AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

S Jaishankar: ಉತ್ತಮ ಸಂಬಂಧ ಬೇಕು ಆದರೆ ಭಯೋತ್ಪಾದನೆ ಬೇಡ: ಪಾಕಿಸ್ತಾನ, ಚೀನಾಕ್ಕೆ ಕಠಿಣ ಸಂದೇಶ ರವಾನಿಸಿದ ಜೈಶಂಕರ್

ವಿದೇಶಾಂಗ ಸಚಿವ ಎಸ್ ಜೈಶಂಕರ್ ವಿರುದ್ಧ ಪರೋಕ್ಷವಾಗಿ ವಾಗ್ದಳಿ ನಡೆಸಿದ್ದಾರೆ. ಭಾರತವನ್ನು ಸಂಧಾನದ ವೇದಿಕೆಯ ಮೇಲೆ ಒತ್ತಾಯಿಸಲು ಭಯೋತ್ಪಾದನೆಯನ್ನು ಸಾಧನವಾಗಿ ಬಳಸಲಾಗುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

S Jaishankar: ಉತ್ತಮ ಸಂಬಂಧ ಬೇಕು ಆದರೆ ಭಯೋತ್ಪಾದನೆ ಬೇಡ: ಪಾಕಿಸ್ತಾನ, ಚೀನಾಕ್ಕೆ ಕಠಿಣ ಸಂದೇಶ ರವಾನಿಸಿದ ಜೈಶಂಕರ್
Jaishankar Image Credit source: Tv9 kannada
TV9 Web
| Edited By: |

Updated on:Dec 31, 2022 | 1:48 PM

Share

ವಿದೇಶಾಂಗ ಸಚಿವ ಎಸ್ ಜೈಶಂಕರ್ ವಿರುದ್ಧ ಪರೋಕ್ಷವಾಗಿ ವಾಗ್ದಳಿ ನಡೆಸಿದ್ದಾರೆ. ಭಾರತವನ್ನು ಸಂಧಾನದ ವೇದಿಕೆಯ ಮೇಲೆ ಒತ್ತಾಯಿಸಲು ಭಯೋತ್ಪಾದನೆಯನ್ನು ಸಾಧನವಾಗಿ ಬಳಸಲಾಗುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. ಸೈಪ್ರಸ್‌ನಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸುವ ಸಂದರ್ಭದಲ್ಲಿ ಪಾಕಿಸ್ತಾನವನ್ನು ಉಲ್ಲೇಖಿಸದೆ, ಜೈಶಂಕರ್ ಅವರು ನಾವು ಭಯೋತ್ಪಾದನೆಯನ್ನು ಯಾವತ್ತೂ ಬೆಂಬಲಿಸುವುದಿಲ್ಲ. ಈ ಕಾರಣಕ್ಕೆ ಸಂಧಾನದ ವೇದಿಕೆಯಲ್ಲಿ ಭಯೋತ್ಪಾದನೆಯನ್ನು ಬಗ್ಗೆ ತೀವ್ರವಾಗಿ ವಿರೋಧ ಮಾಡುತ್ತೇವೆ ಎಂದು ಹೇಳಿದರು. ನಾವು ಎಲ್ಲರೊಂದಿಗೆ ಉತ್ತಮ ನೆರೆಹೊರೆಯ ಸಂಬಂಧವನ್ನು ಬಯಸುತ್ತೇವೆ. ಆದರೆ ಉತ್ತಮ ನೆರೆಹೊರೆ ಸಂಬಂಧಗಳ ಭಯೋತ್ಪಾದನೆ ಬೆಂಬಲಕ್ಕೆ ನಾವು ಯಾವತ್ತೂ ಕ್ಷಮಿಸುವುದಿಲ್ಲ. ಜೊತೆಗೆ ಈ ಬಗ್ಗೆ ಯಾವುದೇ ತರ್ಕಬದ್ಧವಾಗಿರುವುದಿಲ್ಲ ಎಂದು ಹೇಳಿದೆ. ಈ ವಿಚಾರದಲ್ಲಿ ನಾವು ತುಂಬಾ ಸ್ಪಷ್ಟವಾಗಿರುತ್ತೇವೆ.

ನಮ್ಮ ಗಡಿಗಳಲ್ಲಿ ಅನೇಕ ಸವಾಲುಗಳು ಇದೆ, ಈ ಕಾರಣಕ್ಕೆ ಈ ಸವಾಲು ಮೊದಲು ಎದುರಿಸಬೇಕಿದೆ. ಕೋವಿಡ್ ಅವಧಿಯಲ್ಲಿ ಗಡಿಗಳಲ್ಲಿನ ಸವಾಲುಗಳು ತೀವ್ರಗೊಂಡಿವೆ. ಇಂದು ಚೀನಾದೊಂದಿಗಿನ ನಮ್ಮ ಸಂಬಂಧಗಳ ಸ್ಥಿತಿಯು ಸಾಮಾನ್ಯವಾಗಿಲ್ಲ ಎಂದು ನಿಮಗೆಲ್ಲರಿಗೂ ತಿಳಿದಿದೆ. ವಾಸ್ತವಿಕ ನಿಯಂತ್ರಣ ರೇಖೆಯನ್ನು (LAC) ಏಕಪಕ್ಷೀಯವಾಗಿ ಬದಲಾಯಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಆದ್ದರಿಂದ ವಿದೇಶಾಂಗ ನೀತಿಯ ಕಡೆಯಿಂದ, ರಾಷ್ಟ್ರೀಯ ಭದ್ರತೆಯ ಕಡೆಯಿಂದ, ರಾಜತಾಂತ್ರಿಕತೆ, ವಿದೇಶಾಂಗ ನೀತಿಯ ಮೇಲೆ ದೃಢತೆಯ ಚಿತ್ರವನ್ನು ನಾನು ನಿಮ್ಮೊಂದಿಗೆ ಹಂಚಿಕೊಳ್ಳಬಹುದು ಎಂದು ಹೇಳಿದ್ದಾರೆ.

ವಿದೇಶದಲ್ಲಿರುವ ಭಾರತೀಯರು ತಾಯ್ನಾಡಿಗೆ ಶಕ್ತಿಯ ದೊಡ್ಡ ಮೂಲ ಎಂದು ನಾನು ಸ್ಪಷ್ಟವಾಗಿ ಹೇಳಿದ್ದೇವೆ ಎಂದು ನಾನು ಭಾವಿಸುತ್ತೇನೆ. ನಮ್ಮ ದೇಶದ ಸರ್ವಭೌಮತೆಯನ್ನು ಎರಡು ಮಾರ್ಗಗಳಿಲ್ಲ ತೋರಿಸಬಹದು. ಭಾರತ ಒಂದು ಬೆಳಯುತ್ತಿದೆ. ಇನ್ನೊಂದು ಹೆಚ್ಚು ಭಾರತೀಯರು ವಿದೇಶಗಳಿಗೆ ಹೋದಂತೆ, ಜಾಗತಿಕ ಕೆಲಸದ ಸ್ಥಳವು ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ:ಭಾರತದ ವಿದೇಶಾಂಗ ಸಚಿವ ಜೈಶಂಕರ್ ನಿಜವಾದ ದೇಶಭಕ್ತ -ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಪ್ರಶಂಸೆ

3.3 ಕೋಟಿ ಭಾರತೀಯರು ಮೂಲದ ಜನರು ವಿದೇಶದಲ್ಲಿ ವಾಸಿಸುತ್ತಿದ್ದಾರೆ, ಈಗ, ಇಷ್ಟು ದೊಡ್ಡ ಸಂಖ್ಯೆಯ ಜನರು ವಿದೇಶದಲ್ಲಿ ವಾಸಿಸುತ್ತಿರುವಾಗ ಮತ್ತು ಭಾರತಕ್ಕೆ ಆಗುವ ಪ್ರಯೋಜನಗಳು ನಮಗೆ ಹಲವು ವಿಧಗಳಲ್ಲಿ ಗೋಚರಿಸುತ್ತವೆ, ಉದ್ಭವಿಸುವ ದೊಡ್ಡ ಸಮಸ್ಯೆಯೆಂದರೆ ಭಾರತದ ಬಾಧ್ಯತೆ ಏನು? ಇದನ್ನು ಹೇಗೆ ಪರಿಹಾರ ಮಾಡುವುದು ಮತ್ತು ಬಗ್ಗೆ ಕಾಳಜಿ ವಹಿಸುವುದರ ಜೊತೆಗೆ ಸಾಧ್ಯವಾದಷ್ಟು ಉತ್ತಮವಾಗಿ ನೋಡಿಕೊಳ್ಳುವುದು, ವಿಶೇಷವಾಗಿ ಕಳೆದ ಏಳೆಂಟು ವರ್ಷಗಳಲ್ಲಿ ಭಾರತೀಯರು ಎಲ್ಲೆಲ್ಲಿ ಕಷ್ಟದಲ್ಲಿದ್ದಾರೆಯೋ ಅಲ್ಲೆಲ್ಲಾ ಭಾರತ ಸರಕಾರ, ಭಾರತ ರಾಜ್ಯ ಅವರಿಗಾಗಿಯೇ ಕೆಲಸ ಮಾಡಿರುವುದನ್ನು ನೀವು ನೋಡಿದ್ದೀರಿ ಎಂದು ಅವರು ಹೇಳಿದರು.

ಎಸ್ ಜೈಶಂಕರ್ ವಿದೇಶಾಂಗ ಸಚಿವಾಲಯದಲ್ಲಿ ತಮ್ಮ 40 ವರ್ಷಗಳ ಅನುಭವವನ್ನು ಪ್ರಸ್ತಾಪಿಸಿದರು, ಇದು ನಿಜವಾಗಿಯೂ ಭಾರತೀಯ ಸಮುದಾಯದ ಬಗ್ಗೆ ರಾಯಭಾರ ಕಚೇರಿಗಳು ಮತ್ತು ಉನ್ನತ ಆಯೋಗಗಳು ಮತ್ತು ಸಚಿವಾಲಯಗಳು ಮತ್ತು ಅಧಿಕಾರಿಗಳು ಹೇಗೆ ಯೋಚಿಸುತ್ತಾರೆ ಎಂಬುದರ ಸಂಪೂರ್ಣ ರೂಪಾಂತರವಾಗಿದೆ ಎಂದು ಹೇಳಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:46 pm, Sat, 31 December 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ