AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡನೆಯಾದ ಮಸೂದೆ ಮೇಲೆ ರೈತ ಸಂಘಟನೆಗಳ ಕಣ್ಣು; ಮತ್ತೊಂದು ಚಳವಳಿಗೆ ಸಿದ್ಧವಾಗಬೇಕು ಎಂದ ರಾಕೇಶ್​ ಟಿಕಾಯತ್​

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದರು. ಕಳೆದ ತಿಂಗಳು ಅಂದರೆ ನವೆಂಬರ್​ 19ರಂದು ಪ್ರಧಾನಿ ಮೋದಿ ಆ ಕಾಯ್ದೆಗಳನ್ನು ವಾಪಸ್​ ಪಡೆದಿದ್ದಾರೆ.

ಮಂಡನೆಯಾದ ಮಸೂದೆ ಮೇಲೆ ರೈತ ಸಂಘಟನೆಗಳ ಕಣ್ಣು; ಮತ್ತೊಂದು ಚಳವಳಿಗೆ ಸಿದ್ಧವಾಗಬೇಕು ಎಂದ ರಾಕೇಶ್​ ಟಿಕಾಯತ್​
ರಾಕೇಶ್ ಟಿಕಾಯತ್
TV9 Web
| Edited By: |

Updated on:Dec 07, 2021 | 10:28 AM

Share

ದೆಹಲಿ: ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆದು, ಅದನ್ನು ಸಂಸತ್ತಿನಲ್ಲಿ ರದ್ದುಗೊಳಿಸಿದ್ದರೂ ರೈತರು ಪ್ರತಿಭಟನೆ ನಿಲ್ಲಿಸುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಒಂದಲ್ಲ, ಒಂದು ಬೇಡಿಕೆಯನ್ನು ಮುಂದಿಟ್ಟುಕೊಂಡು ಹೋರಾಟ ಮುಂದುವರಿಸುತ್ತಲೇ ಇದ್ದಾರೆ. ಇದೀಗ ರೈತರ ಮುಖಂಡ ಕೇಂದ್ರ ಸರ್ಕಾರದ ಹೊಸ ಚಳವಳಿ ಘೋಷಿಸಿದ್ದಾರೆ.   ಬ್ಯಾಂಕ್​​ಗಳ ಖಾಸಗೀಕರಣದ ವಿರುದ್ಧ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರೈತ ಮುಖಂಡ ರಾಕೇಶ್​ ಟಿಕಾಯತ್​, ಸಾರ್ವಜನಿಕ ಬ್ಯಾಂಕ್​​ಗಳನ್ನು ಖಾಸಗೀಕರಣಗೊಳಿಸುವ ಸಂಬಂಧ ಡಿಸೆಂಬರ್​ 6ರಂದು ಸಂಸತ್ತಿನಲ್ಲಿ ಮಸೂದೆ ಮಂಡನೆಯಾಗಲಿದೆ. ಆದರೆ ಅದರ ವಿರುದ್ಧ ದೇಶಾದ್ಯಂತ ಹೋರಾಟ ನಡೆಯಬೇಕು. ಕೃಷಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯ ಮಾದರಿಯಲ್ಲೇ ಬ್ಯಾಂಕ್​​ಗಳ ಖಾಸಗೀಕರಣದ ವಿರುದ್ಧವೂ ಹೋರಾಟದ ಅಗತ್ಯವಿದೆ ಎಂದಿದ್ದಾರೆ.

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದರು. ಕಳೆದ ತಿಂಗಳು ಅಂದರೆ ನವೆಂಬರ್​ 19ರಂದು ಪ್ರಧಾನಿ ಮೋದಿ ಆ ಕಾಯ್ದೆಗಳನ್ನು ವಾಪಸ್​ ಪಡೆದಿದ್ದಾರೆ. ಸಂಸತ್ತಿನಲ್ಲಿ ಕೂಡ ಕಾಯ್ದೆಗಳು ರದ್ದುಗೊಂಡಿವೆ. ಆದರೆ ರೈತರು ಆಂದೋಲನ ನಿಲ್ಲಿಸಿಲ್ಲ. ಬದಲಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಗ್ಯಾರಂಟಿ ಕೊಡಬೇಕು, ರೈತರ ವಿರುದ್ಧ ದಾಖಲಿಸಲಾದ ಕೇಸ್​ಗಳನ್ನು ಹಿಂಪಡೆಯಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.  ಸದ್ಯ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇದರಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್​​ಗಳ ಖಾಸಗೀಕರಣ ಸಂಬಂಧ ಮಸೂದೆ ಮಂಡನೆ ಮಾಡಲು ಹಣಕಾಸು ಸಚಿವಾಲಯ ಸಿದ್ಧತೆ ಮಾಡಿಕೊಂಡಿದೆ.

ಇದನ್ನೂ ಓದಿ: ರಂಗೇರಿದ ವಿಧಾನ ಪರಿಷತ್ ಚುನಾವಣೆ ಪ್ರಚಾರ: ಇಂದಿನಿಂದ 3 ದಿನ ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ 

Published On - 9:38 am, Sun, 5 December 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ