AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಒಂದು ವಾಟ್ಸಾಪ್ ಮೆಸೇಜಿನಿಂದ ರದ್ದಾಯ್ತು ಯುಜಿ ಪರೀಕ್ಷೆ

ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ನಂತರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನೀಟ್ ಯುಜಿ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ. ಈಗಾಗಲೇ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ. ಈಗ ಸಿಬಿಐ ಇಡೀ ಪ್ರಕರಣದ ತನಿಖೆ ನಡೆಸಲಿದೆ. ಯಾರೋ ಮಾಡಿದ ತಪ್ಪಿನಿಂದ ಕಷ್ಟಪಟ್ಟು ಓದಿ, ನಾನಾ ಕನಸುಗಳನ್ನಿಟ್ಟುಕೊಂಡು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಕನಸು ಛಿದ್ರವಾದಂತಾಗಿದೆ. ಈ ಪ್ರಶ್ನೆ ಪತ್ರಿಕೆಯನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಹೇಗೆ ಸಾಗಿಸಲಾಯಿತು ಎಂಬುದಕ್ಕೆ ಉತ್ತರ ಇಲ್ಲಿದೆ.

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಒಂದು ವಾಟ್ಸಾಪ್ ಮೆಸೇಜಿನಿಂದ ರದ್ದಾಯ್ತು ಯುಜಿ ಪರೀಕ್ಷೆ
Students Protest Against Neet Paper LeakImage Credit source: PTI
ಸುಷ್ಮಾ ಚಕ್ರೆ
|

Updated on: May 12, 2026 | 9:35 PM

Share

ನವದೆಹಲಿ, ಮೇ 12: 22 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಆಕಾಂಕ್ಷಿಗಳ ಕನಸು ಇಂದು ಛಿದ್ರವಾಗಿದೆ. NEET-UG 2026 ಪರೀಕ್ಷೆಯು ವ್ಯವಸ್ಥಿತ ವೈಫಲ್ಯದ ದುಃಸ್ವಪ್ನವಾಗಿ ಮಾರ್ಪಟ್ಟಿದೆ. ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯು (NEET) ಈಗ ಭಾರಿ ಹಗರಣವಾಗಿ ಬೆಳೆದಿದೆ. ತೀವ್ರ ಪ್ರತಿಭಟನೆಗಳ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರೀಕ್ಷೆಯನ್ನು ರದ್ದುಗೊಳಿಸಲಾಯಿತು. ವಿದ್ಯಾರ್ಥಿಯೊಬ್ಬ ಹಾಸ್ಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ತನ್ನ ತಂದೆಗೆ ಕಳುಹಿಸಿದ್ದ ವಾಟ್ಸಾಪ್ ಮೆಸೇಜಿನಿಂದಾಗಿಯೇ ಈ ಇಡೀ ಹಗರಣ ಬಯಲಾದಂತಾಗಿದೆ. ಅಷ್ಟಕ್ಕೂ ಆ ಮೆಸೇಜ್ ಏನು?

ದೇಶದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಪ್ರಮಾಣವು ದಿಗ್ಭ್ರಮೆಗೊಳಿಸುವಂತಿದೆ. ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳಲ್ಲಿ ಕಂಡುಬರುವ ಖಾಸಗಿ ಮಾಫಿಯಾ ವಾಟ್ಸಾಪ್ ಗುಂಪಿನಿಂದಲೇ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿರುವ ಸಾಧ್ಯತೆಯ ಬಗ್ಗೆ ತನಿಖಾಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳನ್ನು ಅಪ್‌ಲೋಡ್ ಮಾಡಲೆಂದೇ ರಚಿಸಲಾದ ಈ ಗುಂಪಿನಲ್ಲಿ ಸುಮಾರು 400 ಸದಸ್ಯರು ಇದ್ದರು ಎಂದು ವರದಿಯಾಗಿದೆ. ಇದು ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯವನ್ನು ಅತಿ ಹೆಚ್ಚು ಬಿಡ್ ಮಾಡಿದವರಿಗೆ ಹರಾಜು ಹಾಕುವ ಡಿಜಿಟಲ್ ಮಾರುಕಟ್ಟೆಯಾಗಿ ಕಾರ್ಯನಿರ್ವಹಿಸಿತು. ಪೊಲೀಸ್ ತನಿಖೆಯು “ಖಾಸಗಿ ಮಾಫಿಯಾ” ಎಂಬ ವಾಟ್ಸಾಪ್ ಗುಂಪಿನ ಹೆಸರು ಮತ್ತು ಆರೋಪಿ ಮನೀಶ್ ಯಾದವ್ ಅವರ ಹೆಸರು ಬಹಿರಂಗಗೊಂಡಿದೆ.

ಇದನ್ನೂ ಓದಿ: NEET Exam 2026 Cancelled: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು!

ವಾಟ್ಸಾಪ್ ಗುಂಪಿನಿಂದ ಪ್ರಶ್ನೆ ಪತ್ರಿಕೆಯ ಸೋರಿಕೆ ಆಕಸ್ಮಿಕವಾಗಿ ಸಂಭವಿಸಿಲ್ಲ. ಇದು ಪ್ಲಾನ್ ಮಾಡಿಯೇ ನಡೆಸಲಾದ ಕೃತ್ಯವಾಗಿತ್ತು. ಮೂಲಗಳ ಪ್ರಕಾರ, ಈ ಪತ್ರಿಕೆಯು ನಾಸಿಕ್‌ನ ಮುದ್ರಣಾಲಯದಿಂದ ನೇರವಾಗಿ ಸೋರಿಕೆಯಾಗಿದೆ. ಪ್ರಶ್ನೆ ಪತ್ರಿಕೆಯ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಯೊಬ್ಬರಿಂದಲೇ ಈ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗುತ್ತಿದೆ. ಅದು ಎಲ್ಲೆಡೆ ಹರಡಿ ಸೋರಿಕೆಯಾಗಿದೆ.

ಆರಂಭದಲ್ಲಿ ಈ ಪ್ರಶ್ನೆಪತ್ರಿಕೆಯನ್ನು “ಊಹೆ ಪತ್ರಿಕೆ”ಯ ಸೋಗಿನಲ್ಲಿ ಪ್ರಸಾರ ಮಾಡಲಾಗಿತ್ತು. ಆದರೆ, ಸೋರಿಕೆಯಾದ ಸೆಟ್‌ನಲ್ಲಿರುವ 281 ಪ್ರಶ್ನೆಗಳಲ್ಲಿ, 90 ಜೀವಶಾಸ್ತ್ರದ ಪ್ರಶ್ನೆಗಳಲ್ಲಿ ಪ್ರತಿಯೊಂದೂ ನಿಜವಾದ ನೀಟ್ ಪರೀಕ್ಷೆಯಲ್ಲಿ ಬಂದಿತ್ತು. ಅಷ್ಟೇ ಅಲ್ಲ ಆ ಪ್ರಶ್ನೆಗಳಲ್ಲಿದ್ದ ಅನುಕ್ರಮ, ಅಲ್ಪವಿರಾಮಗಳು ಮತ್ತು ಪೂರ್ಣ ವಿರಾಮಗಳು ಸಹ ಒಂದೇ ರೀತಿಯಲ್ಲಿದ್ದವು.

ಇದನ್ನೂ ಓದಿ: NEET UG 2026: ನೀಟ್ ಯುಜಿ ಪರೀಕ್ಷಾ ದಿನದ ಡ್ರೆಸ್ ಕೋಡ್ ಮತ್ತು ಪ್ರಮುಖ ಮಾರ್ಗಸೂಚಿ ಪ್ರಕಟ!

ಸೋರಿಕೆಯಾದ ಈ ಪ್ರಶ್ನೆ ಪತ್ರಿಕೆಗಳ ಬೆಲೆ 30,000 ರೂ.ಗಳಿಂದ 28 ಲಕ್ಷ ರೂ.ಗಳವರೆಗೆ ಇತ್ತು. ದೆಹಲಿಯಿಂದ ಸುಳಿವು ಪಡೆದ ನಂತರ ನಾಗೌರ್‌ನ ಒಬ್ಬ ವಿದ್ಯಾರ್ಥಿ ಪರೀಕ್ಷೆಗೆ ಕೇವಲ 4 ದಿನಗಳ ಮೊದಲು 28 ಲಕ್ಷ ರೂ.ಗಳನ್ನು ಪಾವತಿಸಿದ್ದಾನೆ ಎಂದು ವರದಿಯಾಗಿದೆ. ಬಳಿಕ ಆ ಹುಡುಗ ಆ ಪತ್ರಿಕೆಯನ್ನು ಕೇರಳದ ಎಂಬಿಬಿಎಸ್ ವಿದ್ಯಾರ್ಥಿಗೆ ಮಾರಿದನು. ನಂತರ ಅವನು ಅದನ್ನು ಸಿಕಾರ್‌ನಲ್ಲಿರುವ ಪಿಜಿ ಹಾಸ್ಟೆಲ್ ನಿರ್ವಾಹಕನಾದ ತನ್ನ ತಂದೆಗೆ ಕಳುಹಿಸಿದನು.

ವಾಟ್ಸಾಪ್ ಮೆಸೇಜಿನಲ್ಲೇನಿತ್ತು?:

ಆ ವಿದ್ಯಾರ್ಥಿಯ ವಾಟ್ಸಾಪ್ ಮೆಸೇಜ್​ನಲ್ಲಿ ಸ್ಪಷ್ಟವಾಗಿ ಬರೆಯಲಾಗಿತ್ತು. “ಅಪ್ಪಾ, ಇದನ್ನು ನನ್ನ ಒಬ್ಬ ಸ್ನೇಹಿತ ಕಳುಹಿಸಿದ್ದಾನೆ. ಹಾಸ್ಟೆಲ್‌ನಲ್ಲಿರುವ ಹುಡುಗಿಯರಿಗೆ ಕೊಡಿ. ನಾಳೆಯ ಪರೀಕ್ಷೆಯಲ್ಲಿ ಇದೇ ಪ್ರಶ್ನೆ ಬರುತ್ತದೆ.” ಎಂದು ಸ್ಪಷ್ಟವಾಗಿ ಆ ಮೆಸೇಜಿನಲ್ಲಿ ತಿಳಿಸಲಾಗಿತ್ತು. ಹಾಸ್ಟೆಲ್ ನಿರ್ವಾಹಕರು ಇದನ್ನು ಎಲ್ಲೆಡೆ ಶೇರ್ ಮಾಡಿದ್ದರು. ಆದರೆ, ಪರೀಕ್ಷೆ ನಡೆದ ಬಳಿಕ ಅಲ್ಲಿ ನೀಡಿದ ಪ್ರಶ್ನೆ ಪತ್ರಿಕೆ ಹಾಗೂ ತಾವು ಶೇರ್ ಮಾಡಿದ್ದ ಪ್ರಶ್ನೆ ಪತ್ರಿಕೆ ಸಂಪೂರ್ಣವಾಗಿ ಒಂದೇ ರೀತಿಯಿತ್ತು ಎಂಬುದು ಗೊತ್ತಾದಾಗ ಅವರು ಆತಂಕಕ್ಕೊಳಗಾದರು. ತಾವು ಸಿಕ್ಕಿಬೀಳಬಹುದು ಎಂಬ ಭೀತಿಯಲ್ಲಿ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದರು. ಆರಂಭದಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳು ಇದನ್ನು ವದಂತಿ ಎಂದು ತಳ್ಳಿಹಾಕಿದರೂ, ಎನ್‌ಟಿಎ ಮತ್ತು ಗುಪ್ತಚರ ಬ್ಯೂರೋ ಮಧ್ಯಪ್ರವೇಶಿಸಿ ತನಿಖೆ ನಡೆಸಿದಾಗ ಪ್ರಶ್ನೆ ಪತ್ರಿಕೆ ಸೋರಿಕೆಯ ಜಾಲ ಪತ್ತೆಯಾಯಿತು. ಬಳಿಕ ಇದನ್ನು ಸಿಬಿಐಗೆ ವಹಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!