AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರ, ಒಡಿಶಾದಲ್ಲಿ ಎನ್​ಡಿಎಗೆ ಭರ್ಜರಿ ಗೆಲುವು; ಕಾಂಗ್ರೆಸ್​ಗೆ ಮುಖಭಂಗ

ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಬಿಹಾರದಿಂದ ಎಲ್ಲಾ 5 ರಾಜ್ಯಸಭಾ ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಅಡ್ಡ ಮತದಾನದ ನಂತರ ಒಡಿಶಾದಲ್ಲಿ 2 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿತು. ಬಿಹಾರದ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಗಳಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಕೂಡ ಇದ್ದರು. ಇಂದು ಸಂಜೆ ನಂತರ ಮತದಾನ ಮುಕ್ತಾಯವಾಯಿತು. ಎನ್‌ಡಿಎಗೆ ಸೇರಿದ ಎಲ್ಲಾ 202 ಶಾಸಕರು ಮತದಾನದಲ್ಲಿ ಭಾಗವಹಿಸಿದ್ದಾರೆ ಎಂದು ಮೈತ್ರಿಕೂಟದ ಮೂಲಗಳು ತಿಳಿಸಿವೆ.

ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರ, ಒಡಿಶಾದಲ್ಲಿ ಎನ್​ಡಿಎಗೆ ಭರ್ಜರಿ ಗೆಲುವು; ಕಾಂಗ್ರೆಸ್​ಗೆ ಮುಖಭಂಗ
Nitin Nabin Victory Celebrations
ಸುಷ್ಮಾ ಚಕ್ರೆ
|

Updated on:Mar 16, 2026 | 10:57 PM

Share

ನವದೆಹಲಿ, ಮಾರ್ಚ್ 16: ಬಿಹಾರದ ಎಲ್ಲಾ 5 ರಾಜ್ಯಸಭಾ ಸ್ಥಾನಗಳು ಹಾಗೂ ಒಡಿಶಾದಲ್ಲಿ 2 ಸ್ಥಾನಗಳಲ್ಲಿ ಎನ್​ಡಿಎ ಗೆಲುವು ಸಾಧಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇತರ ಮೂವರು NDA ಅಭ್ಯರ್ಥಿಗಳು ಇಂದು ರಾಜ್ಯದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Elections) ಗೆಲುವು ಸಾಧಿಸಿದ್ದಾರೆ. ಜೆಡಿಯು ಪಕ್ಷದ ಕೇಂದ್ರ ಸಚಿವ ರಾಮ್ ನಾಥ್ ಠಾಕೂರ್, ಬಿಜೆಪಿ ನಾಯಕ ಶಿವೇಶ್ ಕುಮಾರ್ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಅಧ್ಯಕ್ಷ ಉಪೇಂದ್ರ ಕುಶ್ವಾಹ ಕೂಡ ಜಯಗಳಿಸಿದ್ದಾರೆ.

10 ರಾಜ್ಯಗಳಾದ್ಯಂತ 37 ರಾಜ್ಯಸಭಾ ಸ್ಥಾನಗಳಿಗೆ ಇಂದು (ಮಾರ್ಚ್ 16) ಚುನಾವಣೆ ನಡೆದಿತ್ತು. ಹಲವಾರು ಹಾಲಿ ಸದಸ್ಯರ ಅವಧಿ ಏಪ್ರಿಲ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಹೀಗಾಗಿ, ಇಂದು ಮತದಾನ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಯಿತು. ಸಂಜೆ 4 ಗಂಟೆಯವರೆಗೆ ಮತದಾನ ನಡೆದಿತ್ತು. ಮತ ಎಣಿಕೆ ಇಂದು ಸಂಜೆ 5 ಗಂಟೆಗೆ ಪ್ರಾರಂಭವಾಗಿತ್ತು. ಚುನಾವಣೆಗೂ ಮೊದಲೇ 26 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಬಿಹಾರದಲ್ಲಿ 5, ಒಡಿಶಾದಲ್ಲಿ 4 ಮತ್ತು ಹರಿಯಾಣದಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದರು. ಪ್ರಮುಖ ಅಭ್ಯರ್ಥಿಗಳಲ್ಲಿ ಬಿಹಾರದ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಕೂಡ ಇದ್ದರು. ಅವರಿಬ್ಬರೂ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ; ಬಿಹಾರದಿಂದ ಪಕ್ಷದ ಮುಖ್ಯಸ್ಥ ನಿತಿನ್ ನಬಿನ್ ಕಣಕ್ಕೆ

ಜೆಡಿಯು ನಾಯಕ ನಿತೀಶ್ ಕುಮಾರ್ 44 ಶಾಸಕರಿಂದ ಮತಗಳನ್ನು ಪಡೆದರು. ನಿತಿನ್ ನಬಿನ್ 44 ಶಾಸಕರ ಬೆಂಬಲವನ್ನು ಪಡೆದರು. ರಾಷ್ಟ್ರೀಯ ಲೋಕ ಮೋರ್ಚಾ ನಾಯಕ ಉಪೇಂದ್ರ ಕುಶ್ವಾಹ ಶಾಸಕರಿಂದ 42 ಮತಗಳನ್ನು ಪಡೆದರು. ರಾಮನಾಥ್ ಠಾಕೂರ್ ಕೂಡ 42 ಶಾಸಕರ ಬೆಂಬಲವನ್ನು ಪಡೆದರು. ವಿರೋಧ ಪಕ್ಷದ ಮಹಾಘಟಬಂಧನ್ ಮತದಾನ ಪ್ರಕ್ರಿಯೆಯಲ್ಲಿ ಎಡವಿದ್ದು, ಕಾಂಗ್ರೆಸ್‌ನ ಮೂವರು ಶಾಸಕರು ಮತ್ತು ಆರ್‌ಜೆಡಿಯ ಒಬ್ಬರು ಮತದಾನಕ್ಕೆ ಗೈರುಹಾಜರಾಗಿದ್ದರು.

ಮಹಾರಾಷ್ಟ್ರದಲ್ಲಿ 7 ಸ್ಥಾನಗಳು, ತಮಿಳುನಾಡಿನಲ್ಲಿ 6, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 5, ಒಡಿಶಾದಲ್ಲಿ 4, ಅಸ್ಸಾಂನಲ್ಲಿ 3, ಹರಿಯಾಣ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ತಲಾ 2 ಮತ್ತು ಹಿಮಾಚಲ ಪ್ರದೇಶದಲ್ಲಿ 1 ಸ್ಥಾನಕ್ಕೆ ರಾಜ್ಯಸಭಾ ಚುನಾವಣೆ ನಡೆದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:41 pm, Mon, 16 March 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ