ನೆಹರು ಮಾಡಿದ ಕೆಲಸಗಳಿಂದಲೇ ಅವರು ಖ್ಯಾತರಾಗಿದ್ದಾರೆ: ಮ್ಯೂಸಿಯಂ ಮರುನಾಮಕರಣ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ರಾಷ್ಟ್ರ ರಾಜಧಾನಿಯ ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (ಎನ್‌ಎಂಎಂಎಲ್) ಅಧಿಕೃತ ಮರುನಾಮಕರಣದ ಬಗ್ಗೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಜವಾಹರಲಾಲ್ ನೆಹರು ಅವರ ದೊಡ್ಡ ಕೊಡುಗೆಗಳನ್ನು ಪ್ರಧಾನಿ ನರೇಂದ್ರ ಮೋದಿ ಎಂದಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನೆಹರು ಮಾಡಿದ ಕೆಲಸಗಳಿಂದಲೇ ಅವರು ಖ್ಯಾತರಾಗಿದ್ದಾರೆ: ಮ್ಯೂಸಿಯಂ ಮರುನಾಮಕರಣ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ
ರಾಹುಲ್ ಗಾಂಧಿ
Follow us
|

Updated on: Aug 17, 2023 | 5:30 PM

ದೆಹಲಿ ಆಗಸ್ಟ್ 17: ರಾಷ್ಟ್ರ ರಾಜಧಾನಿಯಲ್ಲಿರುವ ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು (NMML) ಪ್ರಧಾನ ಮಂತ್ರಿಗಳ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಎಂದು ಮರುನಾಮಕರಣ ಮಾಡುವ ವಿವಾದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ತಮ್ಮ ಮುತ್ತಜ್ಜ ಅವರ ಕಾಲದಲ್ಲಿ ಮಾಡಿದ ಕಾರ್ಯಗಳಿಂದಾಗಿಯೇ ಹೆಸರುಗಳಿಸಿದ್ದಾರೆ ಎಂದು ಹೇಳಿದ್ದಾರೆ. ಲೇಹ್‌ಗೆ ಎರಡು ದಿನಗಳ ಭೇಟಿಗೆ ತೆರಳುವ ಮೊದಲು ದೆಹಲಿ ವಿಮಾನ ನಿಲ್ದಾಣದಲ್ಲಿ ಎಎನ್‌ಐ ಜೊತೆ ಮಾತನಾಡಿದ  ರಾಹುಲ್ ಗಾಂಧಿ “ನೆಹರೂ-ಜಿ ಕಿ ಪೆಹಚಾನ್ ಉನ್ಕೇ ಕರಮ್ ಹೈ, ಉನ್ಕಾ ನಾಮ್ ನಹೀ (ನೆಹರೂ-ಜಿ ಅವರು ತಮ್ಮ ಕೆಲಸಕ್ಕೆ ಹೆಸರುವಾಸಿಯಾಗಿದ್ದಾರೆಯೇ ಹೊರತು ಅವರ ಹೆಸರಲ್ಲ) ಎಂದು ಹೇಳಿದ್ದಾರೆ.

ಈ ಹಿಂದೆ ನೆಹರು ಸ್ಮಾರಕ ವಸ್ತುಸಂಗ್ರಹಾಲಯವನ್ನು ಪ್ರಧಾನಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಎಂದು ಮರುನಾಮಕರಣ ಮಾಡುವ ಕುರಿತು ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ಮಾತಿನ ಸಮರ ನಡೆದಿತ್ತು.

ರಾಷ್ಟ್ರ ರಾಜಧಾನಿಯ ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (ಎನ್‌ಎಂಎಂಎಲ್) ಅಧಿಕೃತ ಮರುನಾಮಕರಣದ ಬಗ್ಗೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಜವಾಹರಲಾಲ್ ನೆಹರು ಅವರ ದೊಡ್ಡ ಕೊಡುಗೆಗಳನ್ನು ಪ್ರಧಾನಿ ನರೇಂದ್ರ ಮೋದಿ ಎಂದಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಬುಧವಾರ ಟ್ವೀಟ್ ಮಾಡಿದ ಜೈರಾಮ್ ರಮೇಶ್, “ಇಂದಿನಿಂದ ಈ ಸಂಸ್ಥೆಯು ಹೊಸ ಹೆಸರನ್ನು ಪಡೆಯುತ್ತದೆ. ವಿಶ್ವಪ್ರಸಿದ್ಧ ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (NMML) ಈಗ ಪ್ರಧಾನಮಂತ್ರಿ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಆಗಿದೆ. ಮೋದಿಯವರು ಭಯಗಳು, ಸಂಕೀರ್ಣಗಳು ಮತ್ತು ಅಭದ್ರತೆಗಳನ್ನು ಹೊಂದಿದ್ದಾರೆ. ವಿಶೇಷವಾಗಿ ನಮ್ಮ ಮೊದಲ ಮತ್ತು ದೀರ್ಘಾವಧಿಯ ಪ್ರಧಾನ ಮಂತ್ರಿಯ ವಿಷಯಕ್ಕೆ ಬಂದಾಗ, ನೆಹರು ಮತ್ತು ನೆಹರೂವಿಯನ್ ಪರಂಪರೆಯನ್ನು ನಿರಾಕರಿಸುವ, ವಿರೂಪಗೊಳಿಸುವ, ಮಾನನಷ್ಟಗೊಳಿಸುವ ಮತ್ತು ನಾಶಮಾಡುವ ಏಕೈಕ-ಪಾಯಿಂಟ್ ಅಜೆಂಡಾವನ್ನು ಅವರು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು (ಎನ್‌ಎಂಎಂಎಲ್) ಕೇಂದ್ರವು ಸೋಮವಾರ ಅಧಿಕೃತವಾಗಿ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (ಪಿಎಂಎಂಎಲ್) ಎಂದು ಮರುನಾಮಕರಣ ಮಾಡಿದೆ.

ಪಿಎಂಎಂಎಲ್‌ನ ಕಾರ್ಯಕಾರಿ ಮಂಡಳಿಯ ಉಪಾಧ್ಯಕ್ಷ ಎ ಸೂರ್ಯ ಪ್ರಕಾಶ್, ಹೊಸ ಮ್ಯೂಸಿಯಂ ರಾಷ್ಟ್ರಕ್ಕೆ ಜವಾಹರಲಾಲ್ ನೆಹರು ಅವರ ಸಾಧನೆಗಳು ಮತ್ತು ಕೊಡುಗೆಗಳನ್ನು ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.

ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯಕ್ಕೆ (ಎನ್‌ಎಂಎಂಎಲ್) ಭೇಟಿ ನೀಡುವವರಿಗೆ ನೆಹರೂ, ಅವರ ಆಧುನಿಕ ಭಾರತದ ದೇವಾಲಯಗಳು, ಹಿರಾಕುಡ್ ಅಣೆಕಟ್ಟು, ನಾಗರಾಜುನ ಸಾಗರ್ ಅಣೆಕಟ್ಟು, ತಂತ್ರಜ್ಞಾನ ಸಂಸ್ಥೆಗಳನ್ನು ಸ್ಥಾಪಿಸುವ ಅವರ ಆಲೋಚನೆ ಮತ್ತು ಅವರ 17 ವರ್ಷದ ಅಧಿಕಾರ ಅವಧಿಯಲ್ಲಿನ ಯೋಜನಾ ಆಯೋಗ ಎಲ್ಲವನ್ನೂ ನಾವು ಪ್ರದರ್ಶಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ, ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ ಮರುನಾಮಕರಣದ ಕುರಿತು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್, ಕಾಂಗ್ರೆಸ್‌ಗೆ ಜವಾಹರಲಾಲ್ ನೆಹರು ಮತ್ತು ಅವರ ಕುಟುಂಬದ ವಿಷಯಗಳು ಮಾತ್ರ ಲೆಕ್ಕಕ್ಕಿರುತ್ತವೆ ಎಂದಿದ್ದಾರೆ.

ಇದನ್ನೂ ಓದಿ:  ಇತಿಹಾಸ ರಚಿಸಲು ಪ್ರಧಾನಿ ಮೋದಿ ಸಮರ್ಥರಲ್ಲ: ಮ್ಯೂಸಿಯಂ ಹೆಸರು ಬದಲಾಯಿಸಿದ್ದಕ್ಕೆ ಪ್ರತಿಪಕ್ಷಗಳ ಟೀಕೆ

ಕಾಂಗ್ರೆಸ್ ಪಕ್ಷದ ಚಿಂತನೆ ಮತ್ತು ಜೈರಾಮ್ ರಮೇಶ್ ಮತ್ತು ಪಿಎಂ ನರೇಂದ್ರ ಮೋದಿ ನಡುವೆ ಭಾರೀ ವ್ಯತ್ಯಾಸವಿದೆ. ಅವರು (ಕಾಂಗ್ರೆಸ್) ನೆಹರೂ ಜಿ ಮತ್ತು ಕುಟುಂಬದ ವಿಷಯಗಳು ಮಾತ್ರ ಎಂದು ಭಾವಿಸುತ್ತಾರೆ. ನರೇಂದ್ರ ಮೋದಿ ಅವರು ದೇಶದ ಎಲ್ಲಾ ಪ್ರಧಾನಿಗಳಿಗೆ ಗೌರವಾನ್ವಿತ ಸ್ಥಾನವನ್ನು ನೀಡಿದ್ದಾರೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ

ಈ ಹಿಂದೆ ಜೂನ್ ಮಧ್ಯದಲ್ಲಿ, NMML ಸೊಸೈಟಿಯ ವಿಶೇಷ ಸಭೆಯಲ್ಲಿ, ಅದರ ಹೆಸರನ್ನು PMML ಸೊಸೈಟಿ ಎಂದು ಬದಲಾಯಿಸಲು ನಿರ್ಧರಿಸಲಾಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೊಸೈಟಿಯ ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯ ವಿಶೇಷ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು