AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳ ಜಲಪ್ರಳಯದ ಎಫೆಕ್ಟ್: ಬಿಹಾರ, ಉತ್ತರ ಪ್ರದೇಶ ಹಾಗೂ ಉತ್ತರಾಖಂಡಕ್ಕೆ ಹೈ ಅಲರ್ಟ್,ಮುಂದಿನ 24 ಗಂಟೆ ಅತ್ಯಂತ ನಿರ್ಣಾಯಕ

ನೇಪಾಳದಲ್ಲಿ ಹಿಮನದಿ ಸ್ಫೋಟದಿಂದ ಉಂಟಾದ ಭೀಕರ ಪ್ರವಾಹದ ಪರಿಣಾಮವಾಗಿ ಭಾರತದ ಬಿಹಾರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ನದಿಗಳ ನೀರಿನ ಮಟ್ಟ ದಿಢೀರ್ ಏರಿಕೆಯಾಗಿದ್ದು, ಮುಂದಿನ 24 ಗಂಟೆಗಳು ಅತ್ಯಂತ ನಿರ್ಣಾಯಕ. ಗಂಡಕ್ ಬ್ಯಾರೇಜ್ ಗೇಟ್‌ಗಳನ್ನು ತೆರೆದು, ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಪಡೆಗಳನ್ನು ನಿಯೋಜಿಸಿ ತುರ್ತು ಪರಿಸ್ಥಿತಿ ನಿಭಾಯಿಸಲು ಸಿದ್ಧತೆ ಮಾಡಲಾಗಿದೆ.

ನೇಪಾಳ ಜಲಪ್ರಳಯದ ಎಫೆಕ್ಟ್: ಬಿಹಾರ, ಉತ್ತರ ಪ್ರದೇಶ ಹಾಗೂ ಉತ್ತರಾಖಂಡಕ್ಕೆ ಹೈ ಅಲರ್ಟ್,ಮುಂದಿನ 24 ಗಂಟೆ ಅತ್ಯಂತ ನಿರ್ಣಾಯಕ
ನೇಪಾಳ
ನಯನಾ ರಾಜೀವ್
|

Updated on: Aug 27, 2026 | 11:39 AM

Share

ನವದೆಹಲಿ, ಆಗಸ್ಟ್​ 27: ನೇಪಾಳ(Nepal)ದಲ್ಲಿ ಹಿಮನದಿ ಸ್ಫೋಟದಿಂದ ಉಂಟಾದ ಭೀಕರ ಪ್ರವಾಹದಲ್ಲಿ ಸಾವಿನ ಸಂಖ್ಯೆ 163 ಕ್ಕೆ ತಲುಪಿದ್ದು, 750 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಈ ಜಲಪ್ರಳಯದ ನೇರ ಪರಿಣಾಮವಾಗಿ ಭಾರತದ ನೆರೆ ರಾಜ್ಯಗಳಾದ ಬಿಹಾರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನದಿಗಳ ನೀರಿನ ಮಟ್ಟ ದಿಢೀರ್ ಏರಿಕೆಯಾಗಿದ್ದು, ಮುಂದಿನ 24 ಗಂಟೆಗಳು ಅತ್ಯಂತ ನಿರ್ಣಾಯಕ ಎಂದು ಘೋಷಿಸಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ತುರ್ತು ಮಾತುಕತೆ ನಡೆಸಿ ವಿಪತ್ತು ಸನ್ನದ್ಧತೆಯನ್ನು ಪರಿಶೀಲಿಸಿದ್ದಾರೆ. ಪಶ್ಚಿಮ ಚಂಪಾರಣ್ ಜಿಲ್ಲೆಯ ವಾಲ್ಮೀಕಿ ನಗರ ಬಳಿಯ ಗಂಡಕ್ ಬ್ಯಾರೇಜ್‌ನ ಎಲ್ಲಾ 36 ಗೇಟ್‌ಗಳನ್ನು ತೆರೆದು ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ.

ಹೈ ಅಲರ್ಟ್ ಜಿಲ್ಲೆಗಳು: ಪಶ್ಚಿಮ ಚಂಪಾರಣ್, ಪೂರ್ವ ಚಂಪಾರಣ್, ಗೋಪಾಲ್‌ಗಂಜ್, ಮುಜಫರ್‌ಪುರ, ಸಿವಾನ್, ಸರನ್, ಶಿಯೋಹರ್, ಸೀತಾಮರ್ಹಿ ಮತ್ತು ವೈಶಾಲಿ. ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿರುವ ಸಾವಿರಾರು ಜನರನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಉತ್ತರ ಪ್ರದೇಶದ 7 ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಮಹಾರಾಜ್‌ಗಂಜ್, ಕುಶಿನಗರ, ಪಿಲಿಭಿತ್, ಶ್ರಾವಸ್ತಿ, ಬಲರಾಂಪುರ, ಸಿದ್ಧಾರ್ಥನಗರ ಮತ್ತು ಗೋರಖ್‌ಪುರ.

ಮತ್ತಷ್ಟು ಓದಿ: ನೇಪಾಳ ಪ್ರವಾಹ, 160ಕ್ಕೂ ಹೆಚ್ಚು ಮಂದಿ ಸಾವು, 133 ಭಾರತೀಯರು ಸೇರಿ 700ಕ್ಕೂ ಅಧಿಕ ಮಂದಿ ನಾಪತ್ತೆ

ಸಿಎಂ ಯೋಗಿ ಆದಿತ್ಯನಾಥ್ ನಿರ್ದೇಶನ: ಗಂಡಕ್ ಮತ್ತು ನಾರಾಯಣಿ ನದಿಗಳ ನೀರಿನ ಮಟ್ಟವನ್ನು ಪ್ರತಿ ಗಂಟೆಗೆ ಮೇಲ್ವಿಚಾರಣೆ ಮಾಡಲು ಹಾಗೂ ನೆರೆ ಪರಿಸ್ಥಿತಿಯನ್ನು ಎದುರಿಸಲು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಪಡೆಗಳನ್ನು ನಿಯೋಜಿಸಲು ಸಿಎಂ ಆದೇಶಿಸಿದ್ದಾರೆ.

ಉತ್ತರಾಖಂಡದಲ್ಲಿ ಶಾರದಾ ನದಿ ಮೇಲೆ ಹದ್ದಿನ ಕಣ್ಣು ಗಡಿ ಜಿಲ್ಲೆ ಚಂಪಾವತ್‌ನ ಶಾರದಾ ಬ್ಯಾರೇಜ್ ಮತ್ತು ನದಿ ತೀರಗಳಲ್ಲಿ ಎಸ್‌ಡಿಆರ್‌ಎಫ್ ದಿನದ 24 ಗಂಟೆಯೂ ನಿರಂತರ ಕಣ್ಗಾವಲು ಇರಿಸಿದೆ.

ತುರ್ತು ಸಹಾಯವಾಣಿ ಸಂಖ್ಯೆಗಳು

ಟೋಲ್-ಫ್ರೀ: 1070

ಕಂಟ್ರೋಲ್ ರೂಂ: 0135-2710334, 0135-2710335, 8218867005

ನದಿಗಳ ಅಂತರ್ಸಂಪರ್ಕ ಜಾಲ: ನೇಪಾಳದ ಭೋಟೆಕೋಶಿ ನದಿಯು ತ್ರಿಶೂಲಿ ನದಿಯನ್ನು ಸೇರುತ್ತದೆ. ತ್ರಿಶೂಲಿ ನದಿಯು ದೇವಘಾಟ್ ಬಳಿ ಕಾಳಿ ಗಂಡಕಿ ನದಿಯೊಂದಿಗೆ ಸಂಗಮಗೊಂಡು ‘ನಾರಾಯಣಿ ನದಿ’ಯಾಗುತ್ತದೆ.

ಭಾರತ ಪ್ರವೇಶ: ಈ ನಾರಾಯಣಿ ನದಿಯೇ ಭಾರತದ ಗಡಿ ಪ್ರವೇಶಿಸಿದ ನಂತರ ‘ಗಂಡಕ್ ನದಿ’ ಎಂದು ಕರೆಯಲ್ಪಡುತ್ತದೆ. ಹೀಗಾಗಿ ನೇಪಾಳದ ಹಿಮಾಲಯ ಶ್ರೇಣಿಯಲ್ಲಿ ನೀರು ಹೆಚ್ಚಾದ ತಕ್ಷಣ ಭಾರತದ ಕೆಳಮುಖ ಗಂಡಕ್ ನದಿ ಜಲಾನಯನ ಪ್ರದೇಶದಲ್ಲಿ ದಿಢೀರ್ ಪ್ರವಾಹ ಪರಿಸ್ಥಿತಿ ತಲೆದೋರುತ್ತದೆ.

Follow Us
ರಕ್ಷಾ ಬಂಧನ ಮುಹೂರ್ತ; ಪ್ರಸಿದ್ಧ ಜ್ಯೋತಿಷಿ  ನೀಡಿರುವ ಮಹತ್ವದ ಮಾಹಿತಿ
ರಕ್ಷಾ ಬಂಧನ ಮುಹೂರ್ತ; ಪ್ರಸಿದ್ಧ ಜ್ಯೋತಿಷಿ  ನೀಡಿರುವ ಮಹತ್ವದ ಮಾಹಿತಿ
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ