AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್​ ಪೇಮೆಂಟ್​ನಲ್ಲಿ ಕ್ಯೂಆರ್​ ಕೋಡ್​ ಸ್ಕ್ಯಾನ್ ಮಾಡಲೇಬೇಡಿ; ಗ್ರಾಹಕರನ್ನು ಎಚ್ಚರಿಸಿದ ಎಸ್​ಬಿಐ

ಆದರೆ ಇ-ಪೇಮೆಂಟ್​ ವಿಧಾನದಲ್ಲಿ ಅಪಾಯವೂ ಸಾಕಷ್ಟಿದೆ. ಅದೆಷ್ಟೋ ಗ್ರಾಹಕರು ಡಿಜಿಟಲ್​ ಪೇಮೆಂಟ್ ಮಾಡುವಾಗ ವಂಚನೆಗೆ ಒಳಗಾದ ಘಟನೆಗಳ ಬಗ್ಗೆ ಈಗಾಗಲೇ ಅನೇಕ ವರದಿಗಳನ್ನೂ ಓದಿದ್ದೇವೆ.

ಡಿಜಿಟಲ್​ ಪೇಮೆಂಟ್​ನಲ್ಲಿ ಕ್ಯೂಆರ್​ ಕೋಡ್​ ಸ್ಕ್ಯಾನ್ ಮಾಡಲೇಬೇಡಿ; ಗ್ರಾಹಕರನ್ನು ಎಚ್ಚರಿಸಿದ ಎಸ್​ಬಿಐ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 28, 2021 | 1:26 PM

Share

ಡಿಜಿಟಲ್ ಪೇಮೆಂಟ್​ನಲ್ಲಿ ಈ ಕ್ಯೂಆರ್ ಕೋಡ್​ ಅತ್ಯಂತ ವ್ಯಾಪಕವಾಗಿ ಬಳಕೆಯಾಗುತ್ತದೆ. ಕ್ಯೂಆರ್​ (ತ್ವರಿತ ಪ್ರತಿಕ್ರಿಯೆ ಕೋಡ್​) ಕೋಡ್ ಒಂದು ರೀತಿಯ ಬಾರ್​ ಕೋಡ್​ ಆಗಿದ್ದು, ಡಾಟಾ ಸಂಗ್ರಹ ಮಾಡುತ್ತದೆ. ಈಗಂತೂ ಡಿಜಿಟಲ್​ ಪಾವತಿಯಲ್ಲಿ ಅತ್ಯಂತ ಹೆಚ್ಚಾಗಿ ಬಳಕೆಯಾಗುತ್ತದೆ. ಈ ಕೋಡ್​ ಸ್ಕ್ಯಾನ್ ಮಾಡುವ ಮೂಲಕ ಹಣ ಪಾವತಿ ಮಾಡಬಹುದಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್​ ಪಾವತಿ ಪ್ರಕ್ರಿಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕೊವಿಡ್ 19 ಸಾಂಕ್ರಾಮಿಕ ಬಂದ ಮೇಲಂತೂ ನಗದನ್ನು ಮುಟ್ಟಲು ಎಲ್ಲರೂ ಭಯಪಡುತ್ತಿದ್ದಾರೆ. ಹಾಗಾಗಿ ಡಿಜಿಟಲ್ ಪೇಮೆಂಟ್​ಗೆ ಮತ್ತಷ್ಟು ಒತ್ತು ಸಿಕ್ಕಿದೆ. ಇದನ್ನು ಇ-ಪೇಮೆಂಟ್​ ಎಂದೂ ಕರೆಯಲಾಗುತ್ತದೆ. ಅಂದರೆ ಇಲ್ಲಿ ಹಣವನ್ನು ಕೈಯಲ್ಲಿ ಮುಟ್ಟುವ ಅವಶ್ಯಕತೆ ಇರುವುದಿಲ್ಲ. ನೇರವಾಗಿ ಅಕೌಂಟ್​​ಗೇ ಹಣ ಪಾವತಿ ಮಾಡುವ ವಿಧಾನ ಇದು.

ಆದರೆ ಇ-ಪೇಮೆಂಟ್​ ವಿಧಾನದಲ್ಲಿ ಅಪಾಯವೂ ಸಾಕಷ್ಟಿದೆ. ಅದೆಷ್ಟೋ ಗ್ರಾಹಕರು ಡಿಜಿಟಲ್​ ಪೇಮೆಂಟ್ ಮಾಡುವಾಗ ವಂಚನೆಗೆ ಒಳಗಾದ ಘಟನೆಗಳ ಬಗ್ಗೆ ಈಗಾಗಲೇ ಅನೇಕ ವರದಿಗಳನ್ನೂ ಓದಿದ್ದೇವೆ. ಕ್ಯೂಆರ್ ಕೋಡ್​​ನ್ನು ಸ್ಕ್ಯಾನ್​ ಮಾಡಿ ಸಾವಿರಾರು ರೂಪಾಯಿ ಕಳೆದುಕೊಂಡವರೂ ಇದ್ದಾರೆ. ಹಾಗಾಗಿ ಬ್ಯಾಂಕ್​ಗಳು ಕೂಡ ಆಗಾಗ ಗ್ರಾಹಕರನ್ನು ಎಚ್ಚರಿಸುವ ಕೆಲಸ ಮಾಡುತ್ತವೆ. ಹಾಗೇ ಇತ್ತೀಚೆಗೆ ಎಸ್​ಬಿಐ ಕೂಡ ಮತ್ತೊಮ್ಮೆ ಗ್ರಾಹಕರಿಗೆ ಎಚ್ಚರಿಕೆ ನೀಡಿ, ಯಾರ್ಯಾರೋ ನೀಡುವ ಕ್ಯೂಆರ್​ ಕೋಡ್​ ಸ್ಕ್ಯಾನ್ ಮಾಡಬೇಡಿ ಎಂದು ಸಲಹೆ ನೀಡಿದೆ. ಟ್ವೀಟ್ ಮಾಡಿರುವ SBI, ನೀವು ಕ್ಯೂಆರ್​ ಕೋಡ್ ಸ್ಕ್ಯಾನ್ ಮಾಡಿದಾಗ ನಿಮ್ಮ ಅಕೌಂಟ್​ಗೆ ಹಣ ಬರುವುದಿಲ್ಲ. ಬದಲಿಗೆ ನಿಮ್ಮ ಅಕೌಂಟ್​ನಿಂದ ಇಂತಿಷ್ಟು ಹಣ ಕಟ್​ ಆಗಿದೆ ಎಂಬ ಸಂದೇಶ ಬರುತ್ತದೆ. ಹಾಗಿದ್ದಾಗ ಎಲ್ಲೆಲ್ಲೋ ನೀಡುವ ಕ್ಯೂಆರ್ ಕೋಡ್​ ಸ್ಕ್ಯಾನ್ ಮಾಡಿ ಹಣ ಪಾವತಿಸುವುದು ಸರಿಯಲ್ಲ ಎಂದು ತಿಳಿಸಿದೆ.

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು