AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಕೈ ಹಿಡಿದು ಎಳೆದ ರೋಡ್ ರೋಮಿಯೋಗೆ ಬಿತ್ತು ಗೂಸಾ, ಈ ಯುವತಿಯರ ಧೈರ್ಯಕ್ಕೆ ಮೆಚ್ಚಲೇಬೇಕು ಎಂದ ನೆಟ್ಟಿಗರು

ಪ್ರತಿದಿನ ತನ್ನ ದಾರಿಗೆ ಅಡ್ಡ ನಿಂತು ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ 17 ವರ್ಷದ ಒಡಿಶಾದ ಬೆಹ್ರಾಂಪುರದ ಯುವತಿಯೂ ಸಹೋದರಿಯ ಸಹಾಯದಿಂದ ಸಾರ್ವಜನಿಕವಾಗಿ ಥಳಿಸಿದ್ದಾಳೆ. ಈ ವೀಡಿಯೊ ಅಹಮದಾಬಾದ್‌ನಲ್ಲಿ ನಡೆದಿದೆ ಎಂದು ಹೇಳಲಾಗಿದೆ.

Video Viral: ಕೈ ಹಿಡಿದು ಎಳೆದ ರೋಡ್ ರೋಮಿಯೋಗೆ ಬಿತ್ತು ಗೂಸಾ, ಈ ಯುವತಿಯರ ಧೈರ್ಯಕ್ಕೆ ಮೆಚ್ಚಲೇಬೇಕು ಎಂದ ನೆಟ್ಟಿಗರು
ವೈರಲ್​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on: Jun 26, 2023 | 2:00 PM

Share

ಅಹಮದಾಬಾದ್: ಪ್ರತಿಯೊಬ್ಬ ಹೆಣ್ಣು ಕೂಡ ತ್ಯಾಗ, ಸೇವೆ, ವಾತ್ಸಲ್ಯದಿಂದ ಇರುತ್ತಾಳೆ, ಆದರೆ ತನ್ನ ತಂಟೆಗೆ ಬಂದರೆ ಮಾತ್ರ ಮಹಾಕಾಳಿ ಆಗುತ್ತಾಳೆ. ಹಿರಿಯರು ಹೇಳಿರುವಂತೆ ಹೆಣ್ಣಿನ ತಾಳ್ಮೆ ಅವಳ ದೌರ್ಬಲ್ಯತೆ ಅಲ್ಲ, ಅವಳಲ್ಲಿಯು ಒಂದು ಕಾಳಿ ಶಕ್ತಿ ಇರುತ್ತದೆ ಎಂದು. ಇದೀಗ ಅದಕ್ಕೆ ಸಾಕ್ಷಿ ಈ ಸಹೋದರಿಯರ ವೀಡಿಯೊ. ತನ್ನ ಕೈ ಹಿಡಿದು ಎಳೆದ ರೋಡ್ ರೋಮಿಯೋಗೆ ಸರಿಯಾಗಿ ಬಿದ್ದಿದೆ ಗೂಸಾ, ಇದೀಗ ಈ ವೀಡಿಯೊ ಎಲ್ಲ ಕಡೆ ವೈರಲ್ ಆಗಿದೆ. ಪ್ರತಿದಿನ ತನ್ನ ದಾರಿಗೆ ಅಡ್ಡ ನಿಂತು ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ 17 ವರ್ಷದ ಒಡಿಶಾದ ಬೆಹ್ರಾಂಪುರದ ಯುವತಿಯೂ ಸಹೋದರಿಯ ಸಹಾಯದಿಂದ ಸಾರ್ವಜನಿಕವಾಗಿ ಥಳಿಸಿದ್ದಾಳೆ. ಈ ವೀಡಿಯೊ ಅಹಮದಾಬಾದ್‌ನಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಈ ವೈರಲ್ ಆಗಿರುವ ವೀಡಿಯೊದಲ್ಲಿ ಆರೋಪಿಯು ನೆಲದ ಮೇಲೆ ಮಲಗಿರುವುದನ್ನು ಕಾಣಬಹುದು, ಇದರಲ್ಲಿ ಒಬ್ಬ ಹುಡುಗಿ ಅವನನ್ನು ಥಳಿಸಿದರೆ, ಆಕೆಯ ಸಹೋದರಿ, ಆತನ ದಾರಿಯಲ್ಲಿ ಹೋಗುವಾಗ ಕಿರುಕುಳ ನೀಡುತ್ತಿದ್ದ ಎಂದು ಸಾರ್ವಜನಿಕವಾಗಿ ಆಕ್ರೋಶಭರಿತವಾಗಿ ವಿವರಿಸುವುದನ್ನು ನೋಡಿಬಹುದು.

ವರದಿಗಳ ಪ್ರಕಾರ, ಶುಕ್ರವಾರ ಬೆಳಗ್ಗೆ ಈತ ಬಾಲಕಿಯನ್ನು ದಾರಿಯಲ್ಲಿ ತಡೆದು ಆಕೆಯ ಕೈ ಹಿಡಿದಿದ್ದಾನೆ. ಸಮೀಪದಲ್ಲಿ ಕಾಯುತ್ತಿದ್ದ ಹುಡುಗಿಯ ಅಕ್ಕ ಘಟನೆಯ ಸ್ಥಳಕ್ಕೆ ಬಂದು ವ್ಯಕ್ತಿಗೆ ಥಳಿಸಿದ್ದಾರೆ. ನಂತರ ಅಲ್ಲಿಯೇ ಇದ್ದ ಇತರ ವಿದ್ಯಾರ್ಥಿಗಳು ಆಕೆಯ ಸಹಾಯಕ್ಕೆ ಬಂದಿದ್ದಾರೆ.

ಬಾಲಕಿಯರು ನೀಡಿದ ದೂರಿನ ಪ್ರಕಾರ, ಈ ಘಟನೆಯ ನಂತರ ಬಾಲಕಿಯರ ಮನೆಗೆ ಶಾಲೆಯಿಂದ ಪೋನ್ ಮಾಡಿದ್ದಾರೆ, ನಿಮ್ಮ ಕಿರಿಯ ಮಗಳನ್ನು ಹಿಂಬಾಲಿಸುತ್ತಿದ್ದ ವ್ಯಕ್ತಿಯನ್ನು ನಿಮ್ಮ ಮಕ್ಕಳು ಹೊಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ 6:45ಕ್ಕೆ ನನ್ನ ಕಿರಿಯ ಮಗಳು ಸೈಕಲ್​​​ನಲ್ಲಿ ಶಾಲೆಗೆ ಹೋಗುತ್ತಿದ್ದಾಗ ವಿಜಯ್ ಸರ್ಕಾಟೆ ಎಂಬ ವ್ಯಕ್ತಿ ಬಲವಂತವಾಗಿ ಆಕೆಯ ಕೈ ಹಿಡಿದು ಗಿಫ್ಟ್​​ ನೀಡಲು ಹೋಗಿದ್ದಾನೆ, ಆಕೆ ಅದನ್ನು ಸ್ವೀಕರಿಸಲು ನಿರಕಾರಿಸಿದಾಗ, ಗಿಫ್ಟ್​ನ್ನು ಆಕೆಯ ಬ್ಯಾಗ್​​​ನಲ್ಲಿ ಹಾಕಿ, ಬಲವಂತವಾಗಿ ಆಕೆಗೆ ಮುತ್ತಿಟ್ಟು ಕಿರುಕುಳ ನೀಡಿದ್ದಾನೆ, ನನ್ನ ಮಗಳು ಮನೆಗೆ ಬರುವಾಗ ಅಳುತ್ತ ಬಂದಿದ್ದಾಳೆ ಎಂದು ಬಾಲಕಿಯರ ತಾಯಿ ವಿವರಿಸಿದ್ದಾರೆ.

ಇದನ್ನೂ ಓದಿ:Video Viral: ರೈಲಿನ ಎಸಿ ಕೋಚ್‌ನ ಮೇಲ್ಛಾವಣಿ ಸೋರಿಕೆ, ರೈಲ್ವೆ ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ

ಸಿಐಡಿ ಅಂಕಿಅಂಶಗಳ ಪ್ರಕಾರ, ಅಹಮದಾಬಾದ್ ನಗರದಲ್ಲಿ ಜನವರಿ 1, 2013 ಮತ್ತು ಏಪ್ರಿಲ್ 20, 2023 ರ ನಡುವೆ ಒಟ್ಟು 1,695 ಹುಡುಗಿಯರು ಕಿರುಕುಳಕ್ಕೆ ಒಳಗಾಗಿದ್ದಾರೆ. ಕಾಗದಪಿಠ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!