AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಾದ್ಯಂತ ಶಾಂತಿಯುತವಾಗಿ ಮುಗಿದ ನೀಟ್-ಪಿಜಿ ಪರೀಕ್ಷೆ: ತಾಂತ್ರಿಕ ಸಮಸ್ಯೆಗೆ ಸಿಲುಕಿದ ಜೈಪುರದ ಅಭ್ಯರ್ಥಿಗಳಿಗೆ ಸೆ. 5ಕ್ಕೆ ಮರುಪರೀಕ್ಷೆ

NEET-PG 2026 ಪರೀಕ್ಷೆಯು ದೇಶಾದ್ಯಂತ ಬಿಗಿ ಭದ್ರತೆ ಹಾಗೂ ಬಯೋಮೆಟ್ರಿಕ್ ಪರಿಶೀಲನೆಯೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ರಾಜಸ್ಥಾನದ ಜೈಪುರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದ 2,445 ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 5ರಂದು ಮರುಪರೀಕ್ಷೆ ನಡೆಸಲಾಗುವುದು. ಶೀಘ್ರದಲ್ಲೇ ಫಲಿತಾಂಶ ಪ್ರಕಟವಾಗಲಿದೆ.

ದೇಶಾದ್ಯಂತ ಶಾಂತಿಯುತವಾಗಿ ಮುಗಿದ ನೀಟ್-ಪಿಜಿ ಪರೀಕ್ಷೆ: ತಾಂತ್ರಿಕ ಸಮಸ್ಯೆಗೆ ಸಿಲುಕಿದ ಜೈಪುರದ ಅಭ್ಯರ್ಥಿಗಳಿಗೆ ಸೆ. 5ಕ್ಕೆ ಮರುಪರೀಕ್ಷೆ
ನೀಟ್ ಪರೀಕ್ಷೆ
ನಯನಾ ರಾಜೀವ್
|

Updated on:Aug 30, 2026 | 3:31 PM

Share

ನವದೆಹಲಿ, ಆಗಸ್ಟ್ 30: ದೇಶಾದ್ಯಂತ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್​-ಪಿಜಿ 2026 (NEET-PG Exam 2026)ಪರೀಕ್ಷೆಯು ಅತ್ಯಂತ ಬಿಗಿ ಭದ್ರತೆ, ಆಧಾರ್ ಬಯೋಮೆಟ್ರಿಕ್ ಪರಿಶೀಲನೆ ಹಾಗೂ ರಿಯಲ್​ ಟೈಂ ಡಿಜಿಟಲ್ ಕಣ್ಗಾವಲಿನೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ರಾಷ್ಟ್ರೀಯ ವೈದ್ಯಕೀಯ ವಿಜ್ಞಾನಗಳ ಪರೀಕ್ಷಾ ಮಂಡಳಿ (NBEMS) ದೇಶದ ಎಲ್ಲಾ 36 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 339 ನಗರಗಳ 1,111 ಕೇಂದ್ರಗಳಲ್ಲಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಿದೆ.

ಪರೀಕ್ಷೆಯ ಪ್ರಮುಖ ಅಂಕಿ-ಅಂಶಗಳು ನೋಂದಣಿ ಹಾಗೂ ಹಾಜರಾತಿ ಒಟ್ಟು 2,73,096 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 2,65,980 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಯಶಸ್ವಿ ಮುಕ್ತಾಯ: ಸುಮಾರು 2,63,535 ಅಭ್ಯರ್ಥಿಗಳು ಯಾವುದೇ ಅಡೆತಡೆಗಳಿಲ್ಲದೆ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಕೇಂದ್ರ ಕಮಾಂಡ್ ಸೆಂಟರ್: ದೆಹಲಿಯ ದ್ವಾರಕಾದಲ್ಲಿರುವ ಎನ್​ಬಿಇಎಂಎಸ್ ಪ್ರಧಾನ ಕಚೇರಿಯಿಂದ ದೇಶದ ಎಲ್ಲಾ 1,111 ಕೇಂದ್ರಗಳ ಸಿಸಿಟಿವಿ ದೃಶ್ಯಾವಳಿಗಳನ್ನು ನೇರ ಪ್ರಸಾರದಲ್ಲಿ ಪರಿಶೀಲಿಸಲಾಯಿತು.

ಮತ್ತಷ್ಟು ಓದಿ: NEET PG Exam 2026: ಇಂದೇ ನೀಟ್-ಪಿಜಿ 2026 ಪರೀಕ್ಷೆ: ಹಾಲ್ ಟಿಕೆಟ್ ಜೊತೆ ಆಧಾರ್ ದೃಢೀಕರಣ ಕಡ್ಡಾಯ, 8.30ಕ್ಕೆ ಗೇಟ್ ಕ್ಲೋಸ್

ತಜ್ಞರ ನಿಯೋಜನೆ: ಪರೀಕ್ಷಾ ಅಕ್ರಮಗಳನ್ನು ತಡೆಯಲು 2,527ಸ್ವತಂತ್ರ ಮೌಲ್ಯಮಾಪಕರು ಹಾಗೂ ಡೀನ್‌ಗಳು, ನಿರ್ದೇಶಕರನ್ನೊಳಗೊಂಡ 700ಕ್ಕೂ ಹೆಚ್ಚು ಫ್ಲೈಯಿಂಗ್ ಸ್ಕ್ವಾಡ್ ಸದಸ್ಯರನ್ನು ನಿಯೋಜಿಸಲಾಗಿತ್ತು. ಕೇಂದ್ರ ಆರೋಗ್ಯ ಸಚಿವಾಲಯ, ಬಿಇಎಲ್, ಇಸಿಐಎಲ್ ಮತ್ತು ಟಿಸಿಎಸ್ ಸಂಸ್ಥೆಗಳ ನೂರಾರು ತಾಂತ್ರಿಕ ತಜ್ಞರು ದಿನವಿಡೀ ಕಣ್ಗಾವಲು ಕಾರ್ಯದಲ್ಲಿ ತೊಡಗಿದ್ದರು.

ತಾಂತ್ರಿಕ ಅಡಚಣೆ: ರಾಜಸ್ಥಾನದ ಜೈಪುರದಲ್ಲಿರುವ ‘ಅಯಾನ್ ಡಿಜಿಟಲ್ ಜೋನ್ , ಸೀತಾಪುರ’ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ ಹಾಗೂ ತಾಂತ್ರಿಕ ಸಮಸ್ಯೆಯಿಂದಾಗಿ 2,445 ಅಭ್ಯರ್ಥಿಗಳಿಗೆ ಪರೀಕ್ಷೆ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ.

ಮರುಪರೀಕ್ಷೆಯ ವಿವರ: ಬಾಧಿತ ವಿದ್ಯಾರ್ಥಿಗಳಿಗೆ ಆದ ಅನಾನುಕೂಲಕ್ಕೆ ಎನ್​ಬಿಇಎಂಎಸ್ ವಿಷಾದ ವ್ಯಕ್ತಪಡಿಸಿದ್ದು, ಈ ಎಲ್ಲ 2,445 ಅಭ್ಯರ್ಥಿಗಳಿಗೆ 2026ರ ಸೆಪ್ಟೆಂಬರ್ 5 ರಂದು (ಶನಿವಾರ) ಮಧ್ಯಾಹ್ನ 3 ಗಂಟೆಗೆ ಜೈಪುರದಲ್ಲೇ ಮರುಪರೀಕ್ಷೆ ನಡೆಸುವುದಾಗಿ ಘೋಷಿಸಿದೆ.

ಆಧಾರ್ ಬಯೋಮೆಟ್ರಿಕ್ ಯಶಸ್ಸು: ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಆಧಾರ್ ಆಧಾರಿತ ದೃಢೀಕರಣ ಯಶಸ್ವಿಯಾಗಿ ನಡೆದಿದ್ದು, ಪರೀಕ್ಷಾ ನಕಲು ಮತ್ತು ಪರ್ಯಾಯ ವ್ಯಕ್ತಿಗಳ ಹಾಜರಾತಿಗೆ ಸಂಪೂರ್ಣ ಕಡಿವಾಣ ಬಿದ್ದಿದೆ.

ಫಲಿತಾಂಶದ ನಿರೀಕ್ಷೆ: ಸೆಪ್ಟೆಂಬರ್ 5 ರ ಮರುಪರೀಕ್ಷೆಯ ಬಳಿಕ ಎನ್​ಬಿಇಎಂಎಸ್ ಅಧಿಕೃತ ವೆಬ್‌ಸೈಟ್ nbe.edu.in ಮೂಲಕ ಮುಂದಿನ ದಿನಗಳಲ್ಲಿ ಅಧಿಕೃತ ಫಲಿತಾಂಶ ಮತ್ತು ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:29 pm, Sun, 30 August 26

Follow Us
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ