AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀನಾಮೆ ಕೊಟ್ಟ ಬೆನ್ನಲ್ಲೇ ಕಾಂಗ್ರೆಸ್​​ಗೆ ಮುಜುಗರ ಉಂಟು ಮಾಡಿದ ನವಜೋತ್ ಸಿಂಗ್ ಸಿಧು; ಏನಿದು ಟ್ವೀಟ್ ಅರ್ಥ?

ನವಜೋತ್​ ಸಿಂಗ್ ಸಿಧು ಈ ಟ್ವೀಟ್​ ಕಾಂಗ್ರೆಸ್​ಗೆ ಸ್ವಲ್ಪ ಮುಜುಗರ ತಂದಿದೆ. ಇಲ್ಲಿ ಸಿಧು, ಮಾಫಿಯಾ ವಿರೋಧಿ ಆಡಳಿತಕ್ಕೆ ಮಾನ್​ ಮುನ್ನುಡಿ ಇಟ್ಟಿದ್ದಾರೆ ಎಂದು ಹೇಳಿದ್ದು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ.

ರಾಜೀನಾಮೆ ಕೊಟ್ಟ ಬೆನ್ನಲ್ಲೇ ಕಾಂಗ್ರೆಸ್​​ಗೆ ಮುಜುಗರ ಉಂಟು ಮಾಡಿದ ನವಜೋತ್ ಸಿಂಗ್ ಸಿಧು; ಏನಿದು ಟ್ವೀಟ್ ಅರ್ಥ?
ನವಜೋತ್ ಸಿಂಗ್ ಸಿಧು
TV9 Web
| Edited By: |

Updated on: Mar 17, 2022 | 3:03 PM

Share

ಪಂಜಾಬ್ ಕಾಂಗ್ರೆಸ್​ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನವಜೋತ್​ ಸಿಂಗ್ ಸಿಧು ಆಪ್​ ಮುಖ್ಯಮಂತ್ರಿ ಭಗವಂತ್ ಮಾನ್​ರನ್ನು ಹೊಗಳಿದ್ದಾರೆ. ಪಂಜಾಬ್​​ನಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್​ ಈ ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ನವಜೋತ್​ ಸಿಂಗ್ ಸಿಧು, ಇಲ್ಲಿನ ಜನರು ಬದಲಾವಣೆ ಬಯಸಿದ್ದಾರೆ.  ಹಾಗಾಗಿ ಆಪ್​ ಪಕ್ಷವನ್ನು ಆಯ್ಕೆ ಮಾಡಿಕೊಂಡು, ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಜನರ ಇಚ್ಛೆಯೇ ದೇವರ ಇಚ್ಛೆ ಎಂದು ಹೇಳಿದ್ದರು. ಇದೀಗ ಭಗವಂತ್​ ಮಾನ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಟ್ವೀಟ್​ ಮಾಡಿದ್ದಾರೆ.

ಯಾರಿಂದಲೂ ಏನನ್ನೂ ನಿರೀಕ್ಷಿಸದ ವ್ಯಕ್ತಿ ಅತ್ಯಂತ ಸಂತೋಷವಾಗಿರುತ್ತಾನೆ. ಇದೀಗ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್​ ಅವರು ಪಂಜಾಬ್​​ನಲ್ಲಿ ಮಾಫಿಯಾ-ವಿರೋಧಿ ಯುಗದ ಅನಾವರಣ ಮಾಡುವ ಭರವಸೆ ನೀಡಿದ್ದಾರೆ. ಈ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಹುಟ್ಟಿಕೊಂಡಿದೆ. ಈ ನಿರೀಕ್ಷೆಗಳನ್ನು ಅವರು ಈಡೇರಿಸುತ್ತಾರೆ ಎಂಬ ನಂಬಿಕೆ ನನಗೆ ಇದೆ. ಜನಪರ ನೀತಿಗಳೊಂದಿಗೆ ಪಂಜಾಬ್​​ನ್ನು ಪುನರುಜ್ಜೀವನದ ಹಾದಿಗೆ ವಾಪಸ್​ ತರುತ್ತಾರೆ ಎಂಬ ನಂಬಿಕೆಯಿದೆ ಎಂದು ಸಿಧು ಬರೆದುಕೊಂಡಿದ್ದಾರೆ.

ನವಜೋತ್​ ಸಿಂಗ್ ಸಿಧು ಈ ಟ್ವೀಟ್​ ಕಾಂಗ್ರೆಸ್​ಗೆ ಸ್ವಲ್ಪ ಮುಜುಗರ ತಂದಿದೆ. ಇಲ್ಲಿ ಸಿಧು, ಮಾಫಿಯಾ ವಿರೋಧಿ ಆಡಳಿತಕ್ಕೆ ಮಾನ್​ ಮುನ್ನುಡಿ ಇಟ್ಟಿದ್ದಾರೆ ಎಂದು ಹೇಳಿದ್ದು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ. ಕಳೆದ ಅವಧಿಯಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್​ ಅವಧಿಯಲ್ಲಿ ಏನಾಗಿತ್ತು? ಅವರ್ಯಾಕೆ ಮಾಫಿಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿಲ್ಲ ಎಂಬಿತ್ಯಾದಿ ಪ್ರಶ್ನೆಗಳೂ ಎದ್ದಿವೆ. ಈ ಟ್ವೀಟ್​​ಗೆ ಕಾಂಗ್ರೆಸ್​​ನಲ್ಲಿಯೇ ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭಿತ್ತಿಪತ್ರ ಹಿಡಿದು ರಾಗಿ ರಾಗಿ ಎಂದು ಜೋರಾಗಿ ಕೂಗಿದ ಶಾಸಕ ರಂಗನಾಥ್; ಸದನದಲ್ಲಿ ಗಾಂಭೀರ್ಯದಿಂದ ವರ್ತಿಸುವಂತೆ ಸ್ಪೀಕರ್ ಸೂಚನೆ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?