AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಹಗರಣದ ಬೆನ್ನಲ್ಲೇ ಎನ್‌ಟಿಎ ಸರ್ಜರಿ: ನಾಲ್ವರು ಖಡಕ್ ಅಧಿಕಾರಿಗಳ ಎಂಟ್ರಿ

ನೀಟ್ ಪೇಪರ್ ಲೀಕ್ ಬೆನ್ನಲ್ಲೇ, ಕೇಂದ್ರ ಸರ್ಕಾರವು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಯನ್ನು ಪುನರ್ರಚಿಸಿದೆ. ಹೊಸ ಜಂಟಿ ಕಾರ್ಯದರ್ಶಿಗಳು ಮತ್ತು ನಿರ್ದೇಶಕರನ್ನು ನೇಮಿಸಿದೆ. 2027 ರಿಂದ ನೀಟ್ ಪರೀಕ್ಷೆ ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನಡೆಯಲಿದೆ. ಪಾರದರ್ಶಕತೆ ಮತ್ತು 'ಶೂನ್ಯ-ದೋಷ' ವ್ಯವಸ್ಥೆ ಜಾರಿಗೆ ತರುವುದು ಇದರ ಉದ್ದೇಶ. ರದ್ದಾದ ನೀಟ್-ಯುಜಿ ಮರುಪರೀಕ್ಷೆ ಜೂನ್ 21ಕ್ಕೆ ನಿಗದಿಯಾಗಿದೆ.

ನೀಟ್ ಹಗರಣದ ಬೆನ್ನಲ್ಲೇ ಎನ್‌ಟಿಎ ಸರ್ಜರಿ: ನಾಲ್ವರು ಖಡಕ್ ಅಧಿಕಾರಿಗಳ ಎಂಟ್ರಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 16, 2026 | 9:01 PM

Share

ದೆಹಲಿ, ಮೇ16: ನೀಟ್-ಯುಜಿ (NEET-UG 2026) ಪರೀಕ್ಷೆಯ ಅಕ್ರಮ ಮತ್ತು ಪೇಪರ್ ಲೀಕ್ ಹಗರಣದ ತನಿಖೆಯನ್ನು ಸಿಬಿಐ (CBI) ಚುರುಕುಗೊಳಿಸಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಯನ್ನು ಸಂಪೂರ್ಣವಾಗಿ ಪುನರ್ರಚಿಸಲು ಮುಂದಾಗಿದೆ. ಶನಿವಾರದ (ಮೇ.16) ಮಹತ್ವದ ಬೆಳವಣಿಗೆಯಲ್ಲಿ, ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಎನ್‌ಟಿಎಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು (Joint Secretaries) ಮತ್ತು ಇಬ್ಬರು ಜಂಟಿ ನಿರ್ದೇಶಕರನ್ನು (Joint Directors) ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಿದೆ.

ಅನುಜಾ ಬಾಪತ್ (ISS – 1998 ಬ್ಯಾಚ್) ಜಂಟಿ ಕಾರ್ಯದರ್ಶಿಯಾಗಿ 5 ವರ್ಷಗಳ ಅವಧಿಗೆ ನೇಮಕ. ರುಚಿತಾ ವಿಜ್ (IRS ಕಸ್ಟಮ್ಸ್ – 2004 ಬ್ಯಾಚ್) ಜಂಟಿ ಕಾರ್ಯದರ್ಶಿಯಾಗಿ 5 ವರ್ಷಗಳ ಅವಧಿಗೆ ನೇಮಕ. ಆಕಾಶ್ ಜೈನ್ (IRS ಆದಾಯ ತೆರಿಗೆ – 2013 ಬ್ಯಾಚ್) ಜಂಟಿ ನಿರ್ದೇಶಕರಾಗಿ ನೇಮಕ. ಆದಿತ್ಯ ರಾಜೇಂದ್ರ ಭೋಜಗಾಢಿಯಾ (IA&AS – 2013 ಬ್ಯಾಚ್) ಜಂಟಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಪೇಪರ್ ಲೀಕ್ ಜಾಲಕ್ಕೆ ಶಾಶ್ವತ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಮುಂದಿನ ವರ್ಷದಿಂದ (2027) ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ (Computer-Based Test) ಆನ್‌ಲೈನ್ ಮಾದರಿಯಲ್ಲಿ ನಡೆಸುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಇದನ್ನೂ ಓದಿ: ಮಗುವಿನ ಹೊಟ್ಟೆಯಲ್ಲಿದ್ದ 25 ಸೆಂ.ಮೀ ಕೂದಲಿನ ಗುಡ್ಡೆ ಹೊರಗೆ ತೆಗೆದ ವೈದ್ಯರು!

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಎನ್‌ಟಿಎ ಸಂಸ್ಥೆಯಲ್ಲಿ ಲೋಪದೋಷಗಳಿರುವುದನ್ನು ಒಪ್ಪಿಕೊಂಡಿದ್ದು, “ಸಂಸ್ಥೆಯನ್ನು ಶೂನ್ಯ-ದೋಷ (Zero-Error) ಮುಕ್ತವಾಗಿಸುವುದು ನಮ್ಮ ಜವಾಬ್ದಾರಿ, ಇದಕ್ಕಾಗಿ ಬಲವಾದ ಸುಧಾರಣೆಗಳನ್ನು ತರುತ್ತೇವೆ” ಎಂದು ಹೇಳಿದ್ದಾರೆ. ಕಳೆದ ಮೇ 3 ರಂದು ನಡೆದಿದ್ದ, ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ನೀಟ್-ಯುಜಿ ಪರೀಕ್ಷೆಯನ್ನು ಪೇಪರ್ ಲೀಕ್ ಆರೋಪದ ಹಿನ್ನೆಲೆಯಲ್ಲಿ ಈ ವಾರದ ಆರಂಭದಲ್ಲಿ ರದ್ದುಗೊಳಿಸಲಾಗಿತ್ತು. ಪ್ರಸ್ತುತ ಈ ಮರುಪರೀಕ್ಷೆಯನ್ನು (Retest) ಜೂನ್ 21 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:00 pm, Sat, 16 May 26

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ