NEET-UG 2024 ಮರುಪರೀಕ್ಷೆ ಅಗತ್ಯವಿಲ್ಲ, ಪ್ರಾಮಾಣಿಕ ವಿದ್ಯಾರ್ಥಿಗಳ ಮೇಲೆ ಇದು ಪರಿಣಾಮ ಬೀರಲಿದೆ: ಕೇಂದ್ರ ಸರ್ಕಾರ

ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು NEET-UG 2024 ಪ್ರಶ್ನೆಗಳನ್ನು ಪ್ರಯತ್ನಿಸಿದ ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳಿಗೆ "ಗಂಭೀರವಾಗಿ ಅಪಾಯವನ್ನುಂಟುಮಾಡುತ್ತದೆ" ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಹೇಳಿದೆ.ಕೇಂದ್ರೀಯ ತನಿಖಾ ದಳಕ್ಕೆ ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೇಳಿಕೊಂಡಿದೆ ಎಂದು  ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ನೀಟ್ ಯುಜಿ ಪರೀಕ್ಷೆಯನ್ನು  ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುತ್ತದೆ

NEET-UG 2024 ಮರುಪರೀಕ್ಷೆ ಅಗತ್ಯವಿಲ್ಲ, ಪ್ರಾಮಾಣಿಕ ವಿದ್ಯಾರ್ಥಿಗಳ ಮೇಲೆ ಇದು ಪರಿಣಾಮ ಬೀರಲಿದೆ: ಕೇಂದ್ರ ಸರ್ಕಾರ
ನೀಟ್ ಪರೀಕ್ಷೆ
ರಶ್ಮಿ ಕಲ್ಲಕಟ್ಟ

Updated on: Jul 05, 2024 | 5:39 PM

ದೆಹಲಿ ಜುಲೈ 05: ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲದ ಹಿನ್ನೆಲೆಯಲ್ಲಿ ನೀಟ್ (NEET-UG 2024) ಮರು ಪರೀಕ್ಷೆ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ  ಸುಪ್ರೀಂಕೋರ್ಟ್‌ಗೆ (Supreme Court) ಅಫಿಡವಿಟ್ ಸಲ್ಲಿಸಿದೆ. ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು NEET-UG 2024 ಪ್ರಶ್ನೆಗಳನ್ನು ಪ್ರಯತ್ನಿಸಿದ ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳಿಗೆ “ಗಂಭೀರವಾಗಿ ಅಪಾಯವನ್ನುಂಟುಮಾಡುತ್ತದೆ” ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ. ಅದೇ ವೇಳೆ  ಈ ಪರೀಕ್ಷೆಯಲ್ಲಿ ಯಾವುದೇ ದೊಡ್ಡ ಪ್ರಮಾಣದ ಗೌಪ್ಯತೆಯ ಉಲ್ಲಂಘನೆಯ ಯಾವುದೇ ಪುರಾವೆಗಳ ಅನುಪಸ್ಥಿತಿಯಲ್ಲಿ, ಸಂಪೂರ್ಣ ಪರೀಕ್ಷೆ ಮತ್ತು ಈಗಾಗಲೇ ಘೋಷಿಸಲಾದ ಫಲಿತಾಂಶಗಳನ್ನು ರದ್ದುಗೊಳಿಸುವುದು ತರ್ಕಬದ್ಧವಲ್ಲ ಎಂದು ಹೇಳಲಾಗಿದೆ.

ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೇಳಿಕೊಂಡಿದೆ ಎಂದು  ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ನೀಟ್ ಯುಜಿ ಪರೀಕ್ಷೆಯನ್ನು  ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸುತ್ತದೆ.

ಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳ ಆರೋಪಗಳಿಂದಾಗಿ ನೀಟ್ ಪರೀಕ್ಷೆ ವಿರುದ್ಧ ವ್ಯಾಪಕ ಪ್ರತಿಭಟನೆಗಳು ದೇಶದಾದ್ಯಂತ ನಡೆಯುತ್ತಿವೆ. ಜೂನ್ 11 ರಂದು ಸುಪ್ರೀಂಕೋರ್ಟ್ ಪರೀಕ್ಷೆಯನ್ನು ಹೊಸದಾಗಿ ನಡೆಸುವ ಮನವಿಯ ವಿಚಾರಣೆಯ ಸಂದರ್ಭದಲ್ಲಿ, NEET-UG ಯ ಪಾರದರ್ಶಕತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಕೇಂದ್ರ ಮತ್ತು NTA ಯಿಂದ ಪ್ರತಿಕ್ರಿಯೆಗಳನ್ನು ಕೋರಿತು. ಆದರೆ, ಯಶಸ್ವಿ ಅಭ್ಯರ್ಥಿಗಳ ಕೌನ್ಸೆಲಿಂಗ್‌ಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಜುಲೈ 8 ರಂದು ಮರುಪರೀಕ್ಷೆ ಮತ್ತು ಆಪಾದಿತ ಅವ್ಯವಹಾರಗಳ ಬಗ್ಗೆ ಸಂಪೂರ್ಣ ತನಿಖೆ ಸೇರಿದಂತೆ ವಿವಿಧ ರೀತಿಯ ಪರಿಹಾರಗಳನ್ನು ಕೋರಿ ಸಲ್ಲಿಸಿದ ಅರ್ಜಿಗಳನ್ನು ವಿಚಾರಣೆಗೆ ನಿಗದಿಪಡಿಸಿದ್ದಾರೆ.

ಗುರುವಾರ, 50 ಕ್ಕೂ ಹೆಚ್ಚು ಗುಜರಾತ್ ಮೂಲದ NEET-UG ಅಭ್ಯರ್ಥಿಗಳು ವಿವಾದಿತ ಪರೀಕ್ಷೆಯನ್ನು ರದ್ದುಗೊಳಿಸದಂತೆ ಕೇಂದ್ರ ಮತ್ತು ಎನ್‌ಟಿಎಯನ್ನು ನಿರ್ಬಂಧಿಸಲು ನಿರ್ದೇಶನವನ್ನು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.  ಸಿದ್ಧಾರ್ಥ್ ಕೋಮಲ್ ಸಿಂಗ್ಲಾ ಮತ್ತು ಇತರ 55 ವಿದ್ಯಾರ್ಥಿಗಳ ಹೊಸ ಮನವಿಯನ್ನು ವಕೀಲ ದೇವೇಂದ್ರ ಸಿಂಗ್ ಮೂಲಕ ಸಲ್ಲಿಸಲಾಗಿದೆ.

ಇದನ್ನೂ ಓದಿ: ಆಗಸ್ಟ್​​ನಲ್ಲಿ ಮೋದಿ ಸರ್ಕಾರದ ಪತನ; ಲಾಲು ಪ್ರಸಾದ್ ಯಾದವ್ ಸ್ಫೋಟಕ ಹೇಳಿಕೆ

“ಗೌರವಾನ್ವಿತ ನ್ಯಾಯಾಲಯವು ಪ್ರತಿವಾದಿಗಳಿಗೆ (ಕೇಂದ್ರ ಮತ್ತು ಎನ್‌ಟಿಎ) NEET-UG ಮರು ಪರೀಕ್ಷೆ ಮಾಡಲು ಹೇಳದಂತೆ ನಿರ್ದೇಶಿಸಬಹುದು. ಏಕೆಂದರೆ ಅದು ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮದ ವಿದ್ಯಾರ್ಥಿಗಳಿಗೆ ಕಠಿಣ ಆಗಿರುತ್ತದೆ. ಇದು ಶಿಕ್ಷಣದ ಹಕ್ಕಿನ ಉಲ್ಲಂಘನೆ ಮತ್ತು ಆದ್ದರಿಂದ ಸಂವಿಧಾನದ 14 ನೇ ವಿಧಿಯ (ಸಮಾನತೆಯ ಹಕ್ಕು) ಉಲ್ಲಂಘನೆಯಾಗಿದೆ. ಸರ್ಕಾರವು NEET-PG ಪರೀಕ್ಷೆಯನ್ನು ಮುಂದೂಡುವುದರೊಂದಿಗೆ ಮತ್ತು UGC-NET ಅನ್ನು ರದ್ದುಗೊಳಿಸುವುದರೊಂದಿಗೆ, ಭಾರತದಲ್ಲಿನ ಸ್ಪರ್ಧಾತ್ಮಕ ಪರೀಕ್ಷೆಗಳು ಆಪಾದಿತ ಅಕ್ರಮಗಳ ಮೇಲೆ ಪರಿಶೀಲನೆಗೆ ಒಳಪಟ್ಟಿವೆ. ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣದಲ್ಲಿ ಸಿಬಿಐ ಇದುವರೆಗೆ ಆರು ಮಂದಿಯನ್ನು ಬಂಧಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us