AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: 14 ದಿನಗಳ ಹಸುಗೂಸನ್ನು ಕೊಂದು, ದೇಹವನ್ನು ಕಸದ ತೊಟ್ಟಿಯಲ್ಲಿ ಎಸೆದ ನೇಪಾಳದ ವ್ಯಕ್ತಿ

ನೇಪಾಳ ಮೂಲದ ವ್ಯಕ್ತಿಯೊಬ್ಬ ತನ್ನ 14 ದಿನಗಳ ಹೆಣ್ಣುಮಗುವನ್ನು ಕೊಂದು ಕಸದ ತೊಟ್ಟಿಯಲ್ಲಿ ಎಸೆದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಗೋಲ್ಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ 14 ದಿನಗಳ ಹೆಣ್ಣು ಮಗುವನ್ನು ಇರಿದು ಕೊಂದು, ಆಕೆಯ ಶವವನ್ನು ಕಸದ ಬುಟ್ಟಿಗೆ ಎಸೆದಿದ್ದಾನೆ.

Hyderabad: 14 ದಿನಗಳ ಹಸುಗೂಸನ್ನು ಕೊಂದು, ದೇಹವನ್ನು ಕಸದ ತೊಟ್ಟಿಯಲ್ಲಿ ಎಸೆದ ನೇಪಾಳದ ವ್ಯಕ್ತಿ
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: May 16, 2025 | 3:06 PM

Share

ಹೈದರಾಬಾದ್, ಮೇ 16: ನೇಪಾಳ(Nepal) ಮೂಲದ ವ್ಯಕ್ತಿಯೊಬ್ಬ ತನ್ನ 14 ದಿನಗಳ ಹೆಣ್ಣುಮಗುವನ್ನು ಕೊಂದು ಕಸದ ತೊಟ್ಟಿಯಲ್ಲಿ ಎಸೆದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಗೋಲ್ಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ 14 ದಿನಗಳ ಹೆಣ್ಣು ಮಗುವನ್ನು ಇರಿದು ಕೊಂದು, ಆಕೆಯ ಶವವನ್ನು ಕಸದ ಬುಟ್ಟಿಗೆ ಎಸೆದಿದ್ದಾನೆ.

ಆರೋಪಿಯನ್ನು ಜಗತ್ ಎಂದು ಗುರುತಿಸಲಾಗಿದ್ದು, ಮೂಲತಃ ನೇಪಾಳದವನು. ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಜಗತ್​​ನನ್ನು ಆತನ ಪತ್ನಿ ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ. ಆತ ತನ್ನ ಮಗುವಿಗೆ ಇರಿದು ನಂತರ ಶವವನ್ನು ಕಸದ ತೊಟ್ಟಿಯಲ್ಲಿ ಎಸೆದಿದ್ದಾನೆ ಎಂದು ವರದಿಯಾಗಿದೆ.

ಘಟನೆಯ ಕುರಿತು ಮಾತನಾಡಿದ ಗೋಲ್ಕೊಂಡ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಒಂದು ವರ್ಷದಿಂದ ಅಪಾರ್ಟ್‌ಮೆಂಟ್‌ನಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಜಗತ್ ಎಂಬ ವ್ಯಕ್ತಿ ಮಗುವನ್ನು ಕೊಂದಿದ್ದಾನೆ ಆತ ನೇಪಾಳದ ಪ್ರಜೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ದೇವನಹಳ್ಳಿ: ತಂದೆಯ ಗನ್​​ನಿಂದ ಫೈರಿಂಗ್ ಮಾಡಿಕೊಂಡು ಮಗ ಆತ್ಮಹತ್ಯೆ
Image
ತಾಯಿಯ ಪ್ರಿಯಕರನಿಂದ ಬಾಲಕನ ಹತ್ಯೆ, ಸೂಟ್​ಕೇಸ್​ನಲ್ಲಿ ಶವ ಪತ್ತೆ
Image
20 ಕಿ.ಮೀ ಅಟ್ಟಾಡಿಸಿಕೊಂಡು ಹೋಗಿ ಸ್ನೇಹಿತರಿಗೆ ಗುಂಡು ಹಾರಿಸಿದ ವ್ಯಕ್ತಿ
Image
ಬೆಂಗಳೂರು: ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನನ್ನ ಅಪಹರಿಸಿ ಹತ್ಯೆ

ನಂತರ ಆ ವ್ಯಕ್ತಿ ಶವವನ್ನು ಅಪಾರ್ಟ್ಮೆಂಟ್ ಹೊರಗೆ ತೆಗೆದುಕೊಂಡು ಹೋಗಿ ಕುತ್ತಿಗೆಗೆ ಇರಿದು ಕಸದ ಬುಟ್ಟಿಗೆ ಎಸೆದಿದ್ದಾನೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಮಗುವಿನ ಶವವನ್ನು ಟೋಲಿಚೌಕಿಯಲ್ಲಿರುವ ಕಸದ ತೊಟ್ಟಿಯ ಬಳಿ ಎಸೆದಿದ್ದಾನೆ. ಅವನ ಪತ್ನಿ ದೂರು ದಾಖಲಿಸಿದ್ದು, ನಾವು ಆರೋಪಿಯನ್ನು ವಶಕ್ಕೆ ಪಡೆದಿದ್ದೇವೆ.

ಮತ್ತಷ್ಟು ಓದಿ: ಕಸದ ವಿಚಾರಕ್ಕೆ ಜಗಳ, ಪಕ್ಕದ ಮನೆ ಮಹಿಳೆಯ ತಲೆ ಕತ್ತರಿಸಿದ ವ್ಯಕ್ತಿ

ಅಪರಾಧದ ಹಿಂದಿನ ಉದ್ದೇಶಗಳನ್ನು ಆರೋಪಿ ಬಹಿರಂಗಪಡಿಸಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ. ಮಹಾರಾಷ್ಟ್ರದ ಉಲ್ಲಾಸ್‌ನಗರದಲ್ಲಿ ನಡೆದ ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ, ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಮಗಳನ್ನು ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಧಿಕಾರಿಗಳ ಪ್ರಕಾರ, ಆಭರಣ ವ್ಯಾಪಾರಿಯಾಗಿರುವ ಈ ವ್ಯಕ್ತಿ ಆರ್ಥಿಕ ಸಂಕಷ್ಟದಿಂದಾಗಿ ತನ್ನ ಹೆಂಡತಿ ಮತ್ತು ಮಗಳನ್ನು ಕತ್ತು ಹಿಸುಕಿ ನಂತರ ನೇಣು ಬಿಗಿದುಕೊಂಡು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತರನ್ನು ಆಭರಣ ವ್ಯಾಪಾರಿ ಪವನ್ ಪೊಹುಜಾ, ಅವರ ಪತ್ನಿ ನೇಹಾ ಮತ್ತು ಅವರ ಪುತ್ರಿ ರೋಶ್ನಿ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ