AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET-UG 2024 :’ಪ್ರಶ್ನೆ ಪತ್ರಿಕೆ ಸೋರಿಕೆ’ ಕುರಿತು ಸಿಬಿಐ ತನಿಖೆ ಕೋರಿ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್

ಪ್ರಶ್ನೆಪತ್ರಿಕೆ ಸೋರಿಕೆ ಮತ್ತು NEET-UG 2024 ರಲ್ಲಿನ ಇತರ ಅಕ್ರಮಗಳ ಆರೋಪಗಳ ಕುರಿತು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಗೆ ನೋಟಿಸ್ ಜಾರಿ ಮಾಡಿದೆ.

NEET-UG 2024 :'ಪ್ರಶ್ನೆ ಪತ್ರಿಕೆ ಸೋರಿಕೆ' ಕುರಿತು ಸಿಬಿಐ ತನಿಖೆ ಕೋರಿ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on:Jun 14, 2024 | 1:29 PM

Share

ದೆಹಲಿ ಜೂನ್ 14: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನೀಟ್ ಪರೀಕ್ಷೆಯಲ್ಲಿನ  (NEET-UG 2024) ಇತರ ಅಕ್ರಮಗಳ ಆರೋಪಗಳ ಕುರಿತು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಮನವಿಯ ಕುರಿತು ಸುಪ್ರೀಂಕೋರ್ಟ್ (Supreme Court) ಶುಕ್ರವಾರ ಕೇಂದ್ರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಗೆ ನೋಟಿಸ್ ಜಾರಿ ಮಾಡಿದೆ. ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಎನ್‌ಟಿಎಗೆ ಸುಪ್ರೀಂಕೋರ್ಟ್ ಕೇಳಿದೆ. ತಪ್ಪು ನಿರ್ವಹಣೆಯಿಂದಾಗಿ ಪರೀಕ್ಷೆಯನ್ನು ಪೂರ್ಣಗೊಳಿಸಲು  ಸಮಯವನ್ನು ನೀಡದ 1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ತನ್ನ ಹಿಂದಿನ ಯೋಜನೆಯನ್ನು ಹಿಂತೆಗೆದುಕೊಳ್ಳುವ NTA ನಿರ್ಧಾರವನ್ನು ಈ ಬೆಳವಣಿಗೆ ಅನುಸರಿಸುತ್ತದೆ. ಈ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಎನ್‌ಟಿಎ ನ್ಯಾಯಾಲಯಕ್ಕೆ ತಿಳಿಸಿದೆ.

ವಿಚಾರಣೆಯ ಸಂದರ್ಭದಲ್ಲಿ ವಕೀಲರಾದ ಕನು ಅಗರ್ವಾಲ್ ಅವರು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠಕ್ಕೆ ಎನ್‌ಟಿಎ ಜೂನ್ 4 ರಂದು ಗ್ರೇಸ್ ಮಾರ್ಕ್ ನಿರ್ಧಾರವನ್ನುಹಿಂಪಡೆದಿದ್ದು, ಜೂನ್ 23 ರಂದು ಮರು ಪರೀಕ್ಷೆಯನ್ನು ನಡೆಸಲಿದೆ  . ಮರು ಪರೀಕ್ಷೆಯ ಫಲಿತಾಂಶವನ್ನು ಜೂನ್ 30 ರಂದು ಪ್ರಕಟಿಸಲಾಗುವುದು, ಜುಲೈ 6 ರಂದು ಪ್ರಾರಂಭವಾಗುವ ಕೌನ್ಸೆಲಿಂಗ್ ಪ್ರಕ್ರಿಯೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮರು ಪರೀಕ್ಷೆಯ ಮೊದಲು, ಗ್ರೇಸ್ ಅಂಕಗಳನ್ನು ಸೇರಿಸದೆಯೇ ಮೇ 5 ರ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಅವರ ನಿಜವಾದ ಅಂಕಗಳನ್ನು ತಿಳಿಸಲಾಗುತ್ತದೆ. ಮರು ಪರೀಕ್ಷೆಗೆ ಹಾಜರಾಗದಿರಲು ಆಯ್ಕೆ ಮಾಡುವ ಅಭ್ಯರ್ಥಿಗಳು ಈ ಮೂಲ ಅಂಕಗಳನ್ನು ಉಳಿಸಿಕೊಳ್ಳುತ್ತಾರೆ. ಪರೀಕ್ಷೆಯನ್ನು ಪೂರ್ಣಗೊಳಿಸಲು  3 ಗಂಟೆ 20 ನಿಮಿಷಗಳನ್ನು ನೀಡದ ಕಾರಣ 1,563 ವಿದ್ಯಾರ್ಥಿಗಳಿಗೆ ಆರಂಭದಲ್ಲಿ ಗ್ರೇಸ್ ಅಂಕಗಳನ್ನು ನೀಡಲಾಯಿತು. ಎನ್‌ಟಿಎ ಸ್ಥಾಪಿಸಿದ ಕುಂದುಕೊರತೆ ಪರಿಹಾರ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಈ ಅಂಕಗಳನ್ನು ನೀಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: Tamilisai Soundararajan: ವೇದಿಕೆಯಲ್ಲಿ ಅಮಿತ್ ಶಾ ಗದರಿಸಿಲ್ಲ, ವೈರಲ್ ವಿಡಿಯೊ ಬಗ್ಗೆ ಸ್ಪಷ್ಟನೆ ನೀಡಿದ ತಮಿಳುಸಾಯಿ ಸೌಂದರರಾಜನ್

ನಿರ್ಧಾರದ ಮೇಲೆ ಪ್ರತಿಭಟನೆಗಳು ಭುಗಿಲೆದ್ದಿದ್ದರಿಂದ, ಎರಡನೇ ಸಮಿತಿಯು ಸಮಸ್ಯೆಯನ್ನು ಮರುಪರಿಶೀಲಿಸಿದ್ದು, ಗ್ರೇಸ್ ಮಾರ್ಕ್‌ಗಳನ್ನು ರದ್ದುಗೊಳಿಸಲು ಶಿಫಾರಸು ಮಾಡಿತು.

ಏನಿದು ವಿವಾದ?

ನೀಟ್ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳ ಅಂಕಪಟ್ಟಿಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ವಿವಾದ ಪ್ರಾರಂಭವಾಯಿತು. ಈ ಚಿತ್ರಗಳನ್ನು ಪೋಸ್ಟ್ ಮಾಡಿದ ಬಳಕೆದಾರರು ದಾಖಲೆಯ 67 ಅಭ್ಯರ್ಥಿಗಳು ಪರಿಪೂರ್ಣ ಅಂಕಗಳೊಂದಿಗೆ ಉನ್ನತ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ ಎಂದು ಗಮನಸೆಳೆದಿದ್ದಾರೆ. ಈ ಪೈಕಿ ಸುಮಾರು ಆರು ಅಭ್ಯರ್ಥಿಗಳು ಒಂದೇ ಕೇಂದ್ರದಿಂದ ಪರೀಕ್ಷೆ ಬರೆದಿದ್ದರು. ಹಲವಾರು ಅಭ್ಯರ್ಥಿಗಳಿಗೆ ಅಂಕಗಳನ್ನು ಕಡಿಮೆ ಮಾಡಲಾಗಿದೆ ಅಥವಾ ಹೆಚ್ಚಿಸಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸುತ್ತಿದ್ದಾರೆ, ಇದು ಅವರ ಶ್ರೇಣಿಗಳ ಮೇಲೆ ಪರಿಣಾಮ ಬೀರುತ್ತದೆ. ಇದರ ಜತೆಗೇ ಪ್ರಶ್ನೆ ಪತ್ರಿಕೆ  ಸೋರಿಕೆ ಆರೋಪ ಕೂಡ ಕೇಳಿ ಬಂದಿದೆ. ಮೇ 5 ರ ಪರೀಕ್ಷೆಯ ಮೊದಲು ಸುಮಾರು 35 ಆಕಾಂಕ್ಷಿಗಳಿಗೆ NEET-UG ಗಾಗಿ ಪ್ರಶ್ನೆ ಪತ್ರಿಕೆಗಳು ಮತ್ತು ಉತ್ತರಗಳನ್ನು ಒದಗಿಸಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಬಿಹಾರ ಪೊಲೀಸ್ ಆರ್ಥಿಕ ಅಪರಾಧಗಳ ಘಟಕ ಕಳೆದ ತಿಂಗಳು ಹೇಳಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 13 ಮಂದಿಯನ್ನು ಬಂಧಿಸಲಾಗಿದೆ. ಒಟ್ಟು 1,563 ವಿದ್ಯಾರ್ಥಿಗಳು ಗ್ರೇಸ್ ಅಂಕಗಳನ್ನು ಪಡೆದಿದ್ದಾರೆ.

1,563 ವಿದ್ಯಾರ್ಥಿಗಳಿಗೆ ಯಾಕೆ?

ಕೆಲವು ಕೇಂದ್ರಗಳಲ್ಲಿ ಆಕಾಂಕ್ಷಿಗಳಿಗೆ ತಪ್ಪು ಪೇಪರ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಈ ವಿದ್ಯಾರ್ಥಿಗಳು ಮೇಘಾಲಯ, ಹರಿಯಾಣ, ಛತ್ತೀಸ್‌ಗಢ, ಸೂರತ್ ಮತ್ತು ಚಂಡೀಗಢದ ಆರು ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಿದ್ದರು. ಈ ವಿದ್ಯಾರ್ಥಿಗಳಿಗೆ (ಒಟ್ಟು 1,563) ತಪ್ಪು ಪ್ರಶ್ನೆ ಪತ್ರಿಕೆ ವಿತರಣೆ, ಹರಿದ OMR ಶೀಟ್  ಅಥವಾ OMR ಶೀಟ್‌ಗಳ ವಿತರಣೆಯಲ್ಲಿ ವಿಳಂಬ ಸೇರಿದಂತೆ ಆಡಳಿತಾತ್ಮಕ ಕಾರಣಗಳಿಂದ ಪರೀಕ್ಷೆ ಬರೆಯಲು ಪೂರ್ಣ 3 ಗಂಟೆ 20 ನಿಮಿಷಗಳು ಸಿಗಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಎನ್‌ಟಿಎ ರಚಿಸಿದ ಸಮಿತಿಯು ಈ ವಿಷಯದ ಬಗ್ಗೆ ತನಿಖೆ ನಡೆಸಿದ್ದು, ಅಭ್ಯರ್ಥಿಗಳು ಎದುರಿಸುತ್ತಿರುವ ಸಮಯದ ನಷ್ಟವನ್ನು ಪರಿಹರಿಸಲು 2018 ರ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ಮತ್ತು ಅಳವಡಿಸಿಕೊಂಡ ಸೂತ್ರವನ್ನು ಮಂಡಿಸಿತು. ಹೀಗೆ ಪರೀಕ್ಷೆ ಬರೆಯಲು ಸಮಯ ಸಿಗದ ಅಭ್ಯರ್ಥಿಗಳಿಗೆ ಗ್ರೇಸ್ ಮಾರ್ಕ್‌ಗಳೊಂದಿಗೆ ಪರಿಹಾರವನ್ನು ನೀಡಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Fri, 14 June 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ