NEET-UG: ಮುಂದಿನ ಸೂಚನೆಯವರೆಗೆ ನೀಟ್ ಯುಜಿ ಕೌನ್ಸೆಲಿಂಗ್ ಮುಂದೂಡಿಕೆ

|

Updated on: Jul 06, 2024 | 2:30 PM

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಹಿಡಿದು ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದ ಅವ್ಯವಹಾರಗಳ ನಡೆದಿದೆ ಎಂದು ಆರೋಪಿಸಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳ ಪ್ರವೇಶಕ್ಕಾಗಿ ಪರೀಕ್ಷೆಯನ್ನು ನಡೆಸುವ ಎನ್‌ಟಿಎ ಮತ್ತು ಕೇಂದ್ರ ಶಿಕ್ಷಣ ಸಚಿವಾಲಯ ವಿರುದ್ಧ ವಿದ್ಯಾರ್ಥಿಗಳು ಮತ್ತು ರಾಜಕೀಯ  ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

NEET-UG: ಮುಂದಿನ ಸೂಚನೆಯವರೆಗೆ ನೀಟ್ ಯುಜಿ ಕೌನ್ಸೆಲಿಂಗ್ ಮುಂದೂಡಿಕೆ
ಪ್ರಾತಿನಿಧಿಕ ಚಿತ್ರ
Follow us on

ದೆಹಲಿ ಜುಲೈ 06 : ರಾಷ್ಟ್ರೀಯ ಅರ್ಹತೆಯ ಪ್ರವೇಶ ಪರೀಕ್ಷೆ-ಪದವಿಪೂರ್ವ ನೀಟ್  (NEET-UG) ಕೌನ್ಸೆಲಿಂಗ್ ಮುಂದಿನ ಸೂಚನೆ ಬರುವವರೆಗೆ ಮುಂದೂಡಲಾಗಿದೆ. ಕೌನ್ಸೆಲಿಂಗ್ ಪ್ರಕ್ರಿಯೆಯು ಜುಲೈ 6, 2024 ರಂದು ಪ್ರಾರಂಭವಾಗಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಆದಾಗ್ಯೂ, NEET-UG ಕೌನ್ಸೆಲಿಂಗ್ 2024 ರ ವಿವರವಾದ ಅಧಿಸೂಚನೆ ಮತ್ತು ವೇಳಾಪಟ್ಟಿಯನ್ನು ಮೆಡಿಕಲ್ ಕೌನ್ಸಿಲಿಂಗ್ ಕಮಿಟಿ (MCC) ಹಂಚಿಕೊಂಡಿಲ್ಲ.

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಹಿಡಿದು ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದ ಅವ್ಯವಹಾರಗಳ ನಡೆದಿದೆ ಎಂದು ಆರೋಪಿಸಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳ ಪ್ರವೇಶಕ್ಕಾಗಿ ಪರೀಕ್ಷೆಯನ್ನು ನಡೆಸುವ ಎನ್‌ಟಿಎ ಮತ್ತು ಕೇಂದ್ರ ಶಿಕ್ಷಣ ಸಚಿವಾಲಯ ವಿರುದ್ಧ ವಿದ್ಯಾರ್ಥಿಗಳು ಮತ್ತು ರಾಜಕೀಯ  ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಮೇ 5 ರಂದು ನಡೆದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಜೂನ್ 14 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ನಿರೀಕ್ಷಿಸಲಾಗಿತ್ತು. ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಮೊದಲೇ ಪೂರ್ಣಗೊಂಡಿದ್ದರಿಂದ ಜೂನ್ 4 ರಂದು ಫಲಿತಾಂಶ ಪ್ರಕಟವಾಗಿತ್ತು.

67 ವಿದ್ಯಾರ್ಥಿಗಳು 720ರಲ್ಲಿ 720 ಅಂಕಗಳನ್ನು ಗಳಿಸಿದ್ದು, ಇದು ಎನ್‌ಟಿಎ ಇತಿಹಾಸದಲ್ಲಿ ಮೊದಲನೆಯದ್ದು. ಹರಿಯಾಣದ ಫರಿದಾಬಾದ್‌ನ ಕೇಂದ್ರದಿಂದ ಪರೀಕ್ಷೆ ಬರೆದ ಆರು ಮಂದಿ ಟಾಪರ್ ಆಗಿದ್ದು ಇದು ಅನುಮಾನಗಳನ್ನು ಹುಟ್ಟು ಹಾಕಿತ್ತು. NEET-UG ನಲ್ಲಿ ಗ್ರೇಸ್ ಅಂಕಗಳನ್ನು ಪಡೆದ ಕನಿಷ್ಠ 1,563 ಅಭ್ಯರ್ಥಿಗಳಿಗೆ ಮರು ಪರೀಕ್ಷೆ ಬರೆಯುವಂತೆ ಹೇಳಲಾಯಿತು. ಈ ಪರೀಕ್ಷೆಯಲ್ಲಿ ಯಾರೊಬ್ಬರಿಗೂ ಫುಲ್ ಮಾರ್ಕ್ಸ್ ಸಿಕ್ಕಿಲ್ಲ.

ಆಪಾದಿತ ಪೇಪರ್ ಸೋರಿಕೆಯ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದ್ದು, ಪ್ರಮುಖ ಸಂಚುಕೋರ ಅಮನ್ ಸಿಂಗ್ ಸೇರಿದಂತೆ ಆರು ಮಂದಿಯನ್ನು ಇದುವರೆಗೆ ಬಂಧಿಸಿದೆ.

ಶುಕ್ರವಾರ, ಕೇಂದ್ರ ಸರ್ಕಾರವು ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG 2024 ರ ಮರು ಪರೀಕ್ಷೆ ವಿರೋಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಅಂತಹ ಕ್ರಮವು ಶೈಕ್ಷಣಿಕ ಕ್ಯಾಲೆಂಡರ್ ಅನ್ನು ಅಡ್ಡಿಪಡಿಸುತ್ತದೆ ಮತ್ತು ವ್ಯಾಪಕ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಇದು ಅನಗತ್ಯ ಎಂದು ವಾದಿಸಿತು.

ಇದನ್ನೂ ಓದಿ: ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಹತ್ಯೆ: 8 ಶಂಕಿತರ ಬಂಧನ; ಪಕ್ಷದ ಕಾರ್ಯಕರ್ತರಿಂದ ಚೆನ್ನೈ ರಸ್ತೆ ತಡೆ

ಈ ದೃಷ್ಟಿಕೋನವನ್ನು ಬೆಂಬಲಿಸಿ, ಎನ್‌ಟಿಎ, ಅದೇ ದಿನ ಉನ್ನತ ನ್ಯಾಯಾಲಯದಲ್ಲಿ ಪ್ರತ್ಯೇಕವಾಗಿ ಅಫಿಡವಿಟ್ ಅನ್ನು ಸಲ್ಲಿಸಿತು, ಪರೀಕ್ಷೆಯನ್ನು ರದ್ದುಗೊಳಿಸುವುದು “ವಿರೋಧಿ” ಮತ್ತು ದುಷ್ಕೃತ್ಯಗಳ ನಿದರ್ಶನಗಳು “ಕಡಿಮೆ” ಆಗಿದ್ದರೂ ಸಹ ಪ್ರತಿಭಾನ್ವಿತ ವಿದ್ಯಾರ್ಥಿಗಳ ವೃತ್ತಿ ಭವಿಷ್ಯಕ್ಕೆ ಧಕ್ಕೆ ತರುತ್ತದೆ ಎಂದು ಇದು ವಾದಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ