AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಕಝ್ ನಿಜಾಮುದ್ದೀನ್ ಮಸೀದಿಯನ್ನು ಪುನಃ ತೆರೆಯಲು ಅನುಮತಿ ನೀಡಿದ ದೆಹಲಿ ಪೊಲೀಸ್

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (DDA) ಮಾರ್ಗಸೂಚಿಗಳಿಗೆ ಅನುಸಾರವಾಗಿ ಪ್ರತಿ ಮಹಡಿಯಲ್ಲಿ 100 ಕ್ಕಿಂತ ಕಡಿಮೆ ಜನರನ್ನು ಮಾತ್ರ ಅನುಮತಿಸಲಾಗುತ್ತದೆ.

ಮರ್ಕಝ್ ನಿಜಾಮುದ್ದೀನ್ ಮಸೀದಿಯನ್ನು ಪುನಃ ತೆರೆಯಲು ಅನುಮತಿ ನೀಡಿದ ದೆಹಲಿ ಪೊಲೀಸ್
ಮರ್ಕಝ್ ನಿಜಾಮುದ್ದೀನ್‌
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 16, 2022 | 7:48 PM

ಕೊವಿಡ್ -19  ನಿಯಮಗಳ ಉಲ್ಲಂಘನೆಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರ್ಕಝ್ ನಿಜಾಮುದ್ದೀನ್ (Markaz Nizamuddin) ಮುಚ್ಚಲಾಗಿತ್ತು. ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಿದ ಸುಮಾರು ಎರಡು ವರ್ಷಗಳ ನಂತರ, ಶಬ್-ಎ-ಬಾರಾತ್ ಸಂದರ್ಭನಲ್ಲಿ ಮಸೀದಿ ಬಂಗ್ಲೇ ವಾಲಿಯಲ್ಲಿ ನಾಲ್ಕು ಮಹಡಿಗಳಲ್ಲಿ ಪ್ರಾರ್ಥನೆ ನಡೆಸಲು ಮ್ಯಾನೇಜ್‌ಮೆಂಟ್‌ಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ.ಆದಾಗ್ಯೂ, ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (DDA) ಮಾರ್ಗಸೂಚಿಗಳಿಗೆ ಅನುಸಾರವಾಗಿ ಪ್ರತಿ ಮಹಡಿಯಲ್ಲಿ 100 ಕ್ಕಿಂತ ಕಡಿಮೆ ಜನರನ್ನು ಮಾತ್ರ ಅನುಮತಿಸಲಾಗುತ್ತದೆ. “ಮಸೀದಿ ಬಂಗ್ಲೇ ವಾಲಿಯ ನೆಲ ಮತ್ತು ಮೂರು ಮಹಡಿಗಳನ್ನು ಶಬ್-ಎ-ಬರಾತ್‌ಗೆ(Shab-e-Barat) ಒಂದು ದಿನ ಮೊದಲು ಮಧ್ಯಾಹ್ನ 12 ಗಂಟೆಗೆ ಮತ್ತೆ ತೆರೆಯಲಾಗುವುದು ಮತ್ತು ಶಬ್-ಎ-ಬರಾತ್‌ನ ಮರುದಿನ ಸಂಜೆ 4 ಗಂಟೆಗೆ ಮುಚ್ಚಲಾಗುವುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಸಂಪೂರ್ಣ ಲಸಿಕೆ ಪಡೆದ ಜನರಿಗೆ ಅಥವಾ ಲಕ್ಷಣರಹಿತ ಜನರಿಗೆ ಮಾತ್ರ ಆವರಣದೊಳಗೆ ಅನುಮತಿಸಲಾಗುವುದು. ಆದಾಗ್ಯೂ, ಮರ್ಕಝ್ ಆವರಣದೊಳಗೆ ವಿದೇಶಿಯರನ್ನು ಅನುಮತಿಸಲಾಗುವುದಿಲ್ಲ ಮತ್ತು ಪುನಃ ತೆರೆಯುವ ಅವಧಿಯಲ್ಲಿ ಯಾವುದೇ “ತಬ್ಲಿಘಿ ಚಟುವಟಿಕೆಗಳನ್ನು” ಅನುಮತಿಸಲಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ವಿದೇಶಿ ಮೂಲದ ಕೆಲವು ಭಕ್ತರು ಅಥವಾ ಒಸಿಐ ಕಾರ್ಡ್ ಹೊಂದಿದವರು ಮಸೀದಿ ಬಂಗ್ಲೇ ವಾಲಿಯಲ್ಲಿ ನಮಾಜ್ ಮಾಡಲು ಉದ್ದೇಶಿಸಿದರೆ/ಒತ್ತಾಯಿಸಿದರೆ, ಅವರ ಗುರುತಿನ ವಿವರಗಳು ಅಂದರೆ ಅವರ ಪಾಸ್‌ಪೋರ್ಟ್/ಒಲಿಐ ಕಾರ್ಡ್‌ನ ಫೋಟೊಕಾಪಿ ಜೊತೆಗೆ ಲಭ್ಯವಿರುವ ಯಾವುದೇ ಫೋಟೋ ಗುರುತಿನ ಚೀಟಿಯ ನಕಲು ಪ್ರತಿಯನ್ನು ವ್ಯವಸ್ಥಾಪಕರಿಗೆ ಮತ್ತು ಎಸ್‌ಎಚ್‌ಒಗೆ ಸಲ್ಲಿಸಲಾಗುವುದು ಎಂದು ಹಜರತ್ ನಿಜಾಮುದ್ದೀನ್ ಪೊಲೀಸ್ ಠಾಣೆಯು ದೆಹಲಿ ವಕ್ಫ್ ಮಂಡಳಿಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಭಕ್ತರು ಅಥವಾ ಸಂದರ್ಶಕರ ದಾಖಲೆಗಳನ್ನು ನಿರ್ವಹಿಸಲು ಮುಖ್ಯ ಪ್ರವೇಶದಲ್ಲಿ ಪ್ರತ್ಯೇಕ ರಿಜಿಸ್ಟರ್ ಇರುತ್ತದೆ ಎಂದು ಪೊಲೀಸರು ಹೇಳಿದ್ದಾರೆ. “ಎಲ್ಲಾ ಪ್ರವೇಶ ಮತ್ತು ನಿರ್ಗಮನ ಗೇಟ್‌ಗಳು ಮತ್ತು ಇತರ ಸ್ಥಳಗಳು/ಮಹಡಿಗಳಲ್ಲಿ ನಿರ್ವಹಣಾ ಸಮಿತಿಯು ಸ್ಥಳೀಯ ಮಹಡಿಗಳ ಮೇಲ್ವಿಚಾರಣೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸುತ್ತದೆ” ಎಂದು ಪತ್ರದಲ್ಲಿ ಹೇಳಿದೆ.

ಆವರಣದೊಳಗೆ ಯಾರಿಗೂ ತಂಗಲು ಅನುಮತಿಸಲಾಗುವುದಿಲ್ಲ ಮತ್ತು ಪುನರಾರಂಭದ ಸಮಯದಲ್ಲಿ ಎಲ್ಲಾ ಚಟುವಟಿಕೆಗಳನ್ನು ರೆಕಾರ್ಡ್ ಮಾಡಲಾಗುತ್ತದೆ ಮತ್ತು ದೃಶ್ಯಾವಳಿಗಳನ್ನು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮುಂದೆ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮರ್ಕಝ್ ನಿಜಾಮುದ್ದೀನ್‌ನಲ್ಲಿ ನಿರ್ಬಂಧಗಳನ್ನು ಸಡಿಲಿಸುವಂತೆ ಕೋರಿ ದೆಹಲಿ ವಕ್ಫ್ ಬೋರ್ಡ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ದೆಹಲಿ ಹೈಕೋರ್ಟ್‌ಗೆ ಕೇಂದ್ರವು ಸೋಮವಾರ ತಿಳಿಸಿದೆ, ಶಬ್-ಎ-ಬರಾತ್ ಮತ್ತು ರಂಜಾನ್ ತಿಂಗಳಲ್ಲಿ ಮಸೀದಿ ಬಂಗ್ಲೇ ವಾಲಿಯ ಮೂರು ಮಹಡಿಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡುವ ಬಗ್ಗೆ ನಗರ ಪೊಲೀಸರು ಪರಿಗಣಿಸಬೇಕು ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

ಆದರೆ ಇತ್ತೀಚಿನ ಪೊಲೀಸ್ ಅನುಮತಿ ರಂಜಾನ್ ತಿಂಗಳಲ್ಲಿ ಪ್ರಾರ್ಥನೆ ನಡೆಸುವ ಬಗ್ಗೆ ಏನೂ ಮಾತಾಡಿಲ್ಲ . ಈ ಪ್ರಕರಣವನ್ನು ಬುಧವಾರ ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ ಅವರ ಪೀಠದ ಮುಂದೆ ವಿಚಾರಣೆಗೆ ಇಡಲಾಗಿದೆ. ಕಳೆದ ವರ್ಷ, ಶಬ್-ಎ-ಬರಾತ್‌ನಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ನಡೆಸಲು 50 ಜನರಿಗೆ ಮಾತ್ರ ಅನುಮತಿ ನೀಡಲಾಯಿತು ಮತ್ತು ನ್ಯಾಯಾಲಯದ ಆದೇಶದ ಆಧಾರದ ಮೇಲೆ ಅನುಮತಿ ನೀಡಲಾಯಿತು.

ಇದನ್ನೂ ಓದಿ: AgustaWestland case ಮಾಜಿ ರಕ್ಷಣಾ ಕಾರ್ಯದರ್ಶಿ ಶಶಿಕಾಂತ್ ಶರ್ಮಾ ವಿರುದ್ಧ ಸಿಬಿಐ ಆರೋಪಪಟ್ಟಿ

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು