AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್​ ಪೇಮೆಂಟ್​ನಲ್ಲಿ ಕ್ಯೂಆರ್​ ಕೋಡ್​ ಸ್ಕ್ಯಾನ್ ಮಾಡಲೇಬೇಡಿ; ಗ್ರಾಹಕರನ್ನು ಎಚ್ಚರಿಸಿದ ಎಸ್​ಬಿಐ

ಆದರೆ ಇ-ಪೇಮೆಂಟ್​ ವಿಧಾನದಲ್ಲಿ ಅಪಾಯವೂ ಸಾಕಷ್ಟಿದೆ. ಅದೆಷ್ಟೋ ಗ್ರಾಹಕರು ಡಿಜಿಟಲ್​ ಪೇಮೆಂಟ್ ಮಾಡುವಾಗ ವಂಚನೆಗೆ ಒಳಗಾದ ಘಟನೆಗಳ ಬಗ್ಗೆ ಈಗಾಗಲೇ ಅನೇಕ ವರದಿಗಳನ್ನೂ ಓದಿದ್ದೇವೆ.

ಡಿಜಿಟಲ್​ ಪೇಮೆಂಟ್​ನಲ್ಲಿ ಕ್ಯೂಆರ್​ ಕೋಡ್​ ಸ್ಕ್ಯಾನ್ ಮಾಡಲೇಬೇಡಿ; ಗ್ರಾಹಕರನ್ನು ಎಚ್ಚರಿಸಿದ ಎಸ್​ಬಿಐ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: Apr 28, 2021 | 1:26 PM

ಡಿಜಿಟಲ್ ಪೇಮೆಂಟ್​ನಲ್ಲಿ ಈ ಕ್ಯೂಆರ್ ಕೋಡ್​ ಅತ್ಯಂತ ವ್ಯಾಪಕವಾಗಿ ಬಳಕೆಯಾಗುತ್ತದೆ. ಕ್ಯೂಆರ್​ (ತ್ವರಿತ ಪ್ರತಿಕ್ರಿಯೆ ಕೋಡ್​) ಕೋಡ್ ಒಂದು ರೀತಿಯ ಬಾರ್​ ಕೋಡ್​ ಆಗಿದ್ದು, ಡಾಟಾ ಸಂಗ್ರಹ ಮಾಡುತ್ತದೆ. ಈಗಂತೂ ಡಿಜಿಟಲ್​ ಪಾವತಿಯಲ್ಲಿ ಅತ್ಯಂತ ಹೆಚ್ಚಾಗಿ ಬಳಕೆಯಾಗುತ್ತದೆ. ಈ ಕೋಡ್​ ಸ್ಕ್ಯಾನ್ ಮಾಡುವ ಮೂಲಕ ಹಣ ಪಾವತಿ ಮಾಡಬಹುದಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್​ ಪಾವತಿ ಪ್ರಕ್ರಿಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕೊವಿಡ್ 19 ಸಾಂಕ್ರಾಮಿಕ ಬಂದ ಮೇಲಂತೂ ನಗದನ್ನು ಮುಟ್ಟಲು ಎಲ್ಲರೂ ಭಯಪಡುತ್ತಿದ್ದಾರೆ. ಹಾಗಾಗಿ ಡಿಜಿಟಲ್ ಪೇಮೆಂಟ್​ಗೆ ಮತ್ತಷ್ಟು ಒತ್ತು ಸಿಕ್ಕಿದೆ. ಇದನ್ನು ಇ-ಪೇಮೆಂಟ್​ ಎಂದೂ ಕರೆಯಲಾಗುತ್ತದೆ. ಅಂದರೆ ಇಲ್ಲಿ ಹಣವನ್ನು ಕೈಯಲ್ಲಿ ಮುಟ್ಟುವ ಅವಶ್ಯಕತೆ ಇರುವುದಿಲ್ಲ. ನೇರವಾಗಿ ಅಕೌಂಟ್​​ಗೇ ಹಣ ಪಾವತಿ ಮಾಡುವ ವಿಧಾನ ಇದು.

ಆದರೆ ಇ-ಪೇಮೆಂಟ್​ ವಿಧಾನದಲ್ಲಿ ಅಪಾಯವೂ ಸಾಕಷ್ಟಿದೆ. ಅದೆಷ್ಟೋ ಗ್ರಾಹಕರು ಡಿಜಿಟಲ್​ ಪೇಮೆಂಟ್ ಮಾಡುವಾಗ ವಂಚನೆಗೆ ಒಳಗಾದ ಘಟನೆಗಳ ಬಗ್ಗೆ ಈಗಾಗಲೇ ಅನೇಕ ವರದಿಗಳನ್ನೂ ಓದಿದ್ದೇವೆ. ಕ್ಯೂಆರ್ ಕೋಡ್​​ನ್ನು ಸ್ಕ್ಯಾನ್​ ಮಾಡಿ ಸಾವಿರಾರು ರೂಪಾಯಿ ಕಳೆದುಕೊಂಡವರೂ ಇದ್ದಾರೆ. ಹಾಗಾಗಿ ಬ್ಯಾಂಕ್​ಗಳು ಕೂಡ ಆಗಾಗ ಗ್ರಾಹಕರನ್ನು ಎಚ್ಚರಿಸುವ ಕೆಲಸ ಮಾಡುತ್ತವೆ. ಹಾಗೇ ಇತ್ತೀಚೆಗೆ ಎಸ್​ಬಿಐ ಕೂಡ ಮತ್ತೊಮ್ಮೆ ಗ್ರಾಹಕರಿಗೆ ಎಚ್ಚರಿಕೆ ನೀಡಿ, ಯಾರ್ಯಾರೋ ನೀಡುವ ಕ್ಯೂಆರ್​ ಕೋಡ್​ ಸ್ಕ್ಯಾನ್ ಮಾಡಬೇಡಿ ಎಂದು ಸಲಹೆ ನೀಡಿದೆ. ಟ್ವೀಟ್ ಮಾಡಿರುವ SBI, ನೀವು ಕ್ಯೂಆರ್​ ಕೋಡ್ ಸ್ಕ್ಯಾನ್ ಮಾಡಿದಾಗ ನಿಮ್ಮ ಅಕೌಂಟ್​ಗೆ ಹಣ ಬರುವುದಿಲ್ಲ. ಬದಲಿಗೆ ನಿಮ್ಮ ಅಕೌಂಟ್​ನಿಂದ ಇಂತಿಷ್ಟು ಹಣ ಕಟ್​ ಆಗಿದೆ ಎಂಬ ಸಂದೇಶ ಬರುತ್ತದೆ. ಹಾಗಿದ್ದಾಗ ಎಲ್ಲೆಲ್ಲೋ ನೀಡುವ ಕ್ಯೂಆರ್ ಕೋಡ್​ ಸ್ಕ್ಯಾನ್ ಮಾಡಿ ಹಣ ಪಾವತಿಸುವುದು ಸರಿಯಲ್ಲ ಎಂದು ತಿಳಿಸಿದೆ.

ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್