AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿ ಸೋದರಳಿಯನ ಅರೆಸ್ಟ್ ಮಾಡಿದ ಇ.ಡಿ.; ಇಂದು ಸಿಬಿಐ ಕೋರ್ಟ್​ನಲ್ಲಿ ವಿಚಾರಣೆ

ಪಂಜಾಬ್​ನಲ್ಲಿ ವಿಧಾನಸಭೆ ಚುನಾವಣೆ ಫೆ.20ರಂದು ನಡೆಯಲಿದ್ದು, 117 ವಿಧಾನಸಭಾ ಕ್ಷೇತ್ರಗಳಿಗೆ ಅಂದು ಮತದಾನ ನಡೆಯಲಿದೆ. ಹೀಗೆ ಚುನಾವಣೆ ಕೆಲವೇ ದಿನಗಳ ಬಾಕಿ ಇರುವಾಗ ಇ.ಡಿ.ದಾಳಿ ನಡೆದಿದ್ದರ ಬಗ್ಗೆ ಛನ್ನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿ ಸೋದರಳಿಯನ ಅರೆಸ್ಟ್ ಮಾಡಿದ ಇ.ಡಿ.; ಇಂದು ಸಿಬಿಐ ಕೋರ್ಟ್​ನಲ್ಲಿ ವಿಚಾರಣೆ
ಇ.ಡಿ.
Follow us
TV9 Web
| Updated By: Lakshmi Hegde

Updated on:Feb 07, 2022 | 4:20 PM

ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ(Punjab Chief Minister Charanjit Singh Channi) ಸೋದರಳಿಯ ಭೂಪೇಂದ್ರ ಸಿಂಗ್​​ರನ್ನು ಇ.ಡಿ. (ED)ಬಂಧಿಸಿದೆ. ಅಕ್ರಮ ಮರಳು ಗಣಿಗಾರಿಕೆ ಸಂಬಂಧಿತ ಕೇಸ್​​ನಲ್ಲಿ ಭೂಪೇಂದ್ರ ಸಿಂಗ್​ ಮನೆ, ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ನಿನ್ನೆ ಸಂಜೆ ಅವರನ್ನು ಬಂಧಿಸಿದ್ದು, ಇಂದು ಸಿಬಿಐ ಕೋರ್ಟ್​ಗೆ ಹಾಜರುಪಡಿಸಲಿದೆ. ಪಂಜಾಬ್ ವಿಧಾನಸಭೆ ಚುನಾವಣೆ ಕೆಲವೇ ದಿನಗಳು ಬಾಕಿ ಇರುವಾಗ ಇಂಥದ್ದೊಂದು ಬೆಳವಣಿಗೆ ತುಂಬ ಮಹತ್ವದ್ದೆನಿಸಿದೆ. ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಡಿ ಇ.ಡಿ. ಕಳೆದ ತಿಂಗಳು ಪಂಜಾಬ್​ನ ವಿವಿಧೆಡೆ ರೇಡ್​ ಮಾಡಿ, ಸುಮಾರು 10 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಿದ್ದು, ಅದರಲ್ಲಿ 8 ಕೋಟಿ ರೂಪಾಯಿ ಭೂಪಿಂದರ್​ ಸಿಂಗ್​​ರಿಗೆ ಸೇರಿದ್ದಾಗಿದೆ.

ಪಂಜಾಬ್​ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಸಂಬಂಧಪಟ್ಟು 2018ರ ಮಾರ್ಚ್​ 7ರಂದು ಪೊಲೀಸರು ಎಫ್​ಐಆರ್​ ದಾಖಲಿಸಿದ್ದರು. ಆ ಎಫ್​ಐಆರ್ ಆಧಾರದ ಮೇಲೆ ಜನವರಿಯಲ್ಲಿ ಛನ್ನಿ ಸೋದರಳಿಯ ಭೂಪಿಂದರ್ ಸಿಂಗ್ ಹನಿಯವರಿಗೆ ಸೇರಿದ 10 ಸ್ಥಳಗಳ  ಮೇಲೆ ಇ.ಡಿ.ದಾಳಿ ನಡೆದಿತ್ತು. ಈ ಕೇಸ್​​ನಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆಯೂ ಕೇಸ್​ ದಾಖಲಿಸಿಕೊಂಡಿರುವ ಇ.ಡಿ. ಇದೀಗ ಭೂಪಿಂದರ್ ಸಿಂಗ್​ರನ್ನು ಬಂಧಿಸಿದೆ.  ದಾಳಿ ನಡೆಸಿದ ಸಂದರ್ಭದಲ್ಲಿ ಸಿಕ್ಕ ದಾಖಲೆಗಳು ದೋಷಪೂರಿತವಾಗಿವೆ. ಅಕ್ರಮವಾಗಿ ಆಸ್ತಿ ವರ್ಗಾವಣೆಯಾಗಿದ್ದು ಬೆಳಕಿಗೆ ಬಂದಿದೆ. ಈ ಆಸ್ತಿ ವಹಿವಾಟಿಗೆ ಸಂಬಂಧಪಟ್ಟಂತೆ ಮೊಬೈಲ್​ ಫೋನ್​, 21 ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನ, 12 ಲಕ್ಷ ರೂ.ಮೌಲ್ಯದ ರೊಲೆಕ್ಸ್​ ವಾಚ್​​ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.

ಭೂಪಿಂದರ್ ಸಿಂಗ್​, ಕುಮಾರ್​ ಮತ್ತು ಕುದ್ರಾತ್​ ದೀಪ್ ಸಿಂಗ್​ ಎಂಬುವರು ಸೇರಿ 2018ರಲ್ಲಿ ಪ್ರೊವೈಡರ್​ ಓವರ್​ಸೀಸ್​ ಕನ್ಸಲ್ಟನ್ಸಿ ಲಿಮಿಟೆಡ್​ ಎಂಬ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಅದರಲ್ಲಿ ತಲಾ ಶೇ.33.33 ಶೇರು ಹೊಂದಿದ್ದರೆ. 2019-20ರ ಸಾಲಿನಲ್ಲಿ ಈ ಸಂಸ್ಥೆ 18.77 ಲಕ್ಷ ರೂಪಾಯಿ ವಹಿವಾಟು ನಡೆಸಿದೆ ಎಂದೂ ಇ.ಡಿ. ಮಾಹಿತಿ ನೀಡಿದೆ.  ಜನವರಿ 18ರಂದು ನಡೆಸಿದ ರೈಡ್​​ನಲ್ಲಿ ಭೂಪಿಂದರ್ ಸಿಂಗ್ ಮತ್ತು ಅವರ ಪಾರ್ಟ್​​ನರ್​ ಸಂದೀಪ್​ ಕುಮಾರ್​ರಿಂದ ಒಟ್ಟು 10 ಕೋಟಿ ರೂಪಾಯಿ ಜಪ್ತಿ ಮಾಡಿದ್ದರೂ ಅದರಲ್ಲಿ 8 ಕೋಟಿ ರೂಪಾಯಿ ಭೂಪಿಂದರ್ ಸಿಂಗ್​ರಿಗೆ ಸೇರಿದ್ದೇ ಆಗಿದೆ.

ಪಂಜಾಬ್​ನಲ್ಲಿ ವಿಧಾನಸಭೆ ಚುನಾವಣೆ ಫೆ.20ರಂದು ನಡೆಯಲಿದ್ದು, 117 ವಿಧಾನಸಭಾ ಕ್ಷೇತ್ರಗಳಿಗೆ ಅಂದು ಮತದಾನ ನಡೆಯಲಿದೆ. ಹೀಗೆ ಚುನಾವಣೆ ಕೆಲವೇ ದಿನಗಳ ಬಾಕಿ ಇರುವಾಗ ಇ.ಡಿ.ದಾಳಿ ನಡೆದಿದ್ದರ ಬಗ್ಗೆ ಛನ್ನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಂಜಾಬ್​ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ನನ್ನನ್ನು ಟ್ರ್ಯಾಪ್​ ಮಾಡಲು ಕೇಂದ್ರಸರ್ಕಾರ ಪಿತೂರಿ ನಡೆಸುತ್ತಿದೆ ಎಂದು ಈ ಹಿಂದೆಯೇ ಆರೋಪಿಸಿದ್ದಾರೆ.   ಜನವರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಜಾಬ್​ಗೆ ಬಂದಿದ್ದಾಗ ಅವರಿಗೆ ಫಿರೋಜ್​ಪುರಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆ ಬಗ್ಗೆ ಸೇಡು ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ಇ.ಡಿ.ದಾಳಿ ನಡೆಸಿದೆ. ಈ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಚಲಿಸುವ ಬಸ್​ ಹತ್ತಲು ಹೋಗಿ ಕೆಳಗೆ ಬಿದ್ದ ವಿದ್ಯಾರ್ಥಿ; ಮುಂದೆ ಆಗಿದ್ದೇನು? ನೀವೇ ನೋಡಿ

Published On - 8:49 am, Fri, 4 February 22

ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್