AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್​ ಪೇಮೆಂಟ್​ನಲ್ಲಿ ಕ್ಯೂಆರ್​ ಕೋಡ್​ ಸ್ಕ್ಯಾನ್ ಮಾಡಲೇಬೇಡಿ; ಗ್ರಾಹಕರನ್ನು ಎಚ್ಚರಿಸಿದ ಎಸ್​ಬಿಐ

ಆದರೆ ಇ-ಪೇಮೆಂಟ್​ ವಿಧಾನದಲ್ಲಿ ಅಪಾಯವೂ ಸಾಕಷ್ಟಿದೆ. ಅದೆಷ್ಟೋ ಗ್ರಾಹಕರು ಡಿಜಿಟಲ್​ ಪೇಮೆಂಟ್ ಮಾಡುವಾಗ ವಂಚನೆಗೆ ಒಳಗಾದ ಘಟನೆಗಳ ಬಗ್ಗೆ ಈಗಾಗಲೇ ಅನೇಕ ವರದಿಗಳನ್ನೂ ಓದಿದ್ದೇವೆ.

ಡಿಜಿಟಲ್​ ಪೇಮೆಂಟ್​ನಲ್ಲಿ ಕ್ಯೂಆರ್​ ಕೋಡ್​ ಸ್ಕ್ಯಾನ್ ಮಾಡಲೇಬೇಡಿ; ಗ್ರಾಹಕರನ್ನು ಎಚ್ಚರಿಸಿದ ಎಸ್​ಬಿಐ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 28, 2021 | 1:26 PM

Share

ಡಿಜಿಟಲ್ ಪೇಮೆಂಟ್​ನಲ್ಲಿ ಈ ಕ್ಯೂಆರ್ ಕೋಡ್​ ಅತ್ಯಂತ ವ್ಯಾಪಕವಾಗಿ ಬಳಕೆಯಾಗುತ್ತದೆ. ಕ್ಯೂಆರ್​ (ತ್ವರಿತ ಪ್ರತಿಕ್ರಿಯೆ ಕೋಡ್​) ಕೋಡ್ ಒಂದು ರೀತಿಯ ಬಾರ್​ ಕೋಡ್​ ಆಗಿದ್ದು, ಡಾಟಾ ಸಂಗ್ರಹ ಮಾಡುತ್ತದೆ. ಈಗಂತೂ ಡಿಜಿಟಲ್​ ಪಾವತಿಯಲ್ಲಿ ಅತ್ಯಂತ ಹೆಚ್ಚಾಗಿ ಬಳಕೆಯಾಗುತ್ತದೆ. ಈ ಕೋಡ್​ ಸ್ಕ್ಯಾನ್ ಮಾಡುವ ಮೂಲಕ ಹಣ ಪಾವತಿ ಮಾಡಬಹುದಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್​ ಪಾವತಿ ಪ್ರಕ್ರಿಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕೊವಿಡ್ 19 ಸಾಂಕ್ರಾಮಿಕ ಬಂದ ಮೇಲಂತೂ ನಗದನ್ನು ಮುಟ್ಟಲು ಎಲ್ಲರೂ ಭಯಪಡುತ್ತಿದ್ದಾರೆ. ಹಾಗಾಗಿ ಡಿಜಿಟಲ್ ಪೇಮೆಂಟ್​ಗೆ ಮತ್ತಷ್ಟು ಒತ್ತು ಸಿಕ್ಕಿದೆ. ಇದನ್ನು ಇ-ಪೇಮೆಂಟ್​ ಎಂದೂ ಕರೆಯಲಾಗುತ್ತದೆ. ಅಂದರೆ ಇಲ್ಲಿ ಹಣವನ್ನು ಕೈಯಲ್ಲಿ ಮುಟ್ಟುವ ಅವಶ್ಯಕತೆ ಇರುವುದಿಲ್ಲ. ನೇರವಾಗಿ ಅಕೌಂಟ್​​ಗೇ ಹಣ ಪಾವತಿ ಮಾಡುವ ವಿಧಾನ ಇದು.

ಆದರೆ ಇ-ಪೇಮೆಂಟ್​ ವಿಧಾನದಲ್ಲಿ ಅಪಾಯವೂ ಸಾಕಷ್ಟಿದೆ. ಅದೆಷ್ಟೋ ಗ್ರಾಹಕರು ಡಿಜಿಟಲ್​ ಪೇಮೆಂಟ್ ಮಾಡುವಾಗ ವಂಚನೆಗೆ ಒಳಗಾದ ಘಟನೆಗಳ ಬಗ್ಗೆ ಈಗಾಗಲೇ ಅನೇಕ ವರದಿಗಳನ್ನೂ ಓದಿದ್ದೇವೆ. ಕ್ಯೂಆರ್ ಕೋಡ್​​ನ್ನು ಸ್ಕ್ಯಾನ್​ ಮಾಡಿ ಸಾವಿರಾರು ರೂಪಾಯಿ ಕಳೆದುಕೊಂಡವರೂ ಇದ್ದಾರೆ. ಹಾಗಾಗಿ ಬ್ಯಾಂಕ್​ಗಳು ಕೂಡ ಆಗಾಗ ಗ್ರಾಹಕರನ್ನು ಎಚ್ಚರಿಸುವ ಕೆಲಸ ಮಾಡುತ್ತವೆ. ಹಾಗೇ ಇತ್ತೀಚೆಗೆ ಎಸ್​ಬಿಐ ಕೂಡ ಮತ್ತೊಮ್ಮೆ ಗ್ರಾಹಕರಿಗೆ ಎಚ್ಚರಿಕೆ ನೀಡಿ, ಯಾರ್ಯಾರೋ ನೀಡುವ ಕ್ಯೂಆರ್​ ಕೋಡ್​ ಸ್ಕ್ಯಾನ್ ಮಾಡಬೇಡಿ ಎಂದು ಸಲಹೆ ನೀಡಿದೆ. ಟ್ವೀಟ್ ಮಾಡಿರುವ SBI, ನೀವು ಕ್ಯೂಆರ್​ ಕೋಡ್ ಸ್ಕ್ಯಾನ್ ಮಾಡಿದಾಗ ನಿಮ್ಮ ಅಕೌಂಟ್​ಗೆ ಹಣ ಬರುವುದಿಲ್ಲ. ಬದಲಿಗೆ ನಿಮ್ಮ ಅಕೌಂಟ್​ನಿಂದ ಇಂತಿಷ್ಟು ಹಣ ಕಟ್​ ಆಗಿದೆ ಎಂಬ ಸಂದೇಶ ಬರುತ್ತದೆ. ಹಾಗಿದ್ದಾಗ ಎಲ್ಲೆಲ್ಲೋ ನೀಡುವ ಕ್ಯೂಆರ್ ಕೋಡ್​ ಸ್ಕ್ಯಾನ್ ಮಾಡಿ ಹಣ ಪಾವತಿಸುವುದು ಸರಿಯಲ್ಲ ಎಂದು ತಿಳಿಸಿದೆ.

ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್