AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇತಾಜಿ ಸುಭಾಷ್​ ಚಂದ್ರ ಬೋಸ್ ಜನ್ಮ ದಿನ ಇನ್ಮುಂದೆ ’ಪರಾಕ್ರಮ ದಿವಸ್​‘: 23ರಂದು ಮೋದಿ-ದೀದಿ ಮುಖಾಮುಖಿ?

ಜನವರಿ 23ರಂದು ನೇತಾಜಿ ಸುಭಾಷ್​ ಚಂದ್ರ ಬೋಸ್ ಜನ್ಮದಿನದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿಯವರು ಕೋಲ್ಕತ್ತಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  ವಿಕ್ಟೋರಿಯಲ್​ ಮೆಮೋರಿಯಲ್​ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದು, ನಂತರ ಅಲಿಪೋರ್​ನ ಬೆಲ್ವೆಡೆರೆ ಎಸ್ಟೇಟ್​ನಲ್ಲಿರುವ ನ್ಯಾಷನಲ್​ ಲೈಬ್ರರಿಗೂ ಭೇಟಿಕೊಡಲಿದ್ದಾರೆ.

ನೇತಾಜಿ ಸುಭಾಷ್​ ಚಂದ್ರ ಬೋಸ್ ಜನ್ಮ ದಿನ ಇನ್ಮುಂದೆ ’ಪರಾಕ್ರಮ ದಿವಸ್​‘: 23ರಂದು ಮೋದಿ-ದೀದಿ ಮುಖಾಮುಖಿ?
Lakshmi Hegde
|

Updated on: Jan 19, 2021 | 12:18 PM

Share

ಕೋಲ್ಕತ್ತಾ: ನೇತಾಜಿ ಸುಭಾಷ್​ ಚಂದ್ರ ಬೋಸ್​ ಜನ್ಮ ದಿನದ ನಿಮಿತ್ತ ಇನ್ನು ಮುಂದೆ ಪ್ರತಿವರ್ಷ ಜನವರಿ 23ರಂದು ಪರಾಕ್ರಮ ದಿವಸ್​ ಆಚರಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಇಂದು ಘೋಷಿಸಿದೆ. ಅದಮ್ಯ ಚೇತನ ನೇತಾಜಿಯವರ ಸ್ಮರಣಾರ್ಥ, ಗೌರವಾರ್ಥವಾಗಿ ಹಾಗೂ ಅವರು ದೇಶಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ನೆನಪಿಸಿಕೊಳ್ಳುವ ಸಲುವಾಗಿ ಇನ್ನು ಪ್ರತಿವರ್ಷ ಜನವರಿ 23 ಅಂದರೆ ನೇತಾಜಿಯವರ ಜನ್ಮದಿನವನ್ನು ಪರಾಕ್ರಮ ದಿವಸ್​ ಎಂದು ಪರಿಗಣಿಸುವುದಾಗಿ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ.

ಈ ಬಾರಿ ನೇತಾಜಿಯವರ 125ನೇ ಜನ್ಮದಿನ. ಕಾಲಗಳು ಉರುಳುತ್ತಿದ್ದರೂ ದೇಶದ ಜನರು ನೇತಾಜಿ ಸುಭಾಷ್​ ಚಂದ್ರ ಬೋಸ್​​ರು ದೇಶಕ್ಕೆ ನೀಡಿದ ಅದ್ವಿತೀಯ ಕೊಡುಗೆಯನ್ನು ಜನರು ಸದಾ ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ. ನೇತಾಜಿಯವರ 125ನೇ ಜನ್ಮದಿನವನ್ನು ಇಡೀ ವರ್ಷ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೂಕ್ತ ರೀತಿಯಲ್ಲಿ ಆಚರಿಸಲಾಗುವುದು ಎಂದು ಹೇಳಿದೆ.

ಜನವರಿ 23ಕ್ಕೆ ಕೋಲ್ಕತ್ತಕ್ಕೆ ಪ್ರಧಾನಿ ಮೋದಿ ಜನವರಿ 23ರಂದು ನೇತಾಜಿ ಸುಭಾಷ್​ ಚಂದ್ರ ಬೋಸ್ ಜನ್ಮದಿನದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿಯವರು ಕೋಲ್ಕತ್ತಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  ವಿಕ್ಟೋರಿಯ ಮೆಮೋರಿಯಲ್​ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದು, ನಂತರ ಅಲಿಪೋರ್​ನ ಬೆಲ್ವೆಡೆರೆ ಎಸ್ಟೇಟ್​ನಲ್ಲಿರುವ ನ್ಯಾಷನಲ್​ ಲೈಬ್ರರಿಗೂ ಭೇಟಿಕೊಡಲಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಇನ್ನೊಂದು ಆಸಕ್ತಿಕರ ವಿಚಾರವೆಂದರೆ ಜನವರಿ 23ರಂದು ನೇತಾಜಿ ಸುಭಾಷ್​ ಚಂದ್ರ ಬೋಸ್​ ಜನ್ಮದಿನದ ನಿಮಿತ್ತ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾದಯಾತ್ರೆ ನಡೆಸಲಿದ್ದಾರೆ ಎಂದೂ ಅಲ್ಲಿನ ಸರ್ಕಾರದ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಪಕ್ಷಾಂತರ ಮಾಡಿರುವ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸುವೆ: ಮಮತಾ ಬ್ಯಾನರ್ಜಿ ಘೋಷಣೆ

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್