ ಆರಂಭವಾಗುತ್ತಿದ್ದು, ಇದರಲ್ಲಿ ಮಣಿಮಜ್ರಾನ ಜನತೆಗೆ ಮೊದಲು ನೀರು ಸಿಗಲಿದೆ. 2028ರ ವೇಳೆಗೆ ಇಡೀ ರಾಜ್ಯಕ್ಕೆ 24 ಗಂಟೆ ನೀರು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ