AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಸಿಬ್ಬಂದಿ ಮೇಲಿನ ಹಿಂಸಾಚಾರ ವಿರುದ್ಧ ತಿರುಗಿಬಿದ್ದ ಐಎಂಎ; ಗೃಹ ಸಚಿವ ಅಮಿತ್​ ಶಾಗೆ ಪತ್ರ

ನಿನ್ನೆ ಅಸ್ಸಾಂನಲ್ಲಿ ಇಂಥದ್ದೇ ಒಂದು ಘಟನೆ ನಡೆದಿತ್ತು. ಹೋಜಾಯ್​ ಜಿಲ್ಲೆಯ ಆಸ್ಪತ್ರೆಯಲ್ಲಿ ಕೊವಿಡ್​ 19 ರೋಗಿಯೊಬ್ಬರು ಮೃತಪಟ್ಟ ನಂತರ ಅವರ ಕುಟುಂಬದವರು ವೈದ್ಯರಿಗೆ ಥಳಿಸಿದ್ದರು.

ವೈದ್ಯಕೀಯ ಸಿಬ್ಬಂದಿ ಮೇಲಿನ ಹಿಂಸಾಚಾರ ವಿರುದ್ಧ ತಿರುಗಿಬಿದ್ದ ಐಎಂಎ; ಗೃಹ ಸಚಿವ ಅಮಿತ್​ ಶಾಗೆ ಪತ್ರ
ಅಮಿತ್ ಶಾ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 02, 2021 | 10:45 AM

Share

ಆರೋಗ್ಯ ಕ್ಷೇತ್ರದ ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದು, ಅವರಿಗೆ ಹಿಂಸೆ ಮಾಡುವವರ ವಿರುದ್ಧ ಸಮಗ್ರ, ಏಕರೂಪ ಮತ್ತು ಪರಿಣಾಮಕಾರಿಯಾದ ಕಾನೂನು ಜಾರಿಗೊಳಿಸಿ ಎಂದು ಭಾರತೀಯ ವೈದ್ಯಕೀಯ ಸಂಘ (IMA) ಗೃಹ ಸಚಿವ ಅಮಿತ್​ ಶಾ ಅವರಿಗೆ ಪತ್ರ ಬರೆದಿದೆ. ದೇಶಾದ್ಯಂತ ವೈದ್ಯರು, ನರ್ಸ್​ಗಳ ಮೇಲಿನ ಹಲ್ಲೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಎಂಎ ಕಠಿಣ ಕಾನೂನು ಜಾರಿಗೆ ಆಗ್ರಹಿಸಿದೆ. ದೇಶದಲ್ಲಿ ಕೊವಿಡ್​ 19 ಸೋಂಕು ಹೆಚ್ಚಿದ ಮೇಲೆ ವೈದ್ಯಕೀಯ ಸಿಬ್ಬಂದಿಯನ್ನು ಹಿಂಸಿಸುವುದು, ಅವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಕೊವಿಡ್​ 19 ಮೊದಲ ಅಲೆಯ ಸಂದರ್ಭದಲ್ಲಂತೂ ಅನೇಕ ಕಡೆಗಳಲ್ಲಿ ಇಂಥ ಘಟನೆಗಳು ನಡೆದಿದ್ದವು.

ನಿನ್ನೆ ಅಸ್ಸಾಂನಲ್ಲಿ ಇಂಥದ್ದೇ ಒಂದು ಘಟನೆ ನಡೆದಿತ್ತು. ಹೋಜಾಯ್​ ಜಿಲ್ಲೆಯ ಆಸ್ಪತ್ರೆಯಲ್ಲಿ ಕೊವಿಡ್​ 19 ರೋಗಿಯೊಬ್ಬರು ಮೃತಪಟ್ಟ ನಂತರ ಅವರ ಕುಟುಂಬದವರು ವೈದ್ಯರಿಗೆ ಥಳಿಸಿದ್ದರು. ಮಂಗಳವಾರ ಮಧ್ಯಾಹ್ನ 1.30ರಹೊತ್ತಿಗೆ ನಡೆದ ಈ ಘಟನೆಯ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಐಎಂಎ ಗೃಹ ಸಚಿವರಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿದೆ. ಆರೋಗ್ಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ನಿಯಮ ಜಾರಿಗೊಳಿಸಿ ಎಂದು ಒತ್ತಾಯಿಸಿದೆ.

ಕೊವಿಡ್​ 19 ವಿರುದ್ಧ ಹೋರಾಟ ಮಾಡಲು ಇಡೀ ವೈದ್ಯಕೀಯ ಕ್ಷೇತ್ರ ಮುಂಚೂಣಿಯಲ್ಲಿ ನಿಂತಿದೆ. ಅವಿರತವಾಗಿ ಶ್ರಮಿಸುತ್ತಿದ್ದೇವೆ. ಆದರೆ ಇಂಥ ವೈದ್ಯಕೀಯ ಸಿಬ್ಬಂದಿ ಜೀವಕ್ಕೇ ಅಪಾಯ ಇದೆ ಎಂದು ಐಎಂಎ ತನ್ನ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿ: Coronavirus Cases in India: ಭಾರತದಲ್ಲಿ ಒಂದೇ ದಿನ 1.32 ಲಕ್ಷ ಹೊಸ ಕೊವಿಡ್ ಪ್ರಕರಣ, 3207 ಸಾವು

(Needs effective law against healthcare violence IMA Letter to Home Minister Amit Shah)

Published On - 10:44 am, Wed, 2 June 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್