AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ವಿಮಾನಗಳ ಮೂಲಕ ಸುಮಾರು 18,000 ಭಾರತೀಯರನ್ನು ಉಕ್ರೇನ್‌ನಿಂದ ವಾಪಸ್ ಕರೆತರಲಾಗಿದೆ: ಕೇಂದ್ರ ಸರ್ಕಾರ

ಆಪರೇಷನ್ ಗಂಗಾ ಭಾಗವಾಗಿ 2467 ಪ್ರಯಾಣಿಕರನ್ನು ಮರಳಿ ಕರೆತರಲು ಭಾರತೀಯ ವಾಯುಪಡೆಯು 12 ವಿಮಾನ ಕಾರ್ಯಾಚರಣೆಗಳನ್ನು ನಡೆಸಿದೆ ಮತ್ತು 32 ಟನ್ ಪರಿಹಾರ ಸಾಮಗ್ರಿಗಳನ್ನು ಸಾಗಿಸಿದೆ.

ವಿಶೇಷ ವಿಮಾನಗಳ ಮೂಲಕ ಸುಮಾರು 18,000 ಭಾರತೀಯರನ್ನು ಉಕ್ರೇನ್‌ನಿಂದ ವಾಪಸ್ ಕರೆತರಲಾಗಿದೆ: ಕೇಂದ್ರ ಸರ್ಕಾರ
ಆಪರೇಷನ್ ಗಂಗಾ
TV9 Web
| Edited By: |

Updated on: Mar 08, 2022 | 9:58 PM

Share

ದೆಹಲಿ: ವಿಶೇಷ ವಿಮಾನಗಳ ಮೂಲಕ ಸುಮಾರು 18,000 ಭಾರತೀಯ ಪ್ರಜೆಗಳನ್ನು ಉಕ್ರೇನ್‌ನ(Ukraine) ನೆರೆಯ ದೇಶಗಳಿಂದ ಭಾರತಕ್ಕೆ ಮರಳಿ ಕರೆತರಲಾಗಿದೆ ಎಂದು ಕೇಂದ್ರ ಮಂಗಳವಾರ ತಿಳಿಸಿದೆ. ಸುಸೇವಾದಿಂದ ವಿಶೇಷ ನಾಗರಿಕ ವಿಮಾನಗಳ ಮೂಲಕ ಒಟ್ಟು 410 ಭಾರತೀಯರನ್ನು ಮರಳಿ ಕರೆತರಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಆಪರೇಷನ್ ಗಂಗಾ (Operation Ganga) ಭಾಗವಾಗಿ 2467 ಪ್ರಯಾಣಿಕರನ್ನು ಮರಳಿ ಕರೆತರಲು ಭಾರತೀಯ ವಾಯುಪಡೆಯು 12 ವಿಮಾನ ಕಾರ್ಯಾಚರಣೆಗಳನ್ನು ನಡೆಸಿದೆ ಮತ್ತು 32 ಟನ್ ಪರಿಹಾರ ಸಾಮಗ್ರಿಗಳನ್ನು ಸಾಗಿಸಿದೆ ಎಂದು ಸಚಿವಾಲಯ ಹೇಳಿದೆ.  ನಾಗರಿಕ ವಿಮಾನಗಳಲ್ಲಿ ಬುಕಾರೆಸ್ಟ್‌ನಿಂದ 21 ವಿಮಾನಗಳ ಮೂಲಕ 4,575 ಪ್ರಯಾಣಿಕರನ್ನು, ಒಂಬತ್ತು ವಿಮಾನಗಳ ಮೂಲಕ 1,820 ಸುಸೇವಾದಿಂದ, 5,571ಮಂದಿಯನ್ನು ಬುಡಾಪೆಸ್ಟ್‌ನಿಂದ 28 ವಿಮಾನಗಳ ಮೂಲಕ, 909 ಪ್ರಯಾಣಿಕರನ್ನು ಕೊಸಿಸ್‌ನಿಂದ ಐದು ವಿಮಾನಗಳಲ್ಲಿ, 2,404 ಭಾರತೀಯರನ್ನು ರ್ಜೆಸ್ಜೋವ್‌ನಿಂದ 11 ವಿಮಾನಗಳಲ್ಲಿ ಮತ್ತು ಕೀವ್ ನಿಂದ 242 ವ್ಯಕ್ತಿಗಳನ್ನು ಕರೆತರಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಏತನ್ಮಧ್ಯೆ, ಉಕ್ರೇನ್‌ನಲ್ಲಿ ಯುದ್ಧ ಪೀಡಿತ ಸುಮಿಯಿಂದ ಸುಮಾರು 600 ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಭಾರತ ಯಶಸ್ವಿಯಾಗಿದೆ.

ಭಾರತೀಯ ರಾಯಭಾರ ಕಚೇರಿ ಮತ್ತು ರೆಡ್‌ಕ್ರಾಸ್‌ನ ಅಧಿಕಾರಿಗಳು ಬಾಂಗ್ಲಾದೇಶ, ಪಾಕಿಸ್ತಾನ, ನೇಪಾಳ ಮತ್ತು ಟುನೀಶಿಯಾದ ಕೆಲವು ನಾಗರಿಕರೊಂದಿಗೆ ಭಾರತೀಯ ಪ್ರಜೆಗಳನ್ನು ಪೋಲ್ಟವಾ ಪ್ರದೇಶಕ್ಕೆ ಕರೆದೊಯ್ದರು. ಉಕ್ರೇನ್ ರಾಜಧಾನಿ ಕೀವ್ ಬಳಿಯ ಸುಮಿ ಮತ್ತು ಇರ್ಪಿನ್ ಪಟ್ಟಣದಿಂದ ನಾಗರಿಕರನ್ನು ಸ್ಥಳಾಂತರಿಸುವ ಭಾಗವಾಗಿ ವಿದ್ಯಾರ್ಥಿಗಳನ್ನು ಹಸಿರು ಕಾರಿಡಾರ್ ಮೂಲಕ ಮಧ್ಯ ಉಕ್ರೇನ್‌ನ ಪೋಲ್ಟೋವಾ ನಗರಕ್ಕೆ ಸ್ಥಳಾಂತರಿಸಲಾಯಿತು. ಉಕ್ರೇನ್‌ನ ವಿದೇಶಾಂಗ ಸಚಿವಾಲಯವು ಸುಮಿ ನಾಗರಿಕರನ್ನು ಸ್ಥಳಾಂತರಿಸುವ ವಿಡಿಯೊವನ್ನು ಟ್ವೀಟ್ ಮಾಡಿದೆ.

ಸುಮಿ ರಷ್ಯಾದ ಗಡಿಯ ಸಮೀಪದಲ್ಲಿದೆ ಮತ್ತು ಉಕ್ರೇನಿಯನ್ ರಾಜಧಾನಿ ಕೀವ್ ನಿಂದ ಪೂರ್ವಕ್ಕೆ 350 ಕಿಮೀ ದೂರದಲ್ಲಿದೆ. ಇಂದು ನಗರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಸುಮಿಯಲ್ಲಿ ಸಿಲುಕಿರುವ ಎಲ್ಲಾ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ: ಕೇಂದ್ರ ಸರ್ಕಾರ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ