AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಯೊಂದು ಚರ್ಚೆಗೂ ಸರ್ಕಾರ ಸಿದ್ಧ: ನೀಟ್ ವಿವಾದ ಬಗ್ಗೆ ಧರ್ಮೇಂದ್ರ ಪ್ರಧಾನ್ ಪ್ರತಿಕ್ರಿಯೆ

ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಸರ್ಕಾರವು ಎಲ್ಲಾ ರೀತಿಯ ಚರ್ಚೆಗೆ ಸಿದ್ಧವಾಗಿದೆ, ಆದರೆ ಎಲ್ಲವೂ ಸಂಪ್ರದಾಯ ಮತ್ತು ಸೌಭ್ಯತೆಯಲ್ಲಿ ನಡೆಯಬೇಕು. ನಿನ್ನೆ ತಮ್ಮ ಭಾಷಣದಲ್ಲಿ ಸ್ವತಃ ರಾಷ್ಟ್ರಪತಿಗಳು ಪರೀಕ್ಷೆಯ ಬಗ್ಗೆ ಮಾತನಾಡುವಾಗ, ಯಾವುದೇ ಸಮಸ್ಯೆಯನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂಬ ಸರ್ಕಾರದ ಉದ್ದೇಶವನ್ನು ತೋರಿಸಿದೆ ಎಂದಿದ್ದಾರೆ.

ಪ್ರತಿಯೊಂದು ಚರ್ಚೆಗೂ ಸರ್ಕಾರ ಸಿದ್ಧ: ನೀಟ್ ವಿವಾದ ಬಗ್ಗೆ ಧರ್ಮೇಂದ್ರ ಪ್ರಧಾನ್ ಪ್ರತಿಕ್ರಿಯೆ
ಧರ್ಮೇಂದ್ರ ಪ್ರಧಾನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 28, 2024 | 5:10 PM

Share

ದೆಹಲಿ ಜೂನ್ 28: ವೈದ್ಯಕೀಯ ಪದವಿಪೂರ್ವ ವಿದ್ಯಾರ್ಥಿಗಳ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಮತ್ತು ಯುಜಿಸಿ-ನೆಟ್ ಪರೀಕ್ಷೆ (UGC-NET) ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ (Paper leak) ರದ್ದುಗೊಳಿಸಲಾಗಿತ್ತು. ಆ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿಪಕ್ಷಗಳು ಸಂಸತ್​​ನಲ್ಲಿ ಒತ್ತಾಯಿಸಿವೆ. ಶುಕ್ರವಾರ ಲೋಕಸಭೆಯಲ್ಲಿ ನೀಟ್ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದು ಅದಕ್ಕೆ ಸ್ಪೀಕರ್ ಅವಕಾಶ ನೀಡಲಿಲ್ಲ. ಸದನದಲ್ಲಿ ಗದ್ದಲವುಂಟಾಗಿ ಸ್ಪೀಕರ್ ಸೋಮವಾರದವರೆಗೆ ಕಲಾಪವನ್ನು ಮುಂದೂಡಿದ್ದಾರೆ.

ಏತನ್ಮಧ್ಯೆ ನೀಟ್ ಕುರಿತಾದ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಶಿಕ್ಷಣ ಸಚಿವ “ಸರ್ಕಾರವು ಎಲ್ಲಾ ರೀತಿಯ ಚರ್ಚೆಗೆ ಸಿದ್ಧವಾಗಿದೆ, ಆದರೆ ಎಲ್ಲವೂ ಸಂಪ್ರದಾಯ ಮತ್ತು ಸೌಭ್ಯತೆಯಲ್ಲಿ ನಡೆಯಬೇಕು. ನಿನ್ನೆ ತಮ್ಮ ಭಾಷಣದಲ್ಲಿ ಸ್ವತಃ ರಾಷ್ಟ್ರಪತಿಗಳು ಪರೀಕ್ಷೆಯ ಬಗ್ಗೆ ಮಾತನಾಡುವಾಗ, ಯಾವುದೇ ಸಮಸ್ಯೆಯನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂಬ ಸರ್ಕಾರದ ಉದ್ದೇಶವನ್ನು ತೋರಿಸಿದೆ. ಸರ್ಕಾರದ ಜವಾಬ್ದಾರಿ ದೇಶದ ಯುವಕರ ಕಡೆಗಿದೆ, ದೇಶದ ವಿದ್ಯಾರ್ಥಿಗಳ ಕಡೆಗಿದೆ ಸರ್ಕಾರ ತನ್ನ ಪರವಾಗಿ ನಿಲ್ಲಲು ಸಿದ್ಧವಾಗಿದೆ, ಹಾಗಾದರೆ ಗೊಂದಲವೇನು? ನಾವು ಕಠಿಣ ಕ್ರಮ ಕೈಗೊಳ್ಳಲಿದ್ದೇವೆ. ಸಿಬಿಐ ತಪ್ಪಿತಸ್ಥರನ್ನು ಪತ್ತೆ ಹಚ್ಚುತ್ತದೆ., ನಾವು ಯಾರನ್ನೂ ಬಿಡುವುದಿಲ್ಲ, ಸುಧಾರಣೆಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆ ಎಲ್ಲಾ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲಾಗುವುದು. ರಾಜಕೀಯದಿಂದ ಹೊರಬಂದು ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ನಾನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಧರ್ಮೇಂದ್ರ ಪ್ರಧಾನ್ ಮಾತು

“ನಾವು ಯಾರನ್ನೂ ಬಿಡುವುದಿಲ್ಲ, ಎನ್‌ಟಿಎ ಉಸ್ತುವಾರಿ ವಹಿಸಿದ್ದವರನ್ನು ತೆಗೆದುಹಾಕಲಾಗಿದೆ ಮತ್ತು ಹಿರಿಯ ಅಧಿಕಾರಿಗಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ಇದೆಲ್ಲವೂ ಸರ್ಕಾರದ ಬದ್ಧತೆಗೆ ಸಾಕ್ಷಿಯಾಗಿದೆ.. ವಿದ್ಯಾರ್ಥಿಗಳನ್ನು ಗೊಂದಲಕ್ಕೀಡು ಮಾಡಬೇಡಿ ಎಂದು ನಾನು ಪ್ರತಿಪಕ್ಷಗಳಿಗೆ ಮನವಿ ಮಾಡಲು ಬಯಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.

ಆದಾಗ್ಯೂ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಚರ್ಚೆ ಮಾಡಬೇಕು ಎಂದು ವಿಪಕ್ಷ ಪಟ್ಟು ಹಿಡಿದಿದೆ.

ನಿಯಮ 267ರ ಅಡಿಯಲ್ಲಿ ಸದನದಲ್ಲಿ ವಿಶೇಷ ಚರ್ಚೆಗೆ ಒತ್ತಾಯಿಸುತ್ತಿದ್ದು, ಆ ಬಳಿಕ ನಮ್ಮ ಬೇಡಿಕೆಗಳನ್ನು ತಿಳಿಸುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮಾತನಾಡಿ, ‘ದೇಶದಲ್ಲಿ ನಿರಂತರ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಯುವಕರ ಭವಿಷ್ಯ ಹಾಳಾಗಿದೆ. ಹರಿಯಾಣದಲ್ಲಿ ಗರಿಷ್ಠ ಪೇಪರ್ ಸೋರಿಕೆ ಪ್ರಕರಣಗಳು ಕಂಡುಬಂದಿವೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಜವಾಬ್ದಾರಿಯಿಂದ ಓಡಿಹೋಗುತ್ತಿದ್ದಾರೆ. ನಾವು ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲು ಮುಂದಾದಾಗ ಮೈಕ್ ಆಫ್ ಮಾಡಿದ್ದಾರೆ. ವಿರೋಧಪಕ್ಷದ ನಾಯಕನ ಮೈಕ್ ಆಫ್ ಮಾಡಿದರೆ ಪ್ರತಿಪಕ್ಷಗಳ ಸಂಸದರಿಗೆ ಕೋಪ ಬರದೇ ಇರುತ್ತದೆಯೇ? ಸದನದಲ್ಲಿ ಸಂಭವಿಸಿದ್ದೂ ಅದೇ. ಈ ವಿಷಯವನ್ನು ಚರ್ಚಿಸಬೇಕು ಎಂದು ನಾವು ಬಯಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ NEET ಚರ್ಚೆಗೆ ಒತ್ತಾಯ; ರಾಹುಲ್ ಗಾಂಧಿಯ ಮೈಕ್ ಆಫ್ ಮಾಡಲಾಗಿದೆ: ಕಾಂಗ್ರೆಸ್ ಆರೋಪ

NEET-UG ಮತ್ತು UGC-NET ಪರೀಕ್ಷೆಗಳಿಗೆ, ಕೇಂದ್ರೀಯ ತನಿಖಾ ದಳ (ಸಿಬಿಐ) ಜೂನ್ 23 ರಂದು ಎನ್‌ಟಿಎ ಪರೀಕ್ಷೆಯ ನಡವಳಿಕೆಯಲ್ಲಿನ ಅಕ್ರಮಗಳ ಬಗ್ಗೆ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿದೆ ಮತ್ತು ಈ ವಿಷಯದ ತನಿಖೆಗಾಗಿ ವಿಶೇಷ ತಂಡಗಳನ್ನು ರಚಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್