NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಜಾರ್ಖಂಡ್‌ನಲ್ಲಿ ಪತ್ರಕರ್ತನ ಬಂಧನ, ಗುಜರಾತಿನಲ್ಲಿ ಸಿಬಿಐ ಶೋಧ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಬಂಧಿಸಿದ ವ್ಯಕ್ತಿಯನ್ನು ಈತನನ್ನು ಜಮಾಲುದ್ದೀನ್ ಎಂದು ಗುರುತಿಸಲಾಗಿದ್ದು ಹಿಂದಿ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ಬಂಧಿಸಲಾದ ಓಯಸಿಸ್ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರಿಗೆ ಈತ ಸಹಾಯ ಮಾಡಿದ್ದ ಎನ್ನಲಾಗಿದೆ.

NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಜಾರ್ಖಂಡ್‌ನಲ್ಲಿ ಪತ್ರಕರ್ತನ ಬಂಧನ, ಗುಜರಾತಿನಲ್ಲಿ ಸಿಬಿಐ ಶೋಧ
ಸಿಬಿಐ
Follow us
|

Updated on:Jun 29, 2024 | 12:52 PM

ದೆಹಲಿ ಜೂನ್ 29: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ (NEET-UG  Paper Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಶನಿವಾರ ಜಾರ್ಖಂಡ್‌ನ (Jharkhand) ಹಜಾರಿಬಾಗ್‌ನಲ್ಲಿ ಪತ್ರಕರ್ತರೊಬ್ಬರನ್ನು ಬಂಧಿಸಿದೆ. ಈತನನ್ನು ಜಮಾಲುದ್ದೀನ್ ಎಂದು ಗುರುತಿಸಲಾಗಿದ್ದು ಹಿಂದಿ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳ ಪ್ರಕಾರ, ಓಯಸಿಸ್ ಶಾಲೆಯ ಪ್ರಾಂಶುಪಾಲ ಎಹ್ಸಾನುಲ್ ಹಕ್ ಮತ್ತು ಉಪ ಪ್ರಾಂಶುಪಾಲ ಇಮ್ತಿಯಾಜ್ ಆಲಂ ಪ್ರಶ್ನೆ ಪತ್ರಿಕೆ  ಸೋರಿಕೆಯಲ್ಲಿ ಪಾತ್ರವಹಿಸಿದ್ದಾರೆ ಎಂಬ ಶಂಕೆಯಲ್ಲಿ ಬಂಧಿಸಲಾಗಿದೆ. ಆಲಂ ಅವರನ್ನು ಎನ್‌ಟಿಎ ವೀಕ್ಷಕರಾಗಿ ಮತ್ತು ಓಯಸಿಸ್ ಶಾಲೆಯ ಕೇಂದ್ರ ಸಂಯೋಜಕರಾಗಿ ನೇಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಸೋರಿಕೆಗೆ ಸಂಬಂಧಿಸಿದಂತೆ ಜಿಲ್ಲೆಯ ಇನ್ನೂ ಐದು ಜನರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ ಎಂದು ಹೇಳಿದರು.

ಮೇ 5 ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ನೀಟ್ ಪರೀಕ್ಷೆಗೆ ಪ್ರಾಂಶುಪಾಲರು ಹಜಾರಿಬಾಗ್ ಜಿಲ್ಲಾ ಸಂಯೋಜಕರಾಗಿದ್ದರು.

ಗುಜರಾತ್‌ನಲ್ಲಿ ಸಿಬಿಐ ತಂಡಗಳು ಗೋದ್ರಾ, ಖೇಡಾ, ಅಹಮದಾಬಾದ್ ಮತ್ತು ಆನಂದ್‌ನ 7 ಸ್ಥಳಗಳಲ್ಲಿ ಕೆಲವು ಶಂಕಿತರ ಮೇಲೆ ಶೋಧ ನಡೆಸುತ್ತಿವೆ. ಇದು ಗೋಧ್ರಾ ಪೊಲೀಸರು ಈ ಹಿಂದೆ ತನಿಖೆ ನಡೆಸಿದ ಎಫ್‌ಐಆರ್‌ಗೆ ಸಂಬಂಧಿಸಿದೆ.

ಜೂನ್ 27 ರಂದು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಯ ಭಾಗವಾಗಿ ಸಿಬಿಐ ಪ್ರಕರಣದಲ್ಲಿ ತನ್ನ ಮೊದಲ ಬಂಧನವನ್ನು ಮಾಡಿತ್ತು. ಅಧಿಕಾರಿಗಳ ಪ್ರಕಾರ, ಪಾಟ್ನಾದ ಇಬ್ಬರು ಬಂಧಿತ ಆರೋಪಿಗಳಾದ ಅಶುತೋಷ್ ಕುಮಾರ್ ಮತ್ತು ಮನೀಶ್ ಕುಮಾರ್ ಅವರು ಪರೀಕ್ಷೆಗೆ ಹಾಜರಾಗಿದ್ದ ಕೆಲವರನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ದು  ಅಲ್ಲಿ ಸೋರಿಕೆಯಾದ ನೀಟ್ ಪ್ರಶ್ನೆ ಪತ್ರಿಕೆ ಮತ್ತು ಉತ್ತರ  ಒದಗಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಜೂನ್ 23 ರಂದು  ಸಿಬಿಐ ಮೊದಲ  ಎಫ್‌ಐಆರ್ ದಾಖಲಿಸಿತ್ತು. ಶಿಕ್ಷಣ ಸಚಿವಾಲಯವು ಪರೀಕ್ಷೆಯ ನಿರ್ವಹಣೆಯಲ್ಲಿನ ಅಕ್ರಮಗಳ ತನಿಖೆಯನ್ನು ಕೇಂದ್ರ ಏಜೆನ್ಸಿಗೆ ಹಸ್ತಾಂತರಿಸುವುದಾಗಿ ಘೋಷಿಸಿದ ಒಂದು ದಿನದ ನಂತರ ಈ ಬಂಧನ ನಡೆದಿದೆ.

NEET-UG ಅನ್ನು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಎನ್‌ಟಿಎ ನಡೆಸುತ್ತದೆ. ಸರ್ಕಾರವು ‘ಮುನ್ನೆಚ್ಚರಿಕೆ ಕ್ರಮ’ವಾಗಿ NEET-PG ಪರೀಕ್ಷೆಯನ್ನು ಮುಂದೂಡಿದೆ.

ಇದನ್ನೂ ಓದಿDelhi Airport Roof Collapse: ಪ್ರಯಾಣಿಕರ ಸುರಕ್ಷತೆಗೆ ವಾರ್ ರೂಮ್, ರದ್ದಾದ ವಿಮಾನಗಳ ಟಿಕೆಟ್​ ಹಣ ಮರುಪಾವತಿಗೆ ಕೇಂದ್ರ ಸೂಚನೆ

18 ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ NEET ವಿವಾದ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದೆ, ಪ್ರತಿಪಕ್ಷಗಳು ಆಪಾದಿತ ಅಕ್ರಮಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ರದ್ದತಿ ಬಗ್ಗೆ ತಕ್ಷಣ ಚರ್ಚೆಗೆ ಒತ್ತಾಯಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Sat, 29 June 24

ತಾಜಾ ಸುದ್ದಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್