AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್ ಮ್ಯಾಪ್ ನಂಬಿ ತಪ್ಪು ದಾರಿಯಲ್ಲಿ ಹೋಗಿ ಪರೀಕ್ಷೆಯಿಂದ ವಂಚಿತರಾದ ನೀಟ್ ವಿದ್ಯಾರ್ಥಿಗಳು

ಮೊರಾದಾಬಾದ್‌ನಲ್ಲಿ ಗೂಗಲ್ ಮ್ಯಾಪ್‌ನ ತಪ್ಪು ದಾರಿಯಿಂದಾಗಿ ನೀಟ್ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಆ್ಯಪ್ ದೋಷದಿಂದಾಗಿ ಹಲವು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿ, ಭವಿಷ್ಯಕ್ಕೆ ಆತಂಕ ಎದುರಾಗಿದೆ. ಇಂತಹ ಮಹತ್ವದ ಪರೀಕ್ಷೆಗಳ ದಿನದಂದು ಕೇವಲ ಡಿಜಿಟಲ್ ನಕ್ಷೆಗಳನ್ನು ನಂಬದೆ, ಮುಂಚಿತವಾಗಿಯೇ ಪರೀಕ್ಷಾ ಕೇಂದ್ರದ ವಿಳಾಸವನ್ನು ಪರಿಶೀಲಿಸಲು ತಜ್ಞರು ಸಲಹೆ ನೀಡಿದ್ದಾರೆ.

ಗೂಗಲ್ ಮ್ಯಾಪ್ ನಂಬಿ ತಪ್ಪು ದಾರಿಯಲ್ಲಿ ಹೋಗಿ ಪರೀಕ್ಷೆಯಿಂದ ವಂಚಿತರಾದ ನೀಟ್ ವಿದ್ಯಾರ್ಥಿಗಳು
ಗೂಗಲ್ ಮ್ಯಾಪ್ Image Credit source: News24
ನಯನಾ ರಾಜೀವ್
|

Updated on: Jun 22, 2026 | 9:17 AM

Share

ಮೊರಾದಾಬಾದ್, ಜೂನ್ 22: ಗೂಗಲ್ ಮ್ಯಾಪ್(Google Map) ನಂಬಿ ತಪ್ಪು ದಾರಿಯಲ್ಲಿ ಹೋಗಿ ನೀಟ್ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಬಹುತೇಕ ಬಂದಿ ಗೂಗಲ್ ಮ್ಯಾಪ್ ಬಳಕೆ ಮಾಡುತ್ತಿದ್ದಾರೆ. ನೀಟ್ ಯುಜಿ ಮರು ಪರೀಕ್ಷೆಯ ವೇಳೆ ಗೂಗಲ್ ಮ್ಯಾಪ್ ತೋರಿಸಿದ ತಪ್ಪು ಲೋಕೇಶನ್‌ನಿಂದಾಗಿ ಹಲವು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿ, ಪರೀಕ್ಷೆ ಬರೆಯುವ ಅವಕಾಶವನ್ನೇ ತಪ್ಪಿಸಿಕೊಂಡಿದ್ದಾರೆ.

ದೇಶಾದ್ಯಂತ ಸುಮಾರು 22.79 ಲಕ್ಷ ವಿದ್ಯಾರ್ಥಿಗಳು ಈ ಮರು ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಗೂಗಲ್ ಆ್ಯಪ್‌ನ ತಾಂತ್ರಿಕ ದೋಷದಿಂದಾಗಿ ಕೆಲ ವಿದ್ಯಾರ್ಥಿಗಳ ಇಡೀ ವರ್ಷದ ಕಷ್ಟ ಮತ್ತು ಭವಿಷ್ಯ ಈಗ ಆತಂಕಕ್ಕೆ ಸಿಲುಕಿದೆ.

ಸಂಭಾಲ್ ನಿವಾಸಿಯಾದ ಫೈಜಾನ್ ಅಲಿ ಎಂಬ ವಿದ್ಯಾರ್ಥಿ ತನಗೆ ನಿಗದಿಯಾಗಿದ್ದ ‘ಆರ್‌ಎನ್ ಇಂಟರ್ ಕಾಲೇಜ್’ ಪರೀಕ್ಷಾ ಕೇಂದ್ರವನ್ನು ಹುಡುಕಲು ಗೂಗಲ್ ಮ್ಯಾಪ್ ಬಳಸಿದ್ದರು. ಆದರೆ ಆ್ಯಪ್ ಕಾಲೇಜಿನ ತಪ್ಪು ವಿಳಾಸವನ್ನು ತೋರಿಸಿದ್ದರಿಂದ ಆತ ಬೇರೆಡೆಯೇ ಹೋಗಿ ತಲುಪಿದ್ದ.

ತಪ್ಪು ದಾರಿಯಿಂದಾಗಿ ಗೊಂದಲಕ್ಕೊಳಗಾದ ಫೈಜಾನ್, ಬಳಿಕ ನಿಜವಾದ ಪರೀಕ್ಷಾ ಕೇಂದ್ರಕ್ಕೆ ಬರುವಷ್ಟರಲ್ಲಿ ನಿಗದಿತ ಸಮಯ ದಾಟಿಹೋಗಿತ್ತು. ಹೀಗಾಗಿ ಪರೀಕ್ಷಾ ನಿಯಮಗಳ ಪ್ರಕಾರ ಆತನಿಗೆ ಒಳಗಡೆ ಪ್ರವೇಶ ನಿರಾಕರಿಸಲಾಯಿತು.

ಮತ್ತಷ್ಟು ಓದಿ: ಗೂಗಲ್​ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಪತ್ರ; ಕೊನೆಗೂ ಮ್ಯಾಪ್​ನಲ್ಲಿ ಸರಿಯಾಯ್ತು ಕರ್ನಾಟಕದ ಊರುಗಳ ಹೆಸರು

ಸಾರ್ಥಕ್ ಎಂಬ ಇನ್ನೊಬ್ಬ ವಿದ್ಯಾರ್ಥಿಯೂ ಸಹ ಗೂಗಲ್ ಮ್ಯಾಪ್‌ನ ತಪ್ಪು ಮಾರ್ಗಸೂಚಿಯಿಂದಾಗಿ ಸಮಯಕ್ಕೆ ಸರಿಯಾಗಿ ಕೇಂದ್ರಕ್ಕೆ ತಲುಪಲಾಗದೆ ಪರೀಕ್ಷೆಯಿಂದ ವಂಚಿತನಾಗಿದ್ದಾನೆ.

ತಮ್ಮ ಮಗ ವರ್ಷಗಳಿಂದ ನೀಟ್ ಪರೀಕ್ಷೆಗೆ ಕಷ್ಟಪಟ್ಟು ತಯಾರಿ ನಡೆಸಿದ್ದ. ಕೇವಲ ಒಂದು ತಾಂತ್ರಿಕ ದೋಷದಿಂದಾಗಿ ಆತನ ಇಡೀ ಶೈಕ್ಷಣಿಕ ವರ್ಷವೇ ನಷ್ಟವಾಗುವ ಆತಂಕ ಎದುರಾಗಿದೆ. ಇದಕ್ಕೆ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ಫೈಜಾನ್ ತಂದೆ ಇಕ್ರಾಮ್ ಒತ್ತಾಯಿಸಿದ್ದಾರೆ. ಇತ್ತ ವಿಷಯ ತಿಳಿಯುತ್ತಿದ್ದಂತೆ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಬಂದು ಸಂತ್ರಸ್ತ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಮಾತುಕತೆ ನಡೆಸಿದ್ದಾರೆ.

ಗೂಗಲ್ ಮ್ಯಾಪ್ ಜನರನ್ನು ಅನಾಹುತಕ್ಕೆ ತಳ್ಳುತ್ತಿರುವುದು ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ಗ್ರೇಟರ್ ನೋಯ್ಡಾದ ಐದು ಜನರ ಕುಟುಂಬವೊಂದು ಗೂಗಲ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋಗಿ ಹಾಪುರ ಎಂಬಲ್ಲಿ ದೊಡ್ಡ ಚರಂಡಿಗೆ ಬಿದ್ದು, ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾಗಿದ್ದರು.

ಇಂತಹ ಪ್ರಮುಖ ಪರೀಕ್ಷೆಗಳ ದಿನದಂದು ಕೇವಲ ಡಿಜಿಟಲ್ ನಕ್ಷೆಗಳನ್ನು ನಂಬುವ ಬದಲು, ಒಂದು ದಿನ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರದ ಸರಿಯಾದ ವಿಳಾಸ ಮತ್ತು ದಾರಿಯನ್ನು ಖುದ್ದಾಗಿ ಪರಿಶೀಲಿಸಿಕೊಳ್ಳುವುದು ಒಳಿತು ಎಂದು ತಜ್ಞರು ಕಿವಿಮಾತು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್