AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Cities: ಭಾರತದಲ್ಲಿ 8 ಹೊಸ ನಗರಗಳ ನಿರ್ಮಾಣಕ್ಕೆ ಕೇಂದ್ರ ಚಿಂತನೆ, ಈ ನಿರ್ಧಾರ ಏಕೆ?

ದೇಶದಲ್ಲಿ ಅಸ್ತಿತ್ವದಲ್ಲಿರುವ ನಗರಗಳ ಮೇಲಿನ ಜನಸಂಖ್ಯೆಯ ಹೊರೆಯನ್ನು ಕಡಿಮೆ ಮಾಡಲು 8 ಹೊಸ ನಗರಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಚಿಂತನೆ ನಡೆಸಿದೆ

New Cities: ಭಾರತದಲ್ಲಿ 8 ಹೊಸ ನಗರಗಳ ನಿರ್ಮಾಣಕ್ಕೆ ಕೇಂದ್ರ ಚಿಂತನೆ, ಈ ನಿರ್ಧಾರ ಏಕೆ?
ನಗರಗಳುImage Credit source: Timesnow
ನಯನಾ ರಾಜೀವ್
|

Updated on: May 19, 2023 | 10:48 AM

Share

ದೇಶದಲ್ಲಿ ಅಸ್ತಿತ್ವದಲ್ಲಿರುವ ನಗರಗಳ ಮೇಲಿನ ಜನಸಂಖ್ಯೆಯ ಹೊರೆಯನ್ನು ಕಡಿಮೆ ಮಾಡಲು 8 ಹೊಸ ನಗರಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಚಿಂತನೆ ನಡೆಸಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ಈ ಮಾಹಿತಿ ನೀಡಿದ್ದಾರೆ. ಇಂದೋರ್‌ನಲ್ಲಿ ನಡೆದ ಅರ್ಬನ್ 20 (ಯು20) ಸಭೆಯಲ್ಲಿ ಇಲಾಖೆಯ ಜಿ 20 ಘಟಕದ ನಿರ್ದೇಶಕ ಎಂ.ಬಿ.ಸಿಂಗ್ ಪಿಟಿಐಗೆ ತಿಳಿಸಿದರು. 15 ನೇ ಹಣಕಾಸು ಆಯೋಗದ ವರದಿಯು ದೇಶದಲ್ಲಿ ಹೊಸ ನಗರಗಳ ಅಭಿವೃದ್ಧಿಗೆ ಶಿಫಾರಸು ಮಾಡಿದೆ. ಇದರ ನಂತರ, ರಾಜ್ಯಗಳು 26 ಹೊಸ ನಗರಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳುಹಿಸಿದ್ದು, ಈ ಪೈಕಿ ಎಂಟು ಹೊಸ ನಗರಗಳನ್ನು ವಿಂಗಡಿಸಿದ ನಂತರ ಪರಿಗಣಿಸಲಾಗುತ್ತದೆ.

ಯೋಜನೆಯನ್ನು ಪರಿಶೀಲಿಸಿದ ನಂತರ, ಹೊಸ ನಗರಗಳ ಸ್ಥಳಗಳು ಮತ್ತು ಅವುಗಳ ಅಭಿವೃದ್ಧಿಯ ಸಮಯದ ಚೌಕಟ್ಟಿನ ಬಗ್ಗೆ ಸರ್ಕಾರವು ಔಪಚಾರಿಕ ಘೋಷಣೆ ಮಾಡಲಿದೆ ಎಂದು ಸಿಂಗ್ ಹೇಳಿದರು. ನಾವು ದೇಶದಲ್ಲಿ ಹೊಸ ನಗರಗಳನ್ನು ಸ್ಥಾಪಿಸಬೇಕಾಗಿದೆ, ಏಕೆಂದರೆ ಅಸ್ತಿತ್ವದಲ್ಲಿರುವ ನಗರಗಳು ನಾಗರಿಕರ ಅಗತ್ಯಗಳ ಹೊರೆಯನ್ನು ಹೊರಲು ಸಾಧ್ಯವಾಗುತ್ತಿಲ್ಲ.

ಈಗಿರುವ ನಗರಗಳು ನಾಗರಿಕರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ನಾವು ದೇಶದಲ್ಲಿ ಹೊಸ ನಗರಗಳನ್ನು ನಿರ್ಮಿಸಬೇಕಾದ ಅನಿವಾರ್ಯತೆ ಇದೆ. ಅಸ್ತಿತ್ವದಲ್ಲಿರುವ ನಗರಗಳು ಅವ್ಯವಸ್ಥಿತ ರೀತಿಯಲ್ಲಿ ವಿಸ್ತರಣೆಗೊಳ್ಳುತ್ತಿವೆ. ಇದು ಮೂಲಭೂತ ಯೋಜನೆಗಳ ಮೇಲೂ ಪರಿಣಾಮ ಬೀರುತ್ತಿದೆ.

ಹೊಸ ನಗರಗಳ ಸ್ಥಾಪನೆಗೆ ಆರ್ಥಿಕ ಮಾರ್ಗಸೂಚಿಯನ್ನು ಅಂತಿಮಗೊಳಿಸಿಲ್ಲ, ಆದರೆ, ಕೇಂದ್ರ ಸರ್ಕಾರವು ಯೋಜನೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು. ಹೊಸ ನಗರವನ್ನು ಅಭಿವೃದ್ಧಿಪಡಿಸಿದ್ದೇ ಆದಲ್ಲಿ, ಕನಿಷ್ಠ 200 ಕಿ.ಮೀ ವ್ಯಾಪ್ತಿಯಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ ಎಂದರು.

2050 ರ ವೇಳೆಗೆ ವಿಶ್ವದ ಜನಸಂಖ್ಯೆಯು 9.7 ಶತಕೋಟಿಗೆ ಹೆಚ್ಚಾಗುತ್ತದೆ. ಮುಂದಿನ 8 ವರ್ಷಗಳಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಲಿದೆ ಎಂದು ವರದಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?