AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neeraj Chopra: 75 ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಚಿನ್ನದ ಹುಡುಗ ನೀರಜ್ ಚೋಪ್ರಾ

ಸಂಸ್ಕೃತಧಾಮಕ್ಕೆ ಭೇಟಿ ನೀಡಿದ ವೇಳೆ ಅವರು ಅಲ್ಲಿ ಸೇರಿದ್ದ ವಿದ್ಯಾರ್ಥಿಗಳೊಂದಿಗೆ ವಿವಿಧ ರೀತಿ ಆಟಗಳನ್ನು ಆಡುವ ಮೂಲಕ ಭಾರತದ ಚಿನ್ನದ ಹುಡುಗ ತಮ್ಮ ಅಮೂಲ್ಯ ಸಮಯವನ್ನು ಮಕ್ಕಳೊಂದಿಗೆ ಮಗುವಾಗಿ ಕಳೆದಿದ್ದಾರೆ.

Neeraj Chopra: 75 ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಚಿನ್ನದ ಹುಡುಗ ನೀರಜ್ ಚೋಪ್ರಾ
ವಿದ್ಯಾರ್ಥಿಗಳೊಂದಿಗೆ ನೀರಜ್ ಚೋಪ್ರಾ
TV9 Web
| Edited By: |

Updated on: Dec 05, 2021 | 6:23 PM

Share

ಅಹಮದಾಬಾದ್: ಒಲಿಂಪಿಕ್ಸ್​ ನಲ್ಲಿ ಭಾಗವಹಿಸಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಭಾರತದ ಕೀರ್ತಿ ಹೆಚ್ಚಿಸಿದ ನೀರಜ್ ಚೋಪ್ರಾ (Neeraj Chopra) ಇಂದು ಅಹಮದಾಬಾದ್​ನ (Ahmedabad) ಸಂಸ್ಕೃತಧಾಮಕ್ಕೆ ಭೇಟಿ ನೀಡಿದ್ದರು. ಈ ವೇಳೆ 75 ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳೊಂದಿಗೆ ತಮ್ಮ ಸಮಯವನ್ನು ಕಳೆದರು. ಈ ಮೂಲಕ ಪ್ರಧಾನಿ ನರೆಂದ್ರ ಮೋದಿ (PM Narendra Modi) ಅವರ ಮಹಾತ್ವಾಕಾಂಕ್ಷಿ ಯೋಜನೆಯಾದ ಕ್ರೀಡಾಪಟುಗಳು ಮಕ್ಕಳೊಂದಿಗೆ ಸಂವಾದ ನಡೆಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಯೋಜನೆಯನ್ನು ಶಿಕ್ಷಣ ಸಚಿವಾಲಯ ಮತ್ತು ಕ್ರೀಡಾ ಸಚಿವಾಲಯಗಳು ಜಂಟಿಯಾಗಿ ಆಯೋಜಿಸುತ್ತಿದೆ.

ಸಂಸ್ಕೃತಧಾಮಕ್ಕೆ ಭೇಟಿ ನೀಡಿದ ವೇಳೆ ಅವರು ಅಲ್ಲಿ ಸೇರಿದ್ದ ವಿದ್ಯಾರ್ಥಿಗಳೊಂದಿಗೆ ವಿವಿಧ ರೀತಿ ಆಟಗಳನ್ನು ಆಡುವ ಮೂಲಕ ಭಾರತದ ಚಿನ್ನದ ಹುಡುಗ ತಮ್ಮ ಅಮೂಲ್ಯ ಸಮಯವನ್ನು ಮಕ್ಕಳೊಂದಿಗೆ ಮಗುವಾಗಿ ಕಳೆದಿದ್ದಾರೆ. ಜತೆಗೆ ಜಾವಲಿನ್​ ಎಸೆತ, ಜೀವನಶೈಲಿ ಕುರಿತಾಗಿ ಸಮತೋಲಿತ ಆಹಾರ ಸೇವನೆ, ಫಿಟ್ನೆಸ್ ಮತ್ತು ಕ್ರೀಡೆಯ ಪ್ರಾಮುಖ್ಯತೆ ಕುರಿತು ಮಕ್ಕಳಿಗೆ ಸಲಹೆ ನೀಡಿದರು.

ಮಕ್ಕಳೊಂದಿಗೆ ಬೆರೆತ ನೀರಜ್ ಚೋಪ್ರಾ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಪ್ರಶ್ನೆಗೆ ಉತ್ತರಿಸುವ ವೇಳೆ ತಮ್ಮ ನೆಚ್ಚಿನ ಆಹಾರ ಶೈಲಿ ಕುರಿತು ಮಾತನಾಡಿದ ಅವರು, ಕಡಿಮೆ ಮಸಾಲೆಯುಕ್ತ ಬಿರಿಯಾನಿಯನ್ನು ನಾನು ಇಷ್ಟಪಡುತ್ತೇನೆ. ಜತೆಗೆ ತರಕಾರಿಗಳ ಸೇವನೆಯಿಂದ ದೇಹಕ್ಕೆ ಬೇಕಾದ ಕಾರ್ಬೋಹೈಡ್ರೆಟ್ ಹೆಚ್ಚಿನ ಪ್ರಮಾಣದಲ್ಲಿ ಸಿಗುತ್ತದೆ. ಇದಲ್ಲದೆ, ಅಡುಗೆ ಮಾಡುವುದರಿಂದ ಸುದೀರ್ಘ ಸಮಯದವರೆಗೆ ತರಬೇತಿಯಲ್ಲಿದ್ದ ಮನಸ್ಥಿತಿಗೆ ಹೊಸ ವಾತಾವರಣ ಕಲ್ಪಿಸಿಕೊಟ್ಟಂತಾಗುತ್ತದೆ ಎಂದರು.

ಇದೇ ವೇಳೆ ನೀರಜ್ ಚೋಪ್ರಾ ಈ ಯೋಜನೆಯಿಂದ ಯುವಜನತೆಗೆ ಫಿಟ್ನೆಸ್ ಬಗೆಗಿನ ಮಾಹಿತಿ ಹಾಗೂ ಸದೃಢ ದೇಹವನ್ನು ಹೊಂದಲು ಬೇಕಾದ ಸಮತೋಲಿತ ಆಹಾರಗಳ ಬಗೆಗೆ ತಿಳಿಸಿಕೊಡಲು ಅನುಕೂಲಕರವಾಗಿದೆ ಎಂದು ಅಭಿಪ್ರಾಯಪಟ್ಟರುಕಾರ್ಯಕ್ರಮದಲ್ಲಿ ನೀರಜ್ ಚೋಪ್ರಾ ಅವರನ್ನು ಸಂಸ್ಕೃತಧಾಮ ಎಜುಕೇಷನಲ್ ಸೊಸೈಟಿ ವತಿಯಿಂದ ಸನ್ಮಾನಿಸಲಾಯಿತು.

ಇದನ್ನೂ ಓದಿ: 

IND vs NZ: ವಾಂಖೆಡೆಯಲ್ಲಿ 13 ವರ್ಷಗಳ ಹಳೆಯ ದಾಖಲೆ ಮುರಿದ ಭಾರತ..!

IPL 2022: ಹೊಸ ಫ್ರಾಂಚೈಸಿಗಳು ಖರೀದಿಸುವ 6 ಆಟಗಾರರನ್ನು ಹೆಸರಿಸಿದ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ