AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಹಗರಣದ ಬೆನ್ನಲ್ಲೇ ಎನ್‌ಟಿಎ ಸರ್ಜರಿ: ನಾಲ್ವರು ಖಡಕ್ ಅಧಿಕಾರಿಗಳ ಎಂಟ್ರಿ

ನೀಟ್ ಪೇಪರ್ ಲೀಕ್ ಬೆನ್ನಲ್ಲೇ, ಕೇಂದ್ರ ಸರ್ಕಾರವು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಯನ್ನು ಪುನರ್ರಚಿಸಿದೆ. ಹೊಸ ಜಂಟಿ ಕಾರ್ಯದರ್ಶಿಗಳು ಮತ್ತು ನಿರ್ದೇಶಕರನ್ನು ನೇಮಿಸಿದೆ. 2027 ರಿಂದ ನೀಟ್ ಪರೀಕ್ಷೆ ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನಡೆಯಲಿದೆ. ಪಾರದರ್ಶಕತೆ ಮತ್ತು 'ಶೂನ್ಯ-ದೋಷ' ವ್ಯವಸ್ಥೆ ಜಾರಿಗೆ ತರುವುದು ಇದರ ಉದ್ದೇಶ. ರದ್ದಾದ ನೀಟ್-ಯುಜಿ ಮರುಪರೀಕ್ಷೆ ಜೂನ್ 21ಕ್ಕೆ ನಿಗದಿಯಾಗಿದೆ.

ನೀಟ್ ಹಗರಣದ ಬೆನ್ನಲ್ಲೇ ಎನ್‌ಟಿಎ ಸರ್ಜರಿ: ನಾಲ್ವರು ಖಡಕ್ ಅಧಿಕಾರಿಗಳ ಎಂಟ್ರಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 16, 2026 | 9:01 PM

Share

ದೆಹಲಿ, ಮೇ16: ನೀಟ್-ಯುಜಿ (NEET-UG 2026) ಪರೀಕ್ಷೆಯ ಅಕ್ರಮ ಮತ್ತು ಪೇಪರ್ ಲೀಕ್ ಹಗರಣದ ತನಿಖೆಯನ್ನು ಸಿಬಿಐ (CBI) ಚುರುಕುಗೊಳಿಸಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಯನ್ನು ಸಂಪೂರ್ಣವಾಗಿ ಪುನರ್ರಚಿಸಲು ಮುಂದಾಗಿದೆ. ಶನಿವಾರದ (ಮೇ.16) ಮಹತ್ವದ ಬೆಳವಣಿಗೆಯಲ್ಲಿ, ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಎನ್‌ಟಿಎಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು (Joint Secretaries) ಮತ್ತು ಇಬ್ಬರು ಜಂಟಿ ನಿರ್ದೇಶಕರನ್ನು (Joint Directors) ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಿದೆ.

ಅನುಜಾ ಬಾಪತ್ (ISS – 1998 ಬ್ಯಾಚ್) ಜಂಟಿ ಕಾರ್ಯದರ್ಶಿಯಾಗಿ 5 ವರ್ಷಗಳ ಅವಧಿಗೆ ನೇಮಕ. ರುಚಿತಾ ವಿಜ್ (IRS ಕಸ್ಟಮ್ಸ್ – 2004 ಬ್ಯಾಚ್) ಜಂಟಿ ಕಾರ್ಯದರ್ಶಿಯಾಗಿ 5 ವರ್ಷಗಳ ಅವಧಿಗೆ ನೇಮಕ. ಆಕಾಶ್ ಜೈನ್ (IRS ಆದಾಯ ತೆರಿಗೆ – 2013 ಬ್ಯಾಚ್) ಜಂಟಿ ನಿರ್ದೇಶಕರಾಗಿ ನೇಮಕ. ಆದಿತ್ಯ ರಾಜೇಂದ್ರ ಭೋಜಗಾಢಿಯಾ (IA&AS – 2013 ಬ್ಯಾಚ್) ಜಂಟಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಪೇಪರ್ ಲೀಕ್ ಜಾಲಕ್ಕೆ ಶಾಶ್ವತ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಮುಂದಿನ ವರ್ಷದಿಂದ (2027) ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ (Computer-Based Test) ಆನ್‌ಲೈನ್ ಮಾದರಿಯಲ್ಲಿ ನಡೆಸುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಇದನ್ನೂ ಓದಿ: ಮಗುವಿನ ಹೊಟ್ಟೆಯಲ್ಲಿದ್ದ 25 ಸೆಂ.ಮೀ ಕೂದಲಿನ ಗುಡ್ಡೆ ಹೊರಗೆ ತೆಗೆದ ವೈದ್ಯರು!

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಎನ್‌ಟಿಎ ಸಂಸ್ಥೆಯಲ್ಲಿ ಲೋಪದೋಷಗಳಿರುವುದನ್ನು ಒಪ್ಪಿಕೊಂಡಿದ್ದು, “ಸಂಸ್ಥೆಯನ್ನು ಶೂನ್ಯ-ದೋಷ (Zero-Error) ಮುಕ್ತವಾಗಿಸುವುದು ನಮ್ಮ ಜವಾಬ್ದಾರಿ, ಇದಕ್ಕಾಗಿ ಬಲವಾದ ಸುಧಾರಣೆಗಳನ್ನು ತರುತ್ತೇವೆ” ಎಂದು ಹೇಳಿದ್ದಾರೆ. ಕಳೆದ ಮೇ 3 ರಂದು ನಡೆದಿದ್ದ, ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ನೀಟ್-ಯುಜಿ ಪರೀಕ್ಷೆಯನ್ನು ಪೇಪರ್ ಲೀಕ್ ಆರೋಪದ ಹಿನ್ನೆಲೆಯಲ್ಲಿ ಈ ವಾರದ ಆರಂಭದಲ್ಲಿ ರದ್ದುಗೊಳಿಸಲಾಗಿತ್ತು. ಪ್ರಸ್ತುತ ಈ ಮರುಪರೀಕ್ಷೆಯನ್ನು (Retest) ಜೂನ್ 21 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:00 pm, Sat, 16 May 26

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?