AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುಕುಳ ನೀಡಲೆಂದೇ ಇತ್ತು ಒಂದು ಕೊಠಡಿ, ಹರಿದ್ವಾರ ಪ್ರವಾಸದಲ್ಲೂ ಕಿರುಕುಳ: ಸ್ವಾಮಿ ಚೈತನ್ಯಾನಂದನ ವಿಚಾರಗಳು ಬಹಿರಂಗ

ದೆಹಲಿಯ ಶ್ರೀ ಶಾರದಾ ಇನ್​​ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್​​ಮೆಂಟ್ ನಿರ್ದೇಶಕ ​​ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿದ್ಯಾರ್ಥಿನಿಯರಿಗೆ ನೀಡಿರುವ ಕಿರುಕುಳ ಪ್ರಕರಣ ಬೆಳಕಿಗೆ ಬಂದಿದೆ. ಅವರನ್ನು ಪತ್ತೆ ಹಚ್ಚಲು ಪೊಲೀಸರು ಬೃಹತ್ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯ ಸಮಯದಲ್ಲಿ ಪ್ರಕರಣದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ.

ಕಿರುಕುಳ ನೀಡಲೆಂದೇ ಇತ್ತು ಒಂದು ಕೊಠಡಿ, ಹರಿದ್ವಾರ ಪ್ರವಾಸದಲ್ಲೂ ಕಿರುಕುಳ: ಸ್ವಾಮಿ ಚೈತನ್ಯಾನಂದನ ವಿಚಾರಗಳು ಬಹಿರಂಗ
ಸ್ವಾಮಿ ಚೈತನ್ಯಾನಂದ
ನಯನಾ ರಾಜೀವ್
|

Updated on: Sep 25, 2025 | 12:39 PM

Share

ನವದೆಹಲಿ, ಸೆಪ್ಟೆಂಬರ್ 25: ದೆಹಲಿಯ ಶ್ರೀ ಶಾರದಾ ಇನ್​​ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್​​ಮೆಂಟ್ ನಿರ್ದೇಶಕ ​​ಚೈತನ್ಯಾನಂದ ಸರಸ್ವತಿ(Chaitanyananda Saraswati) ಸ್ವಾಮೀಜಿ ವಿದ್ಯಾರ್ಥಿನಿಯರಿಗೆ ನೀಡಿರುವ ಕಿರುಕುಳ ಪ್ರಕರಣ ಬೆಳಕಿಗೆ ಬಂದಿದೆ. ಅವರನ್ನು ಪತ್ತೆ ಹಚ್ಚಲು ಪೊಲೀಸರು ಬೃಹತ್ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯ ಸಮಯದಲ್ಲಿ ಪ್ರಕರಣದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ದಕ್ಷಿಣ ದೆಹಲಿಯ ವಸಂತ್ ಕುಂಜ್‌ನಲ್ಲಿರುವ ಖಾಸಗಿ ನಿರ್ವಹಣಾ ಸಂಸ್ಥೆಯ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಆರೋಪಿ ಸ್ವಾಮಿ ಈ ಹಿಂದೆ ಪಾರ್ಥಸಾರಥಿ ಎಂದು ಕರೆಯಲ್ಪಡುತ್ತಿದ್ದರು , ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್-ರಿಸರ್ಚ್‌ನ ನಿರ್ದೇಶಕರಾಗಿದ್ದರು.

ಚಿತ್ರಹಿಂಸೆ ನೀಡಲು ಇತ್ತೊಂದು ಕೊಠಡಿ ಇಡಬ್ಲ್ಯೂಎಸ್ ವಿದ್ಯಾರ್ಥಿವೇತನದಲ್ಲಿ ಓದುತ್ತಿರುವ ದ್ಯಾರ್ಥಿನಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಸ್ಥೆಯ ಡೀನ್ ಮತ್ತು ಇಬ್ಬರು ಮಹಿಳಾ ಸಿಬ್ಬಂದಿಯೊಂದಿಗೆ ಶಾಮೀಲಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಅಧಿಕಾರಿಗಳ ಪ್ರಕಾರ, ಚೈತನ್ಯಾನಂದ ತನ್ನ ನೆಲಮಹಡಿಯ ಕಚೇರಿಯನ್ನು ಲೈಂಗಿಕ ಕಿರುಕುಳದ ತಾಣವನ್ನಾಗಿ ಪರಿವರ್ತಿಸಿದ್ದ. ಆರೋಪಿಗಳು ಸಂತ್ರಸ್ತರು ಮಾತನಾಡದಂತೆ ಅಥವಾ ಸಂಸ್ಥೆಯಿಂದ ಹೊರಹೋಗದಂತೆ ತಡೆಯಲು ಅವರ ದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಹರಿದ್ವಾರದಲ್ಲಿ ಕಿರುಕುಳ ಹೊಸ ಐಷಾರಾಮಿ ಕಾರು ಖರೀದಿಸಿದ ನಂತರ, ಆರೋಪಿ ವಿಶೇಷ ಪೂಜೆಯ ನೆಪದಲ್ಲಿ ಹಲವಾರು ವಿದ್ಯಾರ್ಥಿನಿಯರನ್ನು ಹರಿದ್ವಾರಕ್ಕೆ ಕರೆದೊಯ್ದಿದ್ದರು ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ. ಹಿಂತಿರುಗುವಾಗ ಕಾರಿನಲ್ಲಿ ಚೈತನ್ಯಾನಂದರ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ವಿದೇಶ ಪ್ರವಾಸದ ಆಮಿಷ ತೋರಿಸಿ ವಿದ್ಯಾರ್ಥಿನಿಯರ ಮಂಚಕ್ಕೆ ಕರೆಯುತ್ತಿದ್ದ ಸ್ವಾಮೀಜಿ! ದೆಹಲಿ ಚೈತನ್ಯಾನಂದ ಕಾಮಲೀಲೆ ಬಯಲು

ನನ್ನನ್ನು ಮಗು ಎಂದು ಕರೆಯುತ್ತಿದ್ದರು ಚೈತನ್ಯಾನಂದ ವಾಟ್ಸಾಪ್‌ನಲ್ಲಿ ಸಂದೇಶಗಳನ್ನು ಕಳುಹಿಸುವ ಮೂಲಕ ಕಿರುಕುಳ ನೀಡುತ್ತಿದ್ದರು ಎಂದು 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಆರೋಪಿಗಳು ತಮ್ಮನ್ನು ಬೇಬಿ ಎಂದು ಕರೆಯುತ್ತಿದ್ದರು ಎಂದು ವಿದ್ಯಾರ್ಥಿನಿಯೊಬ್ಬಳು ಆರೋಪಿಸಿದ್ದಾರೆ. ಬೇಬಿ ನಾನು ನಿನ್ನನ್ನು ಪ್ರೀತಿಸುತ್ತೇನೆ, ನೀನು ತುಂಬಾ ಸುಂದರವಾಗಿದ್ದೀಯ ಎಂದು ಹೇಳುತ್ತಿದ್ದರು ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.

ಭದ್ರತೆಯ ನೆಪದಲ್ಲಿ ಮಹಿಳಾ ಹಾಸ್ಟೆಲ್‌ನಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಮತ್ತು ವಿದೇಶ ಪ್ರವಾಸಗಳಿಗೆ ಚೈತನ್ಯಾನಂದ ಅವರೊಂದಿಗೆ ಹೋಗುವಂತೆ ಒತ್ತಡ ಹೇರಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!