AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ತೂರು ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿಗೆ ನೆಲಮಹಡಿ ಅಗೆಯುವಾಗ ಪವಾಡ, ಪತ್ತೆಯಾಯ್ತು ಪುರಾತನ ಶ್ರೀದೇವಿ-ಭೂದೇವಿ

Chittoor: ಈ ದೇವಾಲಯವನ್ನು 12ನೇ ಶತಮಾನದಲ್ಲಿ ಕೌಂಡಿನ್ಯ ನದಿಯ ದಡದಲ್ಲಿ ನಿರ್ಮಿಸಲಾಗಿದೆ. ಮೊಹಮ್ಮದೀಯರ ಆಕ್ರಮಣದಿಂದ ದೇವಸ್ಥಾನವನ್ನು ರಕ್ಷಿಸಲು ಅಂದಿನ ಗ್ರಾಮಸ್ಥರು ಕೂರ್ಮ ವರದರಾಜ ಸ್ವಾಮಿಯ ದೇವಸ್ಥಾನವನ್ನು ಮಣ್ಣಿನಿಂದ ಮುಚ್ಚಿದ್ದರು ಎಂದು ಗ್ರಾಮದ ಹಿರಿಯರು ಹೇಳುತ್ತಾರೆ.

ಚಿತ್ತೂರು ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿಗೆ ನೆಲಮಹಡಿ ಅಗೆಯುವಾಗ ಪವಾಡ, ಪತ್ತೆಯಾಯ್ತು ಪುರಾತನ ಶ್ರೀದೇವಿ-ಭೂದೇವಿ
ಚಿತ್ತೂರು ದೇವಸ್ಥಾನ ಜೀರ್ಣೋದ್ಧಾರ-ಪತ್ತೆಯಾಯ್ತು ಪುರಾತನ ಶ್ರೀದೇವಿ-ಭೂದೇವಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 11, 2024 | 1:59 PM

Share

ಚಿತ್ತೂರು ಜಿಲ್ಲೆಯ ಪಲಮನೇರುವಿನಲ್ಲಿ ಅಪರೂಪದ ಸಂಗತಿಯೊಂದು ಬೆಳಕಿಗೆ ಬಂದಿದೆ. ದೇವಾಲಯದ ಜೀರ್ಣೋದ್ಧಾರ ಕಾರ್ಯದ ವೇಳೆ ಪ್ರಾಚೀನ ವಿಗ್ರಹಗಳು ಪತ್ತೆಯಾಗಿವೆ. ಭಾನುವಾರ ಕುರ್ಮಾಯಿಯ ಕೂರ್ಮ ವರದರಾಜ ಸ್ವಾಮಿ ದೇವಸ್ಥಾನದ ಕಾಮಗಾರಿ ವೇಳೆ ಪಂಚಲೋಹದ ಮೂರ್ತಿಗಳು ಹೊರಕ್ಕೆ ಬಂದಿವೆ. ಜೆಸಿಬಿ ಸಹಾಯದಿಂದ ಗರ್ಭಗುಡಿಯ ತಳಹದಿಯನ್ನು ಅಗೆಯುವಾಗ ಮೊದಲು ಒಂದು ವಿಗ್ರಹದ ತಲೆ ಪತ್ತೆಯಾಗಿದೆ. ತಕ್ಷಣ ಜಾಗೃತರಾದ ಭಕ್ತರು.. ವಿಗ್ರಹದ ಸುತ್ತಲಿನ ಮಣ್ಣನ್ನು ಜಾಗರೂಕತೆಯಿಂದ ಅಗೆದಾಗ… ಸುಮಾರು 2.5 ಅಡಿ ಎತ್ತರದ ಶಂಖ ಮತ್ತು ಚಕ್ರ ಧರಿಸಿದ್ದ ಮಹಾವಿಷ್ಣುವಿನ ಮೂರ್ತಿ ಹೊರಬಂದಿದೆ. ಇದರ ಪಕ್ಕದಲ್ಲಿ ಶ್ರೀದೇವಿ ಮತ್ತು ಭೂದೇವಿಯ ಪಂಚ ಲೋಹದ ವಿಗ್ರಹಗಳು ಹಾಗೂ ಪೂಜೆಗೆ ಬಳಸುವ ವಿವಿಧ ರೀತಿಯ ಲೋಹದ ವಸ್ತುಗಳು ಪತ್ತೆಯಾಗಿವೆ. ಇವುಗಳ ಮೌಲ್ಯ ಕೋಟ್ಯಂತರ ರೂಪಾಯಿ ಆಗಬಹುದು ಎಂದು ಅಂದಾಜಿಸಲಾಗಿದೆ.

ಇತಿಹಾಸಕಾರರು ಮತ್ತು ಶಾಸನಗಳ ಪ್ರಕಾರ, ಈ ದೇವಾಲಯವನ್ನು 12 ನೇ ಶತಮಾನದಲ್ಲಿ ಕೌಂಡಿನ್ಯ ನದಿಯ ದಡದಲ್ಲಿ ನಿರ್ಮಿಸಲಾಗಿದೆ. ಮೊಹಮ್ಮದೀಯರ ಆಕ್ರಮಣದಿಂದ ದೇವಸ್ಥಾನವನ್ನು ರಕ್ಷಿಸಲು ಅಂದಿನ ಗ್ರಾಮಸ್ಥರು ಕೂರ್ಮ ವರದರಾಜ ಸ್ವಾಮಿಯ ದೇವಸ್ಥಾನವನ್ನು ಮಣ್ಣಿನಿಂದ ಮುಚ್ಚಿದ್ದರು ಎಂದು ಗ್ರಾಮದ ಹಿರಿಯರು ಹೇಳುತ್ತಾರೆ. 1950ರಲ್ಲಿ ಕರ್ನಾಟಕದ ನಂಗ್ಲಿ ಸಮೀಪದ ಕರಿಡಿಗನಿಪಲ್ಲಿಯ ಚೆಂಗಾರೆಡ್ಡಿ ಎಂಬ ರೈತ ಇಲ್ಲಿಗೆ ಬಂದಾಗ ಕೆಸರು, ಮರಳಿನ ಅಡಿಯಲ್ಲಿರುವ ದೇವಸ್ಥಾನದ ಮೇಲ್ಭಾಗ ಕಂಡು ಬಂತು ಎನ್ನುತ್ತಾರೆ ಗ್ರಾಮದ ಹಿರಿಯರು. ನಂತರ ಹೊರಬಂದ ದೇವಾಲಯವು ಪಾಳುಬಿದ್ದಿದೆ.

ಇದರೊಂದಿಗೆ ನವೀಕರಣ ಕಾಮಗಾರಿಗೆ ಮುಂದಾದಾಗ.. ರಾಜ್ಯ ಮುಜರಾಯಿ ಇಲಾಖೆಯಿಂದ ಕಳೆದ ವರ್ಷ 1.25 ಕೋಟಿ ರೂ. ಅಷ್ಟರಮಟ್ಟಿಗೆ ಜೀರ್ಣೋದ್ಧಾರ ಕಾರ್ಯ ನಡೆದಾಗ ಪುರಾತನ ಕಾಲದ ಪಂಚಲೋಹದ ಮೂರ್ತಿಗಳು, ಪೂಜೆ ಕೈಂಕರ್ಯಗಳಿಗೆ ಬಳಸುತ್ತಿದ್ದ ಸಾಮಗ್ರಿಗಳು ಹೊರಬಂದಿವೆ. ಇವುಗಳನ್ನು ಕೂರ್ಮವರದರಾಜಸ್ವಾಮಿಯ ವಿಗ್ರಹವನ್ನು ಸಂರಕ್ಷಿಕ್ಷಿಸಿ, ಎತ್ತಿಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸುತ್ತಲಿನ ಗ್ರಾಮಗಳ ಭಕ್ತರು ಮೂರ್ತಿಗಳ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:57 pm, Mon, 11 March 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!