AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಸಿಬ್ಬಂದಿ ಮೇಲಿನ ಹಿಂಸಾಚಾರ ವಿರುದ್ಧ ತಿರುಗಿಬಿದ್ದ ಐಎಂಎ; ಗೃಹ ಸಚಿವ ಅಮಿತ್​ ಶಾಗೆ ಪತ್ರ

ನಿನ್ನೆ ಅಸ್ಸಾಂನಲ್ಲಿ ಇಂಥದ್ದೇ ಒಂದು ಘಟನೆ ನಡೆದಿತ್ತು. ಹೋಜಾಯ್​ ಜಿಲ್ಲೆಯ ಆಸ್ಪತ್ರೆಯಲ್ಲಿ ಕೊವಿಡ್​ 19 ರೋಗಿಯೊಬ್ಬರು ಮೃತಪಟ್ಟ ನಂತರ ಅವರ ಕುಟುಂಬದವರು ವೈದ್ಯರಿಗೆ ಥಳಿಸಿದ್ದರು.

ವೈದ್ಯಕೀಯ ಸಿಬ್ಬಂದಿ ಮೇಲಿನ ಹಿಂಸಾಚಾರ ವಿರುದ್ಧ ತಿರುಗಿಬಿದ್ದ ಐಎಂಎ; ಗೃಹ ಸಚಿವ ಅಮಿತ್​ ಶಾಗೆ ಪತ್ರ
ಅಮಿತ್ ಶಾ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 02, 2021 | 10:45 AM

Share

ಆರೋಗ್ಯ ಕ್ಷೇತ್ರದ ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದು, ಅವರಿಗೆ ಹಿಂಸೆ ಮಾಡುವವರ ವಿರುದ್ಧ ಸಮಗ್ರ, ಏಕರೂಪ ಮತ್ತು ಪರಿಣಾಮಕಾರಿಯಾದ ಕಾನೂನು ಜಾರಿಗೊಳಿಸಿ ಎಂದು ಭಾರತೀಯ ವೈದ್ಯಕೀಯ ಸಂಘ (IMA) ಗೃಹ ಸಚಿವ ಅಮಿತ್​ ಶಾ ಅವರಿಗೆ ಪತ್ರ ಬರೆದಿದೆ. ದೇಶಾದ್ಯಂತ ವೈದ್ಯರು, ನರ್ಸ್​ಗಳ ಮೇಲಿನ ಹಲ್ಲೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಎಂಎ ಕಠಿಣ ಕಾನೂನು ಜಾರಿಗೆ ಆಗ್ರಹಿಸಿದೆ. ದೇಶದಲ್ಲಿ ಕೊವಿಡ್​ 19 ಸೋಂಕು ಹೆಚ್ಚಿದ ಮೇಲೆ ವೈದ್ಯಕೀಯ ಸಿಬ್ಬಂದಿಯನ್ನು ಹಿಂಸಿಸುವುದು, ಅವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಕೊವಿಡ್​ 19 ಮೊದಲ ಅಲೆಯ ಸಂದರ್ಭದಲ್ಲಂತೂ ಅನೇಕ ಕಡೆಗಳಲ್ಲಿ ಇಂಥ ಘಟನೆಗಳು ನಡೆದಿದ್ದವು.

ನಿನ್ನೆ ಅಸ್ಸಾಂನಲ್ಲಿ ಇಂಥದ್ದೇ ಒಂದು ಘಟನೆ ನಡೆದಿತ್ತು. ಹೋಜಾಯ್​ ಜಿಲ್ಲೆಯ ಆಸ್ಪತ್ರೆಯಲ್ಲಿ ಕೊವಿಡ್​ 19 ರೋಗಿಯೊಬ್ಬರು ಮೃತಪಟ್ಟ ನಂತರ ಅವರ ಕುಟುಂಬದವರು ವೈದ್ಯರಿಗೆ ಥಳಿಸಿದ್ದರು. ಮಂಗಳವಾರ ಮಧ್ಯಾಹ್ನ 1.30ರಹೊತ್ತಿಗೆ ನಡೆದ ಈ ಘಟನೆಯ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಐಎಂಎ ಗೃಹ ಸಚಿವರಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿದೆ. ಆರೋಗ್ಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ನಿಯಮ ಜಾರಿಗೊಳಿಸಿ ಎಂದು ಒತ್ತಾಯಿಸಿದೆ.

ಕೊವಿಡ್​ 19 ವಿರುದ್ಧ ಹೋರಾಟ ಮಾಡಲು ಇಡೀ ವೈದ್ಯಕೀಯ ಕ್ಷೇತ್ರ ಮುಂಚೂಣಿಯಲ್ಲಿ ನಿಂತಿದೆ. ಅವಿರತವಾಗಿ ಶ್ರಮಿಸುತ್ತಿದ್ದೇವೆ. ಆದರೆ ಇಂಥ ವೈದ್ಯಕೀಯ ಸಿಬ್ಬಂದಿ ಜೀವಕ್ಕೇ ಅಪಾಯ ಇದೆ ಎಂದು ಐಎಂಎ ತನ್ನ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿ: Coronavirus Cases in India: ಭಾರತದಲ್ಲಿ ಒಂದೇ ದಿನ 1.32 ಲಕ್ಷ ಹೊಸ ಕೊವಿಡ್ ಪ್ರಕರಣ, 3207 ಸಾವು

(Needs effective law against healthcare violence IMA Letter to Home Minister Amit Shah)

Published On - 10:44 am, Wed, 2 June 21

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ