AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಪರೀಕ್ಷೆಯಲ್ಲಿ ಅಕ್ರಮ: ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಪ್ರಶಂಸಿದ ಭಾರತೀಯ ವೈದ್ಯಕೀಯ ಸಂಘ

ನೀಟ್ (ಯುಜಿ) ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮಕೈಗೊಂಡ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಭಾರತೀಯ ವೈದ್ಯಕೀಯ ಸಂಘವು ಅಭಿನಂದಿಸಿದೆ. ಪ್ರಧಾನಿ ಮೋದಿ ಸೇರಿದಂತೆ ಕೆಲ ರಾಷ್ಟ್ರೀಯ ನಾಯಕರಿಗೆ ಕೃತಜ್ಞತೆ ಸಲ್ಲಿಸಲಾಗಿದೆ. ನೀಟ್ ಯುಜಿ ಪರೀಕ್ಷೆಯಲ್ಲಿನ ಅಕ್ರಮವನ್ನು ಸಮಗ್ರ ತನಿಖೆಗಾಗಿ ಸಿಬಿಐಗೆ ವರ್ಗಾಯಿಸಿದ್ದಕ್ಕಾಗಿ ನಾವು ಶಿಕ್ಷಣ ಸಚಿವಾಲಯಕ್ಕೆ ನಮ್ಮ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.

ನೀಟ್ ಪರೀಕ್ಷೆಯಲ್ಲಿ ಅಕ್ರಮ: ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಪ್ರಶಂಸಿದ ಭಾರತೀಯ ವೈದ್ಯಕೀಯ ಸಂಘ
ನೀಟ್ ಪರೀಕ್ಷೆಯಲ್ಲಿ ಅಕ್ರಮ: ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಪ್ರಶಂಸಿದ ಭಾರತೀಯ ವೈದ್ಯಕೀಯ ಸಂಘ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 23, 2024 | 10:06 PM

ದೆಹಲಿ, ಜೂನ್​ 23: ನೀಟ್ (NEET-UG) ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮಕೈಗೊಂಡ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಭಾರತೀಯ ವೈದ್ಯಕೀಯ ಸಂಘವು (Indian Medical Association) ಅಭಿನಂದಿಸಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು  ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ಅವರಿಗೆ ವಿಶೇಷವಾಗಿ ಕೃತಜ್ಞತೆ ಸಲ್ಲಿಸಿದೆ.

ನೀಟ್ ಯುಜಿ ಪರೀಕ್ಷೆಯಲ್ಲಿನ ಅಕ್ರಮವನ್ನು ಸಮಗ್ರ ತನಿಖೆಗಾಗಿ ಸಿಬಿಐಗೆ ವರ್ಗಾಯಿಸಿದ್ದಕ್ಕಾಗಿ ನಾವು ಶಿಕ್ಷಣ ಸಚಿವಾಲಯಕ್ಕೆ ನಮ್ಮ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಯ ಮಹಾನಿರ್ದೇಶಕರನ್ನು ಹುದ್ದೆಯಿಂದ ವಜಾ ಮಾಡಿ, ಪ್ರದೀಪ್ ಕುಮಾರ್ ಖರೋಕಾ ಅವರನ್ನು ಮಹಾನಿರ್ದೇಶಕರನ್ನಾಗಿ ಮಾಡಿ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದಕ್ಕೆ ನಾವು ಸರ್ಕಾರಕ್ಕೆ ಕೃತಜ್ಞರಾಗಿರುತ್ತೇವೆ.

ಇದನ್ನೂ ಓದಿ: ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತನಿಖೆ ಜವಾಬ್ದಾರಿ ಸಿಬಿಐಗೆ ವಹಿಸಿದ ಶಿಕ್ಷಣ ಸಚಿವಾಲಯ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ದುಷ್ಕೃತ್ಯ ಮತ್ತು ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ್ದಕ್ಕಾಗಿ ನಾವು ಸರ್ಕಾರವನ್ನು ಪ್ರಶಂಸಿಸುತ್ತೇವೆ. ಅಕ್ರಮದಲ್ಲಿ ಒಳಗಾದ ಪರೀಕ್ಷಾ ಅಧಿಕಾರಿಗಳು, ಸೇವಾ ಪೂರೈಕೆದಾರರು ಅಥವಾ ಇತರೆ ಸಂಸ್ಥೆಗಳನ್ನು ಒಳಗೊಂಡ ಸಂಘಟಿತ ಅಪರಾಧಿಗಳು 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ ರೂ. 1 ಕೋಟಿ ರೂ. ದಂಡ ಕಟ್ಟಬೇಕಿದೆ.

ಪ್ರಸ್ತುತ ವಿದ್ಯಾರ್ಥಿಗಳು ಭಾರತದ ಭವಿಷ್ಯ. ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ಶ್ರದ್ಧೆ ಮತ್ತು ಗೌಪ್ಯತೆಯಿಂದ ನಡೆಸುವುದು ನಿರ್ಣಾಯಕವಾಗಿದೆ. ನೀಟ್ ಪಿಜಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳು ಸರ್ಕಾರದ ಸ್ವಾಗತಾರ್ಹ ಸುಧಾರಣೆಗಳ ಭಾಗವಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘವು ವಿಶ್ವಾಸ ವ್ಯಕ್ತಪಡಿಸಿದ್ದು, ಸರ್ಕಾರವು ಭರವಸೆ ನೀಡಿದಂತೆ ದೃಢವಾದ ಕಾರ್ಯವಿಧಾನವನ್ನು ನಾವು ಭಾವಿಸುತ್ತೇವೆ.

ಇದನ್ನೂ ಓದಿ: ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ: ಉನ್ನತ ಮಟ್ಟದ ಸಮಿತಿ ರಚನೆ, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವುದು ನಮ್ಮ ಬದ್ಧತೆ: ಧರ್ಮೇಂದ್ರ ಪ್ರಧಾನ್

ಭಾರತೀಯ ವೈದ್ಯಕೀಯ ಸಂಘವು ಸರ್ಕಾರದ ನಿರ್ಧಾರಗಳನ್ನು ಸ್ವಾಗತಿಸುವುದಲ್ಲದೆ, ಈ ನಿಟ್ಟಿನಲ್ಲಿ ತೆಗೆದುಕೊಂಡ ಸಮಯೋಚಿತ ಕ್ರಮಗಳನ್ನು ಶ್ಲಾಘಿಸುತ್ತದೆ. ಇನ್ನು ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಇತರೆ ಕೋರ್ಸ್‌ಗಳಿಗೆ ಪ್ರವೇಶವು ಸಮಯಕ್ಕೆ ಸರಿಯಾಗಿ ಪ್ರಾರಂಭವಾಗುತ್ತದೆ. ನಮ್ಮ ಮುಂದಿನ ಪೀಳಿಗೆಯ ಸುರಕ್ಷಿತ ಮತ್ತು ಸುಭದ್ರ ಭವಿಷ್ಯಕ್ಕಾಗಿ ನಾವು ಆಶಿಸುತ್ತೇವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:05 pm, Sun, 23 June 24

ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್