ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತನಿಖೆ ಜವಾಬ್ದಾರಿ ಸಿಬಿಐಗೆ ವಹಿಸಿದ ಶಿಕ್ಷಣ ಸಚಿವಾಲಯ

ಶಿಕ್ಷಣ ಸಚಿವಾಲಯವು ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮೇ 5 ರಂದು ಒಎಂಆರ್​ ಮೋಡ್‌ನಲ್ಲಿ NEET (UG) ಪರೀಕ್ಷೆಯನ್ನು ನಡೆಸಿತ್ತು.

ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತನಿಖೆ ಜವಾಬ್ದಾರಿ ಸಿಬಿಐಗೆ ವಹಿಸಿದ ಶಿಕ್ಷಣ ಸಚಿವಾಲಯ
ವಿದ್ಯಾರ್ಥಿಗಳು
Image Credit source: India TV

Updated on: Jun 23, 2024 | 8:12 AM

ಶಿಕ್ಷಣ ಸಚಿವಾಲಯ(Education Department)ವು 2024 ರ ನೀಟ್ (ಯುಜಿ) ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಯನ್ನು ಸಿಬಿಐ(CBI)ಗೆ ಹಸ್ತಾಂತರಿಸಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) 2024 ರ ಮೇ 5 ರಂದು ಒಎಂಆರ್​ ಮೋಡ್‌ನಲ್ಲಿ NEET (UG) ಪರೀಕ್ಷೆಯನ್ನು ನಡೆಸಿತ್ತು. ಇದರಲ್ಲಿ ಕೆಲವು ಅಕ್ರಮಗಳ ಪ್ರಕರಣಗಳು ಬೆಳಕಿಗೆ ಬಂದಿವೆ. ಅದೇ ಸಮಯದಲ್ಲಿ, ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ, ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು ಪರಿಶೀಲನೆಯ ನಂತರ ತನಿಖೆಗಾಗಿ ಸಿಬಿಐಗೆ ಹಸ್ತಾಂತರಿಸಲು ನಿರ್ಧರಿಸಿದೆ.

ಸರ್ಕಾರ ತನ್ನ ಮೊದಲ ನಿರ್ಧಾರದಲ್ಲಿ ಸುಬೋಧ್ ಕುಮಾರ್ ಸಿಂಗ್ ಅವರನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಮಹಾನಿರ್ದೇಶಕ ಹುದ್ದೆಯಿಂದ ತೆಗೆದುಹಾಕಿತು. ಅವರ ಸ್ಥಾನದಲ್ಲಿ ಪ್ರದೀಪ್ ಸಿಂಗ್ ಖರೋಲಾ ಅವರಿಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಕಮಾಂಡ್ ನೀಡಲಾಗಿದೆ.

ಸರ್ಕಾರ ತನ್ನ ಎರಡನೇ ನಿರ್ಧಾರದಲ್ಲಿ ಭಾನುವಾರ ನಡೆಯಬೇಕಿದ್ದ ನೀಟ್ ಪರೀಕ್ಷೆಯನ್ನು ಮುಂದೂಡಿದೆ. ಮೂರನೇ ಪ್ರಮುಖ ನಿರ್ಧಾರದಲ್ಲಿ ಸರ್ಕಾರವು NEET-UG ರಿಗ್ಗಿಂಗ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದೆ.

ಹಲವು ದಿನಗಳ ಹಿಂದೆಯೇ ನೀಟ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಹಲವು ರಾಜ್ಯಗಳಿಂದ ದೂರುಗಳು ಬರುತ್ತಿದ್ದ ಕಾರಣ ಸಿಬಿಐ ತನಿಖೆಗೆ ಕೋರಲಾಗಿತ್ತು. ಹಾಗಾಗಿ ನಿಷ್ಪಕ್ಷಪಾತ ತನಿಖೆಗೆ ಕೇಂದ್ರ ತನಿಖಾ ಸಂಸ್ಥೆಯ ಅಗತ್ಯ ಮೊದಲಿನಿಂದಲೂ ಇತ್ತು. ಯುಜಿಸಿ ನೆಟ್ ಪರೀಕ್ಷೆಯ ಪ್ರಕರಣದಲ್ಲಿ ಶಿಕ್ಷಣ ಇಲಾಖೆ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿದ ನಂತರ ಶಿಕ್ಷಣ ಸಚಿವಾಲಯವು ಇದೀಗ ಲಿಖಿತವಾಗಿ ನೀಟ್ (ಯುಜಿ) ಪರೀಕ್ಷೆಯಲ್ಲಿನ ಅಕ್ರಮಗಳ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸಿದೆ.

ಮತ್ತಷ್ಟು ಓದಿ: ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ: ಉನ್ನತ ಮಟ್ಟದ ಸಮಿತಿ ರಚನೆ, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವುದು ನಮ್ಮ ಬದ್ಧತೆ: ಧರ್ಮೇಂದ್ರ ಪ್ರಧಾನ್

ಶೀಘ್ರದಲ್ಲೇ, ನೀಟ್​ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವ ಮೂಲಕ ಸಿಬಿಐ ತನಿಖೆಯನ್ನು ಮುಂದಕ್ಕೆ ತೆಗೆದುಕೊಳ್ಳುತ್ತದೆ, ಏಕೆಂದರೆ ಈ ಪರೀಕ್ಷೆಯ ಪ್ರಕರಣದಲ್ಲಿ, ಬಿಹಾರ ಮತ್ತು ಗುಜರಾತ್ ಪೊಲೀಸರು ಎಫ್‌ಐಆರ್ ದಾಖಲಿಸಿ ಕೆಲವು ಆರೋಪಿಗಳನ್ನು ಬಂಧಿಸಿದ್ದಾರೆ. ಹೀಗಾಗಿ ಬಿಹಾರ ಮತ್ತು ಗುಜರಾತ್‌ನಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಸಿಬಿಐ ವಹಿಸಿಕೊಳ್ಳಲಿದೆ.

ಹೊಸ ಪ್ರಕರಣ ದಾಖಲಿಸಲಾಗುವುದು. ಇದಾದ ಬಳಿಕ ಬಂಧಿತ ಆರೋಪಿಗಳ ವಿಚಾರಣೆಯೊಂದಿಗೆ ಪ್ರಕರಣವನ್ನು ಹೊಸದಾಗಿ ತನಿಖೆ ನಡೆಸಲಾಗುವುದು. ಸಿಬಿಐ ದೇಶಾದ್ಯಂತ ತನ್ನ ಶಾಖೆಗಳ ಮೂಲಕ ಈ ವಿಷಯದ ಬಗ್ಗೆ ಮಾಹಿತಿ ಸಂಗ್ರಹಿಸಲು ಕೇಳಿಕೊಂಡಿದೆ. ಯುಜಿಸಿ ನೆಟ್ ಪ್ರಕರಣದಲ್ಲಿ ಅಪರಿಚಿತರ ವಿರುದ್ಧ ಪಿತೂರಿ ಮತ್ತು ವಂಚನೆ ಪ್ರಕರಣವನ್ನು ದಾಖಲಿಸಿದ ನಂತರ ಸಿಬಿಐ ಯುಪಿಯ ಕುಶಿನಗರದಲ್ಲಿ ಅಭ್ಯರ್ಥಿಯನ್ನು ವಿಚಾರಣೆಗೆ ಒಳಪಡಿಸಿದೆ.

ಇದರೊಂದಿಗೆ ನೀಟ್ ಪ್ರಕರಣದಲ್ಲಿ ಬಿಹಾರ ದಿಯೋಗಢದಲ್ಲಿ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಶಿಕ್ಷಣ ಸಚಿವಾಲಯದ ದೂರಿನ ಆಧಾರದ ಮೇಲೆ ಸಿಬಿಐ ಇದೀಗ ಪ್ರಕರಣ ದಾಖಲಿಸಿಕೊಂಡು ಬಂಧಿತ ಆರೋಪಿಗಳ ವಿಚಾರಣೆ ನಡೆಸಲಿದೆ.

ನೀಟ್ ಪೇಪರ್ ಸೋರಿಕೆ ಕುರಿತು ತನಿಖೆ ನಡೆಸುತ್ತಿರುವ ಬಿಹಾರ ಪೊಲೀಸರ ಆರ್ಥಿಕ ಅಪರಾಧಗಳ ಘಟಕ (ಇಒಯು) ನೀಟ್ ಪೇಪರ್ ಸೋರಿಕೆಗೆ ಸಂಬಂಧಿಸಿದ ಸಂಪೂರ್ಣ ವರದಿಯನ್ನು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಸಲ್ಲಿಸಿದೆ. ಇದರೊಂದಿಗೆ ಇಒಯು ತನಿಖೆಯಲ್ಲಿ ಇದುವರೆಗೆ ಸಿಕ್ಕಿರುವ ಎಲ್ಲಾ ಸಾಕ್ಷ್ಯಗಳನ್ನು ಮತ್ತು ಬಂಧಿತ ಆರೋಪಿಗಳ ಹೇಳಿಕೆಗಳನ್ನು ಎಲ್ಲಾ ವೀಡಿಯೊಗಳು ಮತ್ತು ಸಾಕ್ಷ್ಯಗಳೊಂದಿಗೆ ಶಿಕ್ಷಣ ಸಚಿವಾಲಯಕ್ಕೆ ಹಸ್ತಾಂತರಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us