AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಪಾಂತರಗೊಂಡ ಕೊರೊನಾ ವೈರಸ್ ಮಾರಕವಲ್ಲ: ಭಾರತ ಮೂಲದ ಅಮೆರಿಕ ವೈದ್ಯ ವಿವೇಕ್​ ಮೂರ್ತಿ ಸ್ಪಷ್ಟನೆ

ವಾಷಿಂಗ್ಟನ್​: ಇಂಗ್ಲೆಡ್​ನಲ್ಲಿ ಕೊರೊನಾ ವೈರಸ್​ ರೂಪಾಂತರಗೊಂಡಿರುವ ವಿಚಾರ ಸಾಕಷ್ಟು ಆತಂಕ ಸೃಷ್ಟಿಸಿದೆ. ಈ ಆತಂಕವನ್ನು ಭಾರತ ಮೂಲದ ಅಮೆರಿಕ ವೈದ್ಯ ವಿವೇಕ್​ ಮೂರ್ತಿ ಅವರು ದೂರ ಮಾಡಿದ್ದಾರೆ. ರೂಪಾಂತರಗೊಂಡಿರುವ ವೈರಸ್​ನಿಂದ ಯಾವುದೇ ಹಾನಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಂಗ್ಲೆಂಡ್​ನಲ್ಲಿ ಕಾಣಿಸಿಕೊಂಡಿರುವ ರೂಪಾಂತರ ಕೊರೊನಾ ವೇಗವಾಗಿ ಹರಡಲಿದೆ. ಆದರೆ, ಇದು ಮಾರಕವಲ್ಲ ಎಂದು ಡಾ.ವಿವೇಕ್ ಹೇಳಿದ್ದಾರೆ. ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ವೈರಸ್ ತುಂಬಾನೇ ಅಪಾಯಕಾರಿ ಎನ್ನುವ ವರದಿಗಳು ಮಾಧ್ಯಮಗಳಲ್ಲಿ ಹರಿದಾಡಿದ್ದವು. ಈ ಬೆನ್ನಲ್ಲೇ ವೈದ್ಯರಿಂದ ಸ್ಪಷ್ಟನೆ ಸಿಕ್ಕಿದ್ದು, ನಿಟ್ಟುಸಿರು ಬಿಡುವಂತಾಗಿದೆ. […]

ರೂಪಾಂತರಗೊಂಡ ಕೊರೊನಾ ವೈರಸ್ ಮಾರಕವಲ್ಲ: ಭಾರತ ಮೂಲದ ಅಮೆರಿಕ ವೈದ್ಯ ವಿವೇಕ್​ ಮೂರ್ತಿ ಸ್ಪಷ್ಟನೆ
ವೈದ್ಯ ವಿವೇಕ್​ ಮೂರ್ತಿ
ರಾಜೇಶ್ ದುಗ್ಗುಮನೆ
| Edited By: |

Updated on:Dec 21, 2020 | 9:50 PM

Share

ವಾಷಿಂಗ್ಟನ್​: ಇಂಗ್ಲೆಡ್​ನಲ್ಲಿ ಕೊರೊನಾ ವೈರಸ್​ ರೂಪಾಂತರಗೊಂಡಿರುವ ವಿಚಾರ ಸಾಕಷ್ಟು ಆತಂಕ ಸೃಷ್ಟಿಸಿದೆ. ಈ ಆತಂಕವನ್ನು ಭಾರತ ಮೂಲದ ಅಮೆರಿಕ ವೈದ್ಯ ವಿವೇಕ್​ ಮೂರ್ತಿ ಅವರು ದೂರ ಮಾಡಿದ್ದಾರೆ. ರೂಪಾಂತರಗೊಂಡಿರುವ ವೈರಸ್​ನಿಂದ ಯಾವುದೇ ಹಾನಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇಂಗ್ಲೆಂಡ್​ನಲ್ಲಿ ಕಾಣಿಸಿಕೊಂಡಿರುವ ರೂಪಾಂತರ ಕೊರೊನಾ ವೇಗವಾಗಿ ಹರಡಲಿದೆ. ಆದರೆ, ಇದು ಮಾರಕವಲ್ಲ ಎಂದು ಡಾ.ವಿವೇಕ್ ಹೇಳಿದ್ದಾರೆ. ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ವೈರಸ್ ತುಂಬಾನೇ ಅಪಾಯಕಾರಿ ಎನ್ನುವ ವರದಿಗಳು ಮಾಧ್ಯಮಗಳಲ್ಲಿ ಹರಿದಾಡಿದ್ದವು. ಈ ಬೆನ್ನಲ್ಲೇ ವೈದ್ಯರಿಂದ ಸ್ಪಷ್ಟನೆ ಸಿಕ್ಕಿದ್ದು, ನಿಟ್ಟುಸಿರು ಬಿಡುವಂತಾಗಿದೆ.

ಕೊರೊನಾಗೆ ಈಗಾಗಲೇ ಔಷಧ ಕಂಡು ಹಿಡಿಯಲಾಗಿದೆ. ಆದರೆ, ಕೊರೊನಾ ರೂಪ ಬದಲಿಸಿದ್ದರಿಂದ ಅಭಿವೃದ್ಧಿಪಡಿಸಿರುವ ಔಷಧ ಪರಿಣಾಮಕಾರಿಯಾಗದು ಎಂದು ಹೇಳಲಾಗಿತ್ತು. ಈ ಬಗ್ಗೆಯೂ ಡಾ. ವಿವೇಕ್​ ಮೂರ್ತಿ ಸ್ಪಷ್ಟನೆ ನೀಡಿದ್ದಾರೆ. ಈಗ ಅಭಿವೃದ್ಧಿಪಡಿಸಿರುವ ಲಸಿಕೆ ರೂಪಾಂತರಗೊಂಡಿರುವ ಕೊರೊನಾ ಮೇಲೆ ಪರಿಣಾಮಕಾರಿಯಾಗದು ಎಂದು ಹೇಳುವುದಕ್ಕೇ ಯಾವುದೇ ಸಾಕ್ಷ್ಯ ಇಲ್ಲ. ಹೀಗಾಗಿ, ಈ ಸುದ್ದಿಗಳನ್ನು ನಂಬಬೇಡಿ ಎಂದು ಕೋರಿದ್ದಾರೆ.

ರೂಪಾಂತರಗೊಂಡಿರುವ ಕೊರೊನಾ ವೈರಸ್​ ವೇಗವಾಗಿ ಹರಡಲಿದೆ. ಆದರೆ, ಸರಿಯಾಗಿ ಕೈ ತೊಳೆದುಕೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡು, ಸದಾ ಮಾಸ್ಕ್​ ಧರಿಸಿದ್ದರೆ ಕೊರೊನಾದಿಂದ ದೂರ ಉಳಿಯಬಹುದು ಎನ್ನುವ ಕಿವಿಮಾತನ್ನು ಡಾ.ವಿವೇಕ್​ ಹೇಳಿದ್ದಾರೆ.

ಬರಾಕ್ ಒಬಾಮಾ ಅಮೇರಿಕದ ಅಧ್ಯಕ್ಷರಾಗಿದ್ದಾಗ ಸರ್ಜನ್ ಜನರಲ್ ಆಗಿ ಹೆಸರು ಮಾಡಿದ್ದ ವಿವೇಕ್ ಮೂರ್ತಿ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಹೊಸದಾಗಿ ಅಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ಜೋ ಬೈಡನ್ ಅವರು ರಚಿಸಿರುವ ಕೊರೊನಾ ಟಾಸ್ಕ್​ ಫೋರ್ಸ್​ನಲ್ಲಿ ಡಾ.ವಿವೇಕ್ ಮೂರ್ತಿ ಕೂಡ ಇದ್ದಾರೆ.

ಬ್ರಿಟನ್​ ವಿಮಾನ ಹಾರಾಟ ರದ್ದು ನಾಳೆ ರಾತ್ರಿಯಿಂದ ಬ್ರಿಟನ್ ವಿಮಾನ ಸಂಚಾರಕ್ಕೆ ಬ್ರೇಕ್ ಬೀಳಲಿದೆ. ಡಿಸೆಂಬರ್ 31ರವರೆಗೆ ಬ್ರಿಟನ್ ವಿಮಾನ ಸಂಚಾರಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ. ಭಾರತ ಮಾತ್ರವಲ್ಲದೆ 30 ದೇಶಗಳು ಬ್ರಿಟನ್​ಗೆ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸಿವೆ. ನಾಳೆಯೊಳಗೆ ಬ್ರಿಟನ್​ನಿಂದ ಬರುವವರು ಕಡ್ಡಾಯವಾಗಿ RTPCR​ ಟೆಸ್ಟ್​ ಮಾಡಿಸಿಕೊಳ್ಳಬೇಕು ಎಂದು ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಆದೇಶ ಹೊರಡಿಸಿದೆ.ಬ್ರಿಟನ್​ನಲ್ಲಿ ಹೊಸ ರೂಪಾಂತರಗೊಂಡ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಿಂದಾಗಿ ಈ ಕ್ರಮ ಜರುಗಿಸಲಾಗಿದೆ.

ವೇಗವಾಗಿ ಹರಡುವ ಹೊಸ ಪ್ರಭೇದದ ಕೊರೊನಾ ವೈರಾಣು ಪತ್ತೆ: ಎಚ್ಚರಿಕೆ ವಹಿಸಲು ಜನರಿಗೆ ಸುಧಾಕರ್ ಮನವಿ

Published On - 9:49 pm, Mon, 21 December 20

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ