AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand New CM: ಜಾರ್ಖಂಡ್​​​ನ 12ನೇ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಪ್ರಮಾಣವಚನ ಸ್ವೀಕಾರ

Champai Soren: ಜಾರ್ಖಂಡ್​​​ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮೇಲೆ ಭೂಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪವಿದ್ದು, ಈ ಕಾರಣಕ್ಕೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Jharkhand New CM: ಜಾರ್ಖಂಡ್​​​ನ 12ನೇ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಪ್ರಮಾಣವಚನ ಸ್ವೀಕಾರ
TV9 Web
| Edited By: |

Updated on:Feb 02, 2024 | 2:07 PM

Share

ರಾಂಚಿ, ಫೆ.2: ಜಾರ್ಖಂಡ್​​​ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೆನ್ (Champai Soren) ಅವರು ಇಂದು (ಫೆ.2) ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಂಚಿಯ ರಾಜಭವನದ ದರ್ಬಾರ್ ಹಾಲ್‌ ಈ ಕಾರ್ಯಕ್ರಮ ನಡೆದಿದ್ದು, ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮೇಲೆ ಭೂಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪವಿದ್ದು, ಅವರು ಈಗಾಗಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕಾರಣದಿಂದ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇನ್ನು ಮುಖ್ಯಮಂತ್ರಿ ಚಂಪೈ ಸೊರೆನ್ ಜತೆಗೆ ಕಾಂಗ್ರೆಸ್ ನಾಯಕ ಅಲಂಗೀರ್ ಆಲಂ ಮತ್ತು ಆರ್‌ಜೆಡಿಯ ಸತ್ಯಾನಂದ ಭೋಕ್ತಾ ಕೂಡ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಚಂಪೈ ಸೊರೆನ್ ಅವರು ಪ್ರಮಾಣ ವಚನಕ್ಕೂ ಮುನ್ನ ಜ.31ರಂದು ರಾಜ್ಯಪಾಲರನ್ನು ಭೇಟಿ ಮಾಡಲು ಅವಕಾಶ ನೀಡಬೇಕು ಎಂದು ಪತ್ರ ಬರೆದಿದ್ದರು. ನಂತರ ರಾಜ್ಯಪಾಲರು ಮಾಧ್ಯಹ್ನ 3.00 ಗಂಟೆಗೆ ಭೇಟಿ ಮಾಡುವಂತೆ ಹೇಳಿದರು. ಒಟ್ಟು 45 ಶಾಸಕರ ಜತೆಗೆ ರಾಜ್ಯಪಾಲರನ್ನು ಭೇಟಿ ಮಾಡಿ. ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಕೇಳಿದ್ದರೆ. ಅದರಂತೆ ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ.

ಇನ್ನು ಹೇಮಂತ್ ಸೊರೆನ್ ಅವರ ಮೇಲೆ ಭೂ- ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಬಗ್ಗೆ ಈಗಾಗಲೇ ಇಡಿ ರಾಂಚಿಯಲ್ಲಿರುವಪಿಎಂಎಲ್‌ಎ ನ್ಯಾಯಾಲಯಕ್ಕೆ ಸಾಕ್ಷ್ಯಗಳನ್ನು ನೀಡಲಾಗಿದೆ. ಹೇಮಂತ್ ಸೊರೆನ್ ಅವರನ್ನು ತನಿಖೆ ನಡೆಸಬೇಕಾಗಿದೆ. ಈ ಕಾರಣಕ್ಕಾಗಿ 10 ದಿನಗಳ ನ್ಯಾಯಂಗ ಬಂಧನದಲ್ಲಿ ಇರಿಸಬೇಕು ಎಂದು ಇಡಿ ಕೋರ್ಟ್​​ಗೆ ಮನವಿ ಮಾಡಿತ್ತು. ಆದರೆ ಇದಕ್ಕೆ ಒಪ್ಪದ ಕೋರ್ಟ್​​​​​ ಒಂದು ದಿನದ ಮಟ್ಟಿಗೆ ಅವರನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಿದೆ. ಈ ಬಗ್ಗೆ ಇಂದು ವಿಚಾರಣೆ ನಡೆಸುವುದಾಗಿ ಕೋರ್ಟ್​​​​​​ ಗುರುವಾರ ಹೇಳಿದೆ.

ಇದನ್ನೂ ಓದಿ: ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್​​​ಗೆ ನ್ಯಾಯಾಂಗ ಬಂಧನ

ಇನ್ನು ಇಡಿ ಸಲ್ಲಿಸಿದ ವರದಿ ಪ್ರಕಾರ ಮುಖ್ಯಮಂತ್ರಿ ಕಚೇರಿಯಲ್ಲಿ ದಲ್ಲಾಳಿಗಳು ಮತ್ತು ಉದ್ಯಮಿಗಳು ಅಕ್ರಮವಾಗಿ ನಕಲಿ ದಾಖಲೆಗಳನ್ನು ಮಾಡುವುದು ಹಾಗೂ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಹಲವು ಸರ್ಕಾರಿ ಭೂಮಿಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂದು ಹೇಳಿತ್ತು. ಇದೀಗ ಈ ವಿಚಾರವಾಗಿ ಇಡಿ ತನಿಖೆ ನಡೆಸುತ್ತಿದೆ. ಇದಕ್ಕಾಗಿ ಹೇಮಂತ್ ಸೊರೆನ್ ಅವರಿಗೆ 10 ದಿನಗಳ ಕಾಲ ನ್ಯಾಯಂಗ ಬಂಧನ ವಿಧಿಸಬೇಕು ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:26 pm, Fri, 2 February 24

Follow Us
Web contact
Web contact

TV9 Kannada

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ