AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀನಾಮೆ ಕೊಟ್ಟ ಬೆನ್ನಲ್ಲೇ ಕಾಂಗ್ರೆಸ್​​ಗೆ ಮುಜುಗರ ಉಂಟು ಮಾಡಿದ ನವಜೋತ್ ಸಿಂಗ್ ಸಿಧು; ಏನಿದು ಟ್ವೀಟ್ ಅರ್ಥ?

ನವಜೋತ್​ ಸಿಂಗ್ ಸಿಧು ಈ ಟ್ವೀಟ್​ ಕಾಂಗ್ರೆಸ್​ಗೆ ಸ್ವಲ್ಪ ಮುಜುಗರ ತಂದಿದೆ. ಇಲ್ಲಿ ಸಿಧು, ಮಾಫಿಯಾ ವಿರೋಧಿ ಆಡಳಿತಕ್ಕೆ ಮಾನ್​ ಮುನ್ನುಡಿ ಇಟ್ಟಿದ್ದಾರೆ ಎಂದು ಹೇಳಿದ್ದು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ.

ರಾಜೀನಾಮೆ ಕೊಟ್ಟ ಬೆನ್ನಲ್ಲೇ ಕಾಂಗ್ರೆಸ್​​ಗೆ ಮುಜುಗರ ಉಂಟು ಮಾಡಿದ ನವಜೋತ್ ಸಿಂಗ್ ಸಿಧು; ಏನಿದು ಟ್ವೀಟ್ ಅರ್ಥ?
ನವಜೋತ್ ಸಿಂಗ್ ಸಿಧು
TV9 Web
| Edited By: |

Updated on: Mar 17, 2022 | 3:03 PM

Share

ಪಂಜಾಬ್ ಕಾಂಗ್ರೆಸ್​ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನವಜೋತ್​ ಸಿಂಗ್ ಸಿಧು ಆಪ್​ ಮುಖ್ಯಮಂತ್ರಿ ಭಗವಂತ್ ಮಾನ್​ರನ್ನು ಹೊಗಳಿದ್ದಾರೆ. ಪಂಜಾಬ್​​ನಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್​ ಈ ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ನವಜೋತ್​ ಸಿಂಗ್ ಸಿಧು, ಇಲ್ಲಿನ ಜನರು ಬದಲಾವಣೆ ಬಯಸಿದ್ದಾರೆ.  ಹಾಗಾಗಿ ಆಪ್​ ಪಕ್ಷವನ್ನು ಆಯ್ಕೆ ಮಾಡಿಕೊಂಡು, ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಜನರ ಇಚ್ಛೆಯೇ ದೇವರ ಇಚ್ಛೆ ಎಂದು ಹೇಳಿದ್ದರು. ಇದೀಗ ಭಗವಂತ್​ ಮಾನ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಟ್ವೀಟ್​ ಮಾಡಿದ್ದಾರೆ.

ಯಾರಿಂದಲೂ ಏನನ್ನೂ ನಿರೀಕ್ಷಿಸದ ವ್ಯಕ್ತಿ ಅತ್ಯಂತ ಸಂತೋಷವಾಗಿರುತ್ತಾನೆ. ಇದೀಗ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್​ ಅವರು ಪಂಜಾಬ್​​ನಲ್ಲಿ ಮಾಫಿಯಾ-ವಿರೋಧಿ ಯುಗದ ಅನಾವರಣ ಮಾಡುವ ಭರವಸೆ ನೀಡಿದ್ದಾರೆ. ಈ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಹುಟ್ಟಿಕೊಂಡಿದೆ. ಈ ನಿರೀಕ್ಷೆಗಳನ್ನು ಅವರು ಈಡೇರಿಸುತ್ತಾರೆ ಎಂಬ ನಂಬಿಕೆ ನನಗೆ ಇದೆ. ಜನಪರ ನೀತಿಗಳೊಂದಿಗೆ ಪಂಜಾಬ್​​ನ್ನು ಪುನರುಜ್ಜೀವನದ ಹಾದಿಗೆ ವಾಪಸ್​ ತರುತ್ತಾರೆ ಎಂಬ ನಂಬಿಕೆಯಿದೆ ಎಂದು ಸಿಧು ಬರೆದುಕೊಂಡಿದ್ದಾರೆ.

ನವಜೋತ್​ ಸಿಂಗ್ ಸಿಧು ಈ ಟ್ವೀಟ್​ ಕಾಂಗ್ರೆಸ್​ಗೆ ಸ್ವಲ್ಪ ಮುಜುಗರ ತಂದಿದೆ. ಇಲ್ಲಿ ಸಿಧು, ಮಾಫಿಯಾ ವಿರೋಧಿ ಆಡಳಿತಕ್ಕೆ ಮಾನ್​ ಮುನ್ನುಡಿ ಇಟ್ಟಿದ್ದಾರೆ ಎಂದು ಹೇಳಿದ್ದು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ. ಕಳೆದ ಅವಧಿಯಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್​ ಅವಧಿಯಲ್ಲಿ ಏನಾಗಿತ್ತು? ಅವರ್ಯಾಕೆ ಮಾಫಿಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿಲ್ಲ ಎಂಬಿತ್ಯಾದಿ ಪ್ರಶ್ನೆಗಳೂ ಎದ್ದಿವೆ. ಈ ಟ್ವೀಟ್​​ಗೆ ಕಾಂಗ್ರೆಸ್​​ನಲ್ಲಿಯೇ ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭಿತ್ತಿಪತ್ರ ಹಿಡಿದು ರಾಗಿ ರಾಗಿ ಎಂದು ಜೋರಾಗಿ ಕೂಗಿದ ಶಾಸಕ ರಂಗನಾಥ್; ಸದನದಲ್ಲಿ ಗಾಂಭೀರ್ಯದಿಂದ ವರ್ತಿಸುವಂತೆ ಸ್ಪೀಕರ್ ಸೂಚನೆ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ