AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಾದ ಹಾಸ್ಟೆಲ್‌ನ 6ನೇ ಮಹಡಿಯಿಂದ ಬಿದ್ದು 20ರ ಹರೆಯದ ವೈದ್ಯಕೀಯ ಆಕಾಂಕ್ಷಿ ಸಾವು

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಧುಪ್ಗುರಿ ನಿವಾಸಿಯಾದ ಇಶಾಂಶು ಕಳೆದ ವರ್ಷ ಆಗಸ್ಟ್‌ನಲ್ಲಿ ಕೋಟಾಕ್ಕೆ ಬಂದು ವೈದ್ಯಕೀಯ ಪ್ರವೇಶ ಪರೀಕ್ಷೆಯ ನೀಟ್‌ಗೆ ತಯಾರಿ ನಡೆಸುತ್ತಿದ್ದರು. ಆತ ತನ್ನ ಮೂವರು ಹಾಸ್ಟೆಲ್ ಮೇಟ್‌ಗಳೊಂದಿಗೆ ಕಟ್ಟಡದ ಆರನೇ ಮಹಡಿಯಲ್ಲಿರುವ ಬಾಲ್ಕನಿಯಲ್ಲಿ ಮಾತನಾಡುತ್ತಿದ್ದ

ಕೋಟಾದ ಹಾಸ್ಟೆಲ್‌ನ 6ನೇ ಮಹಡಿಯಿಂದ ಬಿದ್ದು 20ರ ಹರೆಯದ ವೈದ್ಯಕೀಯ ಆಕಾಂಕ್ಷಿ ಸಾವು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 03, 2023 | 5:24 PM

Share

ಕೋಟಾ: ಪಶ್ಚಿಮ ಬಂಗಾಳದ (West Bengal) 20 ವರ್ಷದ ನೀಟ್ (NEET) ಆಕಾಂಕ್ಷಿಯೊಬ್ಬರು ಇಲ್ಲಿನ ಜವಾಹರ್ ನಗರ ಪ್ರದೇಶದಲ್ಲಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಇಶಾಂಶು ಭಟ್ಟಾಚಾರ್ಯ ಎಂಬ ವಿದ್ಯಾರ್ಥಿ ಆಯತಪ್ಪಿ ಬಾಲ್ಕನಿಯ ಅಲ್ಯೂಮಿನಿಯಂ ರೇಲಿಂಗ್‌ಗೆ ಬಿದ್ದಿದ್ದು ಆ ರೇಲಿಂಗ್ ಮುರಿದು ಬಿದ್ದು ಆತನ ಸಾವು ಸಂಭವಿಸಿದೆ ಎಂದು ಸರ್ಕಲ್ ಆಫೀಸರ್ ಅಮರ್ ಸಿಂಗ್ ಹೇಳಿದ್ದಾರೆ. ಅವರು ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಕರೆತಂದಿದ್ದು ವೈದರೂ ವಿದ್ಯಾರ್ಥಿ ಸಾವಿಗೀಡಾಗಿರುವುದಾಗಿ ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಧುಪ್ಗುರಿ ನಿವಾಸಿಯಾದ ಇಶಾಂಶು ಕಳೆದ ವರ್ಷ ಆಗಸ್ಟ್‌ನಲ್ಲಿ ಕೋಟಾಕ್ಕೆ ಬಂದು ವೈದ್ಯಕೀಯ ಪ್ರವೇಶ ಪರೀಕ್ಷೆಯ ನೀಟ್‌ಗೆ ತಯಾರಿ ನಡೆಸುತ್ತಿದ್ದರು. ಆತ ತನ್ನ ಮೂವರು ಹಾಸ್ಟೆಲ್ ಮೇಟ್‌ಗಳೊಂದಿಗೆ ಕಟ್ಟಡದ ಆರನೇ ಮಹಡಿಯಲ್ಲಿರುವ ಬಾಲ್ಕನಿಯಲ್ಲಿ ಮಾತನಾಡುತ್ತಿದ್ದ.  ಮಧ್ಯರಾತ್ರಿಯ ಸುಮಾರಿಗೆ ಅವರು ತಮ್ಮ ಕೋಣೆಗೆ ಹಿಂತಿರುಗುತ್ತಿದ್ದಾಗ, ಆಯತಪ್ಪಿ ಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.

ಸಂತ್ರಸ್ತರ ಮೃತದೇಹವನ್ನು ಎಂಬಿಎಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವರ ಕುಟುಂಬ ಸದಸ್ಯರು ಬಂದ ನಂತರ ನಡೆಸಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ:Baba Ramdev: ಮೊದಲು ನಮಾಜ್ ಓದುವುದು, ನಂತರ ಹಿಂದೂ ಹೆಣ್ಣುಮಕ್ಕಳನ್ನು ಅಪಹರಿಸುವುದು, ಭಯೋತ್ಪಾದನೆ ಸೃಷ್ಟಿಸುವುದು: ಬಾಬಾ ರಾಮ್​ದೇವ್

ಜನವರಿ 29 ರಂದು ಇದೇ ರೀತಿಯ ಘಟನೆಯಲ್ಲಿ, ಕೋಟಾದಲ್ಲಿ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮಹಾರಾಷ್ಟ್ರದ 17 ವರ್ಷದ ಜೆಇಇ ಮೇನ್ಸ್ ಆಕಾಂಕ್ಷಿಯೊಬ್ಬರು ತಮ್ಮ ಹಾಸ್ಟೆಲ್ ಕಟ್ಟಡದ ಮೊದಲ ಮಹಡಿಯ ಬಾಲ್ಕನಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!