Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಸಿಬ್ಬಂದಿ ಮೇಲಿನ ಹಿಂಸಾಚಾರ ವಿರುದ್ಧ ತಿರುಗಿಬಿದ್ದ ಐಎಂಎ; ಗೃಹ ಸಚಿವ ಅಮಿತ್​ ಶಾಗೆ ಪತ್ರ

ನಿನ್ನೆ ಅಸ್ಸಾಂನಲ್ಲಿ ಇಂಥದ್ದೇ ಒಂದು ಘಟನೆ ನಡೆದಿತ್ತು. ಹೋಜಾಯ್​ ಜಿಲ್ಲೆಯ ಆಸ್ಪತ್ರೆಯಲ್ಲಿ ಕೊವಿಡ್​ 19 ರೋಗಿಯೊಬ್ಬರು ಮೃತಪಟ್ಟ ನಂತರ ಅವರ ಕುಟುಂಬದವರು ವೈದ್ಯರಿಗೆ ಥಳಿಸಿದ್ದರು.

ವೈದ್ಯಕೀಯ ಸಿಬ್ಬಂದಿ ಮೇಲಿನ ಹಿಂಸಾಚಾರ ವಿರುದ್ಧ ತಿರುಗಿಬಿದ್ದ ಐಎಂಎ; ಗೃಹ ಸಚಿವ ಅಮಿತ್​ ಶಾಗೆ ಪತ್ರ
ಅಮಿತ್ ಶಾ (ಸಂಗ್ರಹ ಚಿತ್ರ)
Follow us
TV9 Web
| Updated By: Lakshmi Hegde

Updated on:Jun 02, 2021 | 10:45 AM

ಆರೋಗ್ಯ ಕ್ಷೇತ್ರದ ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದು, ಅವರಿಗೆ ಹಿಂಸೆ ಮಾಡುವವರ ವಿರುದ್ಧ ಸಮಗ್ರ, ಏಕರೂಪ ಮತ್ತು ಪರಿಣಾಮಕಾರಿಯಾದ ಕಾನೂನು ಜಾರಿಗೊಳಿಸಿ ಎಂದು ಭಾರತೀಯ ವೈದ್ಯಕೀಯ ಸಂಘ (IMA) ಗೃಹ ಸಚಿವ ಅಮಿತ್​ ಶಾ ಅವರಿಗೆ ಪತ್ರ ಬರೆದಿದೆ. ದೇಶಾದ್ಯಂತ ವೈದ್ಯರು, ನರ್ಸ್​ಗಳ ಮೇಲಿನ ಹಲ್ಲೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಎಂಎ ಕಠಿಣ ಕಾನೂನು ಜಾರಿಗೆ ಆಗ್ರಹಿಸಿದೆ. ದೇಶದಲ್ಲಿ ಕೊವಿಡ್​ 19 ಸೋಂಕು ಹೆಚ್ಚಿದ ಮೇಲೆ ವೈದ್ಯಕೀಯ ಸಿಬ್ಬಂದಿಯನ್ನು ಹಿಂಸಿಸುವುದು, ಅವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಕೊವಿಡ್​ 19 ಮೊದಲ ಅಲೆಯ ಸಂದರ್ಭದಲ್ಲಂತೂ ಅನೇಕ ಕಡೆಗಳಲ್ಲಿ ಇಂಥ ಘಟನೆಗಳು ನಡೆದಿದ್ದವು.

ನಿನ್ನೆ ಅಸ್ಸಾಂನಲ್ಲಿ ಇಂಥದ್ದೇ ಒಂದು ಘಟನೆ ನಡೆದಿತ್ತು. ಹೋಜಾಯ್​ ಜಿಲ್ಲೆಯ ಆಸ್ಪತ್ರೆಯಲ್ಲಿ ಕೊವಿಡ್​ 19 ರೋಗಿಯೊಬ್ಬರು ಮೃತಪಟ್ಟ ನಂತರ ಅವರ ಕುಟುಂಬದವರು ವೈದ್ಯರಿಗೆ ಥಳಿಸಿದ್ದರು. ಮಂಗಳವಾರ ಮಧ್ಯಾಹ್ನ 1.30ರಹೊತ್ತಿಗೆ ನಡೆದ ಈ ಘಟನೆಯ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಐಎಂಎ ಗೃಹ ಸಚಿವರಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿದೆ. ಆರೋಗ್ಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ನಿಯಮ ಜಾರಿಗೊಳಿಸಿ ಎಂದು ಒತ್ತಾಯಿಸಿದೆ.

ಕೊವಿಡ್​ 19 ವಿರುದ್ಧ ಹೋರಾಟ ಮಾಡಲು ಇಡೀ ವೈದ್ಯಕೀಯ ಕ್ಷೇತ್ರ ಮುಂಚೂಣಿಯಲ್ಲಿ ನಿಂತಿದೆ. ಅವಿರತವಾಗಿ ಶ್ರಮಿಸುತ್ತಿದ್ದೇವೆ. ಆದರೆ ಇಂಥ ವೈದ್ಯಕೀಯ ಸಿಬ್ಬಂದಿ ಜೀವಕ್ಕೇ ಅಪಾಯ ಇದೆ ಎಂದು ಐಎಂಎ ತನ್ನ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿ: Coronavirus Cases in India: ಭಾರತದಲ್ಲಿ ಒಂದೇ ದಿನ 1.32 ಲಕ್ಷ ಹೊಸ ಕೊವಿಡ್ ಪ್ರಕರಣ, 3207 ಸಾವು

(Needs effective law against healthcare violence IMA Letter to Home Minister Amit Shah)

Published On - 10:44 am, Wed, 2 June 21

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು