AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಸಿಬ್ಬಂದಿ ಮೇಲಿನ ಹಿಂಸಾಚಾರ ವಿರುದ್ಧ ತಿರುಗಿಬಿದ್ದ ಐಎಂಎ; ಗೃಹ ಸಚಿವ ಅಮಿತ್​ ಶಾಗೆ ಪತ್ರ

ನಿನ್ನೆ ಅಸ್ಸಾಂನಲ್ಲಿ ಇಂಥದ್ದೇ ಒಂದು ಘಟನೆ ನಡೆದಿತ್ತು. ಹೋಜಾಯ್​ ಜಿಲ್ಲೆಯ ಆಸ್ಪತ್ರೆಯಲ್ಲಿ ಕೊವಿಡ್​ 19 ರೋಗಿಯೊಬ್ಬರು ಮೃತಪಟ್ಟ ನಂತರ ಅವರ ಕುಟುಂಬದವರು ವೈದ್ಯರಿಗೆ ಥಳಿಸಿದ್ದರು.

ವೈದ್ಯಕೀಯ ಸಿಬ್ಬಂದಿ ಮೇಲಿನ ಹಿಂಸಾಚಾರ ವಿರುದ್ಧ ತಿರುಗಿಬಿದ್ದ ಐಎಂಎ; ಗೃಹ ಸಚಿವ ಅಮಿತ್​ ಶಾಗೆ ಪತ್ರ
ಅಮಿತ್ ಶಾ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 02, 2021 | 10:45 AM

Share

ಆರೋಗ್ಯ ಕ್ಷೇತ್ರದ ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದು, ಅವರಿಗೆ ಹಿಂಸೆ ಮಾಡುವವರ ವಿರುದ್ಧ ಸಮಗ್ರ, ಏಕರೂಪ ಮತ್ತು ಪರಿಣಾಮಕಾರಿಯಾದ ಕಾನೂನು ಜಾರಿಗೊಳಿಸಿ ಎಂದು ಭಾರತೀಯ ವೈದ್ಯಕೀಯ ಸಂಘ (IMA) ಗೃಹ ಸಚಿವ ಅಮಿತ್​ ಶಾ ಅವರಿಗೆ ಪತ್ರ ಬರೆದಿದೆ. ದೇಶಾದ್ಯಂತ ವೈದ್ಯರು, ನರ್ಸ್​ಗಳ ಮೇಲಿನ ಹಲ್ಲೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಎಂಎ ಕಠಿಣ ಕಾನೂನು ಜಾರಿಗೆ ಆಗ್ರಹಿಸಿದೆ. ದೇಶದಲ್ಲಿ ಕೊವಿಡ್​ 19 ಸೋಂಕು ಹೆಚ್ಚಿದ ಮೇಲೆ ವೈದ್ಯಕೀಯ ಸಿಬ್ಬಂದಿಯನ್ನು ಹಿಂಸಿಸುವುದು, ಅವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಕೊವಿಡ್​ 19 ಮೊದಲ ಅಲೆಯ ಸಂದರ್ಭದಲ್ಲಂತೂ ಅನೇಕ ಕಡೆಗಳಲ್ಲಿ ಇಂಥ ಘಟನೆಗಳು ನಡೆದಿದ್ದವು.

ನಿನ್ನೆ ಅಸ್ಸಾಂನಲ್ಲಿ ಇಂಥದ್ದೇ ಒಂದು ಘಟನೆ ನಡೆದಿತ್ತು. ಹೋಜಾಯ್​ ಜಿಲ್ಲೆಯ ಆಸ್ಪತ್ರೆಯಲ್ಲಿ ಕೊವಿಡ್​ 19 ರೋಗಿಯೊಬ್ಬರು ಮೃತಪಟ್ಟ ನಂತರ ಅವರ ಕುಟುಂಬದವರು ವೈದ್ಯರಿಗೆ ಥಳಿಸಿದ್ದರು. ಮಂಗಳವಾರ ಮಧ್ಯಾಹ್ನ 1.30ರಹೊತ್ತಿಗೆ ನಡೆದ ಈ ಘಟನೆಯ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಐಎಂಎ ಗೃಹ ಸಚಿವರಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿದೆ. ಆರೋಗ್ಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ನಿಯಮ ಜಾರಿಗೊಳಿಸಿ ಎಂದು ಒತ್ತಾಯಿಸಿದೆ.

ಕೊವಿಡ್​ 19 ವಿರುದ್ಧ ಹೋರಾಟ ಮಾಡಲು ಇಡೀ ವೈದ್ಯಕೀಯ ಕ್ಷೇತ್ರ ಮುಂಚೂಣಿಯಲ್ಲಿ ನಿಂತಿದೆ. ಅವಿರತವಾಗಿ ಶ್ರಮಿಸುತ್ತಿದ್ದೇವೆ. ಆದರೆ ಇಂಥ ವೈದ್ಯಕೀಯ ಸಿಬ್ಬಂದಿ ಜೀವಕ್ಕೇ ಅಪಾಯ ಇದೆ ಎಂದು ಐಎಂಎ ತನ್ನ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿ: Coronavirus Cases in India: ಭಾರತದಲ್ಲಿ ಒಂದೇ ದಿನ 1.32 ಲಕ್ಷ ಹೊಸ ಕೊವಿಡ್ ಪ್ರಕರಣ, 3207 ಸಾವು

(Needs effective law against healthcare violence IMA Letter to Home Minister Amit Shah)

Published On - 10:44 am, Wed, 2 June 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್