AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್​ನಲ್ಲಿ 12 ಕೋಟಿ ಡೋಸ್​​ಗಳಷ್ಟು ಕೊರೊನಾ ಲಸಿಕೆ ಲಭ್ಯ; ಕೇಂದ್ರ ಸರ್ಕಾರದಿಂದ ಅಭಯ

ಜನವರಿ 16ರಿಂದ ಶುರುವಾದ ಕೊವಿಡ್​ 19 ಲಸಿಕೆ ವಿತರಣೆ ಅಭಿಯಾನ ಎರಡು ಹಂತ ಪೂರೈಸಿದೆ. ಈ ಮೂರನೇ ಹಂತದಲ್ಲಿ 18-44ವರ್ಷದವರಿಗೆ ಕೊರೊನಾ ಲಸಿಕೆ ನೀಡಬೇಕಿತ್ತು.

ಜೂನ್​ನಲ್ಲಿ 12 ಕೋಟಿ ಡೋಸ್​​ಗಳಷ್ಟು ಕೊರೊನಾ ಲಸಿಕೆ ಲಭ್ಯ; ಕೇಂದ್ರ ಸರ್ಕಾರದಿಂದ ಅಭಯ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 30, 2021 | 2:49 PM

Share

ದೆಹಲಿ: ಸದ್ಯ ದೇಶದಲ್ಲಿ ಕೊವಿಡ್ 19 ಲಸಿಕೆ ಅಭಾವದಿಂದಾಗಿ ಲಸಿಕೆ ವಿತರಣೆ ಅಭಿಯಾನ ತುಸು ಹಿಂದೆ ಬಿದ್ದಿದೆ. ಆದರೆ ಆತಂಕ ಪಡಬೇಕಿಲ್ಲ. ಜೂನ್​ನಲ್ಲಿ ಸುಮಾರು 12 ಕೋಟಿ ಡೋಸ್​ಗಳಷ್ಟು ವ್ಯಾಕ್ಸಿನ್​​ ಲಭ್ಯವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸದ್ಯ ಕೊವಿಡ್​ 19 ಲಸಿಕೆಗಾಗಿ ಸಿಕ್ಕಾಪಟೆ ಬೇಡಿಕೆಯಿದೆ. ಆದರೆ ವ್ಯಾಕ್ಸಿನ್ ಕೊರತೆಯಿಂದ ಫಲಾನುಭವಿಗಳಿಗೆ ಅಗತ್ಯವಿರುವಷ್ಟು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಆದರೆ ಜೂನ್​ ಹೊತ್ತಿಗೆ ವ್ಯಾಕ್ಸಿನ್​ ಉತ್ಪಾದನೆ ಹೆಚ್ಚಲಿದ್ದು, ಪೂರೈಕೆ ಪ್ರಮಾಣವೂ ಹೆಚ್ಚಲಿದೆ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿದೆ.

ಜನವರಿ 16ರಿಂದ ಶುರುವಾದ ಕೊವಿಡ್​ 19 ಲಸಿಕೆ ವಿತರಣೆ ಅಭಿಯಾನ ಎರಡು ಹಂತ ಪೂರೈಸಿದೆ. ಈ ಮೂರನೇ ಹಂತದಲ್ಲಿ 18-44ವರ್ಷದವರಿಗೆ ಕೊರೊನಾ ಲಸಿಕೆ ನೀಡಬೇಕಿತ್ತು. ಆದರೆ ಸದ್ಯಕ್ಕೆ ಸಿಗುತ್ತಿಲ್ಲ. ಇದುವರೆಗೆ ದೇಶದಲ್ಲಿ ಒಟ್ಟು 21 ಕೋಟಿ ಜನರಿಗೆ ಲಸಿಕೆ ಕೊಟ್ಟಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಶನಿವಾರ ಒಂದೇದಿನ 18-44ವರ್ಷದವರೆಗಿನ 14.15 ಲಕ್ಷ ಜನರು ಮೊದಲ ಡೋಸ್​ ಲಸಿಕೆ ಪಡೆದಿದ್ದಾರೆ. 9,075 ಮಂದಿ ಎರಡನೇ ಡೋಸ್​ ಪಡೆದಿದ್ದಾರೆ ಎಂದೂ ತಿಳಿಸಿದೆ. ದೇಶದಲ್ಲಿ ಕೊವಿಶೀಲ್ಡ್​ ಮತ್ತು ಕೊವ್ಯಾಕ್ಸಿನ್​ ಲಸಿಕೆ ಉತ್ಪತ್ತಿ ಮಾಡುತ್ತಿದ್ದರೂ ಅಭಾವ ಉಂಟಾಗಿದೆ.

ಮೂರನೇ ಹಂತದ ಅಂದರೆ 18-44ವರ್ಷದವರೆಗಿ ವರ್ಗಕ್ಕೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಪೂರೈಕೆ ಮಾಡುವುದಿಲ್ಲ. ಲಸಿಕೆ ಉತ್ಪಾದಕರಿಂದ ರಾಜ್ಯ ಸರ್ಕಾರಗಳು ನೇರವಾಗಿ ಖರೀದಿಸಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ರಾಜ್ಯಗಳಿಂದ ಬೇಡಿಕೆ ಹೆಚ್ಚಾಗಿಯೇ ಇದ್ದು, ಆದಷ್ಟು ಶೀಘ್ರದಲ್ಲೇ ಪೂರೈಕೆಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಭರವಸೆ ನೀಡಿದೆ. ರಷ್ಯಾದ ಸ್ಪುಟ್ನಿಕ್​ ಲಸಿಕೆಗೂ ಕೂಡ ಭಾರತದಲ್ಲಿ ಅನುಮೋದನೆ ದೊರೆತಿದೆ.

ಇದನ್ನೂ ಓದಿ: ಮೆಹುಲ್​ ಚೋಕ್ಸಿ ಡೊಮಿನಿಕಾದಿಂದ ಭಾರತಕ್ಕೆ ತೆರಳಲಿದ್ದಾರೆ ಎಂದ ಆಂಟಿಗುವಾ ಪ್ರಧಾನಿ; ಡೌಗ್ಲಾಸ್-ಚಾರ್ಲ್ಸ್ ಏರ್​ಪೋರ್ಟ್ ತಲುಪಿದ ಖಾಸಗಿ ಜೆಟ್​

Published On - 2:49 pm, Sun, 30 May 21

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ