AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai rain: ಮುಂಬೈನಲ್ಲಿ ಭಾರೀ ಮಳೆ; ರಸ್ತೆ, ರೈಲು ಸಂಚಾರಕ್ಕೆ ಅಡಚಣೆ

ಭಾರತೀಯ ಹವಾಮಾನ ಇಲಾಖೆ ಮುಂಬೈ ನಗರಕ್ಕೆ ಯೆಲ್ಲೋ ಅಲರ್ಟ್ ನೀಡಿದೆ. ಭಾರೀ ಮಳೆ  ಮುಂದುವರಿಯುವ  ಮುನ್ಸೂಚನೆಯಿಂದಾಗಿ NDRF ನ ಮೂರು ತಂಡಗಳು ಮುಂಬೈನಲ್ಲಿ ಕಾರ್ಯನಿರ್ವಹಿಸುತ್ತಿವೆ. ಹವಾಮಾನ ಇಲಾಖೆ  ನಗರ ಮತ್ತು ಉಪನಗರಗಳಲ್ಲಿ ಭಾರೀ ಮಳೆ ಮತ್ತು ಪ್ರತ್ಯೇಕ ಪ್ರದೇಶಗಳಲ್ಲಿ ಮತ್ತಷ್ಟು  ಮಳೆಯ ಮುನ್ಸೂಚನೆ ನೀಡಿದೆ.

Mumbai rain: ಮುಂಬೈನಲ್ಲಿ ಭಾರೀ ಮಳೆ; ರಸ್ತೆ, ರೈಲು ಸಂಚಾರಕ್ಕೆ ಅಡಚಣೆ
ಮುಂಬೈ ಮಳೆ
ರಶ್ಮಿ ಕಲ್ಲಕಟ್ಟ
|

Updated on: Jul 22, 2024 | 3:12 PM

Share

ಮುಂಬೈ ಜುಲೈ 22 : ಭಾರೀ ಮಳೆಯಿಂದಾಗಿ ಮುಂಬೈ ರಸ್ತೆಗಳು ಜಲಾವೃತಗೊಂಡು ಸಾರ್ವಜನಿಕ ಮತ್ತು ಖಾಸಗಿ ಸಾರಿಗೆಗೆ ಅಡಚಣೆಯುಂಟಾಗಿದೆ. ಸ್ಥಳೀಯ ರೈಲುಗಳ  ಭಾಗಶಃ ಪರಿಣಾಮ ಬೀರಿದ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಅನ್ನು ಮುಂಬೈನಲ್ಲಿ ನಿಯೋಜಿಸಲಾಗಿದೆ.  ಮುಂಬೈನಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದ್ದು, ಕಳೆದ 12 ಗಂಟೆಗಳಿಂದ ನಗರದಲ್ಲಿ ಸುರಿದ ಮಾನ್ಸೂನ್ ಮಳೆಯಿಂದಾಗಿ ಜಲಾವೃತ ಮತ್ತು ಸಂಚಾರ ದಟ್ಟಣೆ ಉಂಟಾಗಿದ್ದು, ಸಾರ್ವಜನಿಕ ಮತ್ತು ಖಾಸಗಿ ಸಾರಿಗೆಯ ಮೇಲೆ ಪರಿಣಾಮ ಬೀರಿದೆ.

ಮುಲುಂಡ್ ಮತ್ತು ಮಲಬಾರ್ ಬೆಟ್ಟಗಳಲ್ಲಿ ಬೆಳಿಗ್ಗೆ ಕೇವಲ ಒಂದು ಗಂಟೆಯಲ್ಲಿ ನಗರದಲ್ಲಿ 34 ಮಿಮೀ ಮಳೆ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ನಗರದಲ್ಲಿ 135 ಮಿ.ಮೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನಗರಕ್ಕೆ ಯೆಲ್ಲೋ ಅಲರ್ಟ್ ನೀಡಿದೆ. ಭಾರೀ ಮಳೆ  ಮುಂದುವರಿಯುವ  ಮುನ್ಸೂಚನೆಯಿಂದಾಗಿ NDRF ನ ಮೂರು ತಂಡಗಳು ಮುಂಬೈನಲ್ಲಿ ಕಾರ್ಯನಿರ್ವಹಿಸುತ್ತಿವೆ. ಹವಾಮಾನ ಇಲಾಖೆ  ನಗರ ಮತ್ತು ಉಪನಗರಗಳಲ್ಲಿ ಭಾರೀ ಮಳೆ ಮತ್ತು ಪ್ರತ್ಯೇಕ ಪ್ರದೇಶಗಳಲ್ಲಿ ಮತ್ತಷ್ಟು  ಮಳೆಯ ಮುನ್ಸೂಚನೆ ನೀಡಿದೆ.

4.59 ಮೀಟರ್ ನಷ್ಟು ಮಳೆಗಾಳಿ ಇರಲಿದ್ದು  ಇದುಮಧ್ಯಾಹ್ನ 12.59 ಕ್ಕೆ ತಲುಪಬಹುದು ಎಂದು ಅಂದಾಜಿಸಲಾಗಿದೆ.  ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮುಂಬೈನ ಪ್ರಮುಖ ಸಾರಿಗೆ ವ್ಯವಸ್ಥೆಯಾದ ಸ್ಥಳೀಯ ರೈಲುಗಳ ಸಂಚಾರವೂ ಸ್ಥಗಿತಗೊಂಡಿದೆ. ಸಿಗ್ನಲ್ ಸಮಸ್ಯೆಯಿಂದ ಕಲ್ಯಾಣ್ ಮತ್ತು ಠಾಕುರ್ಲಿ ನಿಲ್ದಾಣಗಳಲ್ಲಿ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಜಾಲದಲ್ಲಿ ವಿಪರೀತ ಸಮಯದಲ್ಲಿ ತೊಂದರೆಯಾಯಿತು.

ಆದಾಗ್ಯೂ, ನಾಲ್ಕು ಕಾರಿಡಾರ್‌ಗಳಲ್ಲಿ ಎಲ್ಲಾ ರೈಲು ಸೇವೆಗಳು ಸುಗಮವಾಗಿ ಚಲಿಸುತ್ತಿವೆ ಎಂದು ಕೇಂದ್ರ ರೈಲ್ವೆ ಹೇಳಿದೆ.

ಇದನ್ನೂ ಓದಿ: Kanwar yatra: ಕನ್ವರ್ ಯಾತ್ರಾ ಮಾರ್ಗದಲ್ಲಿ ಆಹಾರ ಮಳಿಗೆಯಲ್ಲಿ ಹೆಸರು ಪ್ರದರ್ಶನ; ಯುಪಿ ಆದೇಶಕ್ಕೆ ಸುಪ್ರೀಂ ತಡೆ

X ನಲ್ಲಿನ ಪೋಸ್ಟ್‌ನಲ್ಲಿ ಪಶ್ಚಿಮ ರೈಲ್ವೇಸ್, ರೈಲುಗಳು ಸಾಮಾನ್ಯವಾಗಿ ಓಡುತ್ತಿವೆ ಎಂದು ಪ್ರಯಾಣಿಕರಿಗೆ ಭರವಸೆ ನೀಡಿದ್ದರೂ, ಪ್ರಯಾಣಿಕರು ರೈಲುಗಳು ಸ್ಥಗಿತಗೊಂಡಿವೆ ಮತ್ತು ಕನಿಷ್ಠ 5-10 ನಿಮಿಷಗಳಷ್ಟು ವಿಳಂಬವಾಗಿದೆ ಎಂದು ಹೇಳಿದ್ದಾರೆ.

ಬಹಳ ಸಮಯದಿಂದ ರೈಲುಗಳು ಸ್ಥಗಿತಗೊಂಡಿದ್ದರಿಂದ ಜನರು ಹಳಿಗಳ ಮೇಲೆ ನಡೆಯಲು ಪ್ರಾರಂಭಿಸಿದರು ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಬೃಹನ್‌ಮುಂಬೈ ವಿದ್ಯುತ್‌ ಸರಬರಾಜು ಮತ್ತು ಸಾರಿಗೆ (ಬೆಸ್ಟ್‌) ಬಸ್‌ಗಳ ಮಾರ್ಗವನ್ನು ಬದಲಿಸಲಾಗಿಲ್ಲ ಎಂದು ನಾಗರಿಕ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?