AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡನೆಯಾದ ಮಸೂದೆ ಮೇಲೆ ರೈತ ಸಂಘಟನೆಗಳ ಕಣ್ಣು; ಮತ್ತೊಂದು ಚಳವಳಿಗೆ ಸಿದ್ಧವಾಗಬೇಕು ಎಂದ ರಾಕೇಶ್​ ಟಿಕಾಯತ್​

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದರು. ಕಳೆದ ತಿಂಗಳು ಅಂದರೆ ನವೆಂಬರ್​ 19ರಂದು ಪ್ರಧಾನಿ ಮೋದಿ ಆ ಕಾಯ್ದೆಗಳನ್ನು ವಾಪಸ್​ ಪಡೆದಿದ್ದಾರೆ.

ಮಂಡನೆಯಾದ ಮಸೂದೆ ಮೇಲೆ ರೈತ ಸಂಘಟನೆಗಳ ಕಣ್ಣು; ಮತ್ತೊಂದು ಚಳವಳಿಗೆ ಸಿದ್ಧವಾಗಬೇಕು ಎಂದ ರಾಕೇಶ್​ ಟಿಕಾಯತ್​
ರಾಕೇಶ್ ಟಿಕಾಯತ್
TV9 Web
| Edited By: |

Updated on:Dec 07, 2021 | 10:28 AM

Share

ದೆಹಲಿ: ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆದು, ಅದನ್ನು ಸಂಸತ್ತಿನಲ್ಲಿ ರದ್ದುಗೊಳಿಸಿದ್ದರೂ ರೈತರು ಪ್ರತಿಭಟನೆ ನಿಲ್ಲಿಸುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಒಂದಲ್ಲ, ಒಂದು ಬೇಡಿಕೆಯನ್ನು ಮುಂದಿಟ್ಟುಕೊಂಡು ಹೋರಾಟ ಮುಂದುವರಿಸುತ್ತಲೇ ಇದ್ದಾರೆ. ಇದೀಗ ರೈತರ ಮುಖಂಡ ಕೇಂದ್ರ ಸರ್ಕಾರದ ಹೊಸ ಚಳವಳಿ ಘೋಷಿಸಿದ್ದಾರೆ.   ಬ್ಯಾಂಕ್​​ಗಳ ಖಾಸಗೀಕರಣದ ವಿರುದ್ಧ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರೈತ ಮುಖಂಡ ರಾಕೇಶ್​ ಟಿಕಾಯತ್​, ಸಾರ್ವಜನಿಕ ಬ್ಯಾಂಕ್​​ಗಳನ್ನು ಖಾಸಗೀಕರಣಗೊಳಿಸುವ ಸಂಬಂಧ ಡಿಸೆಂಬರ್​ 6ರಂದು ಸಂಸತ್ತಿನಲ್ಲಿ ಮಸೂದೆ ಮಂಡನೆಯಾಗಲಿದೆ. ಆದರೆ ಅದರ ವಿರುದ್ಧ ದೇಶಾದ್ಯಂತ ಹೋರಾಟ ನಡೆಯಬೇಕು. ಕೃಷಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯ ಮಾದರಿಯಲ್ಲೇ ಬ್ಯಾಂಕ್​​ಗಳ ಖಾಸಗೀಕರಣದ ವಿರುದ್ಧವೂ ಹೋರಾಟದ ಅಗತ್ಯವಿದೆ ಎಂದಿದ್ದಾರೆ.

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದರು. ಕಳೆದ ತಿಂಗಳು ಅಂದರೆ ನವೆಂಬರ್​ 19ರಂದು ಪ್ರಧಾನಿ ಮೋದಿ ಆ ಕಾಯ್ದೆಗಳನ್ನು ವಾಪಸ್​ ಪಡೆದಿದ್ದಾರೆ. ಸಂಸತ್ತಿನಲ್ಲಿ ಕೂಡ ಕಾಯ್ದೆಗಳು ರದ್ದುಗೊಂಡಿವೆ. ಆದರೆ ರೈತರು ಆಂದೋಲನ ನಿಲ್ಲಿಸಿಲ್ಲ. ಬದಲಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಗ್ಯಾರಂಟಿ ಕೊಡಬೇಕು, ರೈತರ ವಿರುದ್ಧ ದಾಖಲಿಸಲಾದ ಕೇಸ್​ಗಳನ್ನು ಹಿಂಪಡೆಯಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.  ಸದ್ಯ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇದರಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್​​ಗಳ ಖಾಸಗೀಕರಣ ಸಂಬಂಧ ಮಸೂದೆ ಮಂಡನೆ ಮಾಡಲು ಹಣಕಾಸು ಸಚಿವಾಲಯ ಸಿದ್ಧತೆ ಮಾಡಿಕೊಂಡಿದೆ.

ಇದನ್ನೂ ಓದಿ: ರಂಗೇರಿದ ವಿಧಾನ ಪರಿಷತ್ ಚುನಾವಣೆ ಪ್ರಚಾರ: ಇಂದಿನಿಂದ 3 ದಿನ ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ 

Published On - 9:38 am, Sun, 5 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ