ಅಕ್ಟೋಬರ್ 17 ರಂದು ಹರ್ಯಾಣದಲ್ಲಿ ಹೊಸ ಬಿಜೆಪಿ ಸರ್ಕಾರ ಪ್ರಮಾಣ ವಚನ ಸ್ವೀಕಾರ; ಭಾಗಿಯಾಗಲಿದ್ದಾರೆ ಮೋದಿ

ಪ್ರಧಾನಿ ನರೇಂದ್ರ ಮೋದಿ, ಹಿರಿಯ ಬಿಜೆಪಿ ನಾಯಕರು ಮತ್ತು ಇತರ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪಂಚಕುಲ ಸೆಕ್ಟರ್ 5ರ ದಸರಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಅಕ್ಟೋಬರ್ 17 ರಂದು ಹರ್ಯಾಣದಲ್ಲಿ ಹೊಸ ಬಿಜೆಪಿ ಸರ್ಕಾರ ಪ್ರಮಾಣ ವಚನ ಸ್ವೀಕಾರ; ಭಾಗಿಯಾಗಲಿದ್ದಾರೆ ಮೋದಿ
ನಯಾಬ್ ಸಿಂಗ್ ಸೈನಿ- ಮೋದಿ
Follow us
|

Updated on: Oct 12, 2024 | 1:58 PM

ದೆಹಲಿ ಅಕ್ಟೋಬರ್ 12: ಅಕ್ಟೋಬರ್ 17 ರಂದು ಪಂಚಕುಲದಲ್ಲಿ ಹರ್ಯಾಣದ (Haryana) ಹೊಸ ಬಿಜೆಪಿ (BJP) ಸರ್ಕಾರದ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ, ಹಿರಿಯ ಬಿಜೆಪಿ ನಾಯಕರು ಮತ್ತು ಇತರ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪಂಚಕುಲ ಸೆಕ್ಟರ್ 5ರ ದಸರಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಬಿಜೆಪಿ ಇನ್ನೂ ತಮ್ಮ ಮುಖ್ಯಮಂತ್ರಿ ಆಯ್ಕೆಯನ್ನು ಘೋಷಿಸಿಲ್ಲ, ಆದರೆ ವರದಿಗಳು ಪಕ್ಷವು ನಯಾಬ್ ಸಿಂಗ್ ಸೈನಿ ಅವರನ್ನೇ ಸಿಎಂ ಮಾಡಲಿದೆ ಎಂದು ಹೇಳುತ್ತದೆ. ಸೈನಿ ಅವರು ಮಾರ್ಚ್‌ನಲ್ಲಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಹರ್ಯಾಣ ಮುಖ್ಯಮಂತ್ರಿಯಾಗಿ ಬದಲಾಯಿಸಿದ್ದರು ಮತ್ತು ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಬಿಜೆಪಿ ಈ ಚುನಾವಣೆಯಲ್ಲಿ 48 ಸ್ಥಾನಗಳನ್ನು ಗಳಿಸಿದ್ದು ಇದು ಕಾಂಗ್ರೆಸ್‌ಗಿಂತ 11 ಹೆಚ್ಚು. ಜನತಾ ಜನನಾಯಕ್ ಪಕ್ಷ (ಜೆಜೆಪಿ) ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಹೀನಾಯವಾಗಿ ಸೋತಿತು ಮತ್ತು ಐಎನ್‌ಎಲ್‌ಡಿ ಕೇವಲ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ 10 ವರ್ಷಗಳ ಆಡಳಿತ-ವಿರೋಧಿ ಅಲೆ ಮತ್ತು ಎಕ್ಸಿಟ್ ಪೋಲ್‌ ಭವಿಷ್ಯವನ್ನು ತಲೆಕೆಳಗಾಗಿಸಿವೆ.

ಬಿಜೆಪಿಯ ಹರ್ಯಾಣ ಯೋಜನೆ

ಬಿಜೆಪಿಯ ಆಂತರಿಕ ವಲಯಗಳ ಪ್ರಕಾರ ರಾಜ್ಯದಲ್ಲಿನ ಆಡಳಿತ ವಿರೋಧಿಯನ್ನು ಎದುರಿಸಲು 14 ಹಾಲಿ ಶಾಸಕರನ್ನು ಕೈಬಿಡುವ ನಿರ್ಧಾರವೂ ಸೇರಿದೆ. ಪಕ್ಷವು 27 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಅವರಲ್ಲಿ 15 ಮಂದಿ ಗೆಲುವು ಸಾಧಿಸಿದ್ದಾರೆ. ಅದರ ಸೀಟು ಹಂಚಿಕೆ ಮತ್ತು ಮತ ಹಂಚಿಕೆ ಎರಡೂ, ಕ್ರಮವಾಗಿ 53.3% ಮತ್ತು 39.9% ರಾಜ್ಯದ ಯಾವುದೇ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಇದುವರೆಗೆ ಅತ್ಯಧಿಕವಾಗಿದೆ.

ಇದನ್ನೂ ಓದಿ: ಯುಪಿಯ ಬಿಸ್ರಖ್ ಗ್ರಾಮದಲ್ಲಿ ದಸರಾ ಹಬ್ಬಕ್ಕೆ ಇಲ್ಲ ಸಂತಸ; ಇಲ್ಲಿ ರಾವಣನ ಸಾವಿಗೆ ಸಂತಾಪ

ಪಕ್ಷವು ಗುಂಪುಗಾರಿಕೆ ಮತ್ತು ಅಸಮಾಧಾನಗೊಂಡ ಕಾರ್ಯಕರ್ತರೊಂದಿಗೆ ಸೆಣಸುತ್ತಿರುವ ಕಾರಣ ಲೋಕಸಭೆಯ ತೀರ್ಪು ಎಚ್ಚರಿಕೆಯ ಗಂಟೆಗಳನ್ನು ಬಾರಿಸಿದೆ ಎಂದು ಬಿಜೆಪಿ ಮೂಲಗಳು ಹೇಳುತ್ತವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 10 ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ಗೆದ್ದು 44 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ನಂತರ, ಸರ್ಕಾರವು ನೆಲದ ವಾಸ್ತವತೆಗೆ ಎಚ್ಚೆತ್ತುಕೊಂಡು ಸರಿಪಡಿಸುವ ಕ್ರಮಗಳನ್ನು ಕೈಗೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಮೈಸೂರು ದಸರಾ 2024: ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ
ಮೈಸೂರು ದಸರಾ 2024: ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ
ಹತ್ತನೇ ಚಾಮರಾಜ್ ಒಡೆಯರ್ ಕಾಲದಿಂದ ಅಂಬಾರಿ ಇತಿಹಾಸ ಆರಂಭ: ಡಾ ಅಯ್ಯಂಗಾರ್
ಹತ್ತನೇ ಚಾಮರಾಜ್ ಒಡೆಯರ್ ಕಾಲದಿಂದ ಅಂಬಾರಿ ಇತಿಹಾಸ ಆರಂಭ: ಡಾ ಅಯ್ಯಂಗಾರ್
ಮೈಸೂರು ದಸರಾ 2024: ಜಂಬೂಸವಾರಿಗೆ ಸಿದ್ದತೆಯನ್ನು ಲೈವ್ ಆಗಿ ನೋಡಿ​
ಮೈಸೂರು ದಸರಾ 2024: ಜಂಬೂಸವಾರಿಗೆ ಸಿದ್ದತೆಯನ್ನು ಲೈವ್ ಆಗಿ ನೋಡಿ​
ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್
ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್
ವಿಜಯದಶಮಿಯ ದಿನವಾದ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ವಿಜಯದಶಮಿಯ ದಿನವಾದ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ